ಭಾನುವಾರ, ಜೂನ್ 22, 2008

ಮನೆ ಮದ್ದು-ಮುಂದುವರಿದದ್ದು

ಮುಂದುವರೆದದ್ದು
ಕಫ ಮತ್ತು ಕೆಮ್ಮು: ಹಸಿ ಶುಂಠಿಯರಸ ಮತ್ತು ವೀಳ್ಯೆದೆಲೆಯರಸವನ್ನು ಒಟ್ಟುಗೂಡಿಸಿ ಅದರಲ್ಲಿ ಜೇನುತುಪ್ಪವನ್ನು ಬೆರೆಸಿ ತಿನ್ನಬೇಕು.
ಶೀಘ್ರ ವಾಸಿಯಾಗುತ್ತದೆ.
ಸ್ತನದಲ್ಲಿ ಹಾಲು ತುಂಬಿಕೊಂಡು ಊದಿಕೊಂಡರೆ: ಪೂರ್ಣ ಅರಳಿದ ಹಿಡಿಮಲ್ಲಿಗೆ ಹೂಗಳನ್ನು ಎರಡೂ ಸ್ತನಗಳ ಮೇಲೆ ಇಟ್ಟು ಕಟ್ಟಬೇಕು ಅಥವಾ
ಹಸಿ ವೀಳ್ಯೆದೆಲೆ ಕಟ್ಟಿದರೂ ನಡೆಯುತ್ತದೆ.
ಅಜೀರ್ಣವಾದಾಗ: 1)-ಸ್ವಲ್ಪ ಓಮಕಾಳು(ಅಜವಾನ) ಸೇವಿಸಿ ಅಥವಾ ಅದರ ಕಷಾಯವನ್ನು ಕುಡಿಯಬೇಕು.
2)-ನೀರಿಗೆ ಒಂದು ಟೀ ಚಮಚ ನಿಂಬೆರಸ ಮತ್ತು ಒಂದು ಚಿಟಿಕೆ ಅಡುಗೆ ಸೋಡ ಬೆರೆಸಿ ಸೇವಿಸಿ.
ವಾಂತಿಯಾದಾಗ: ನಿಂಬೆಹಣ್ಣನ್ನು ಅರ್ಧ ಹೆಚ್ಚಿ ಅರ್ಧ ಹೋಳಿನಲ್ಲಿ ಸಕ್ಕರೆ ಹಾಕಿ ಕಾಯಿಸಿ ಸೇವಿಸಬೇಕು.
ಗಂಟಲು ನೋವು: ಸ್ವಲ್ಪ ತಿನ್ನುವ ಸುಣ್ಣಕ್ಕೆ ಅಷ್ಟೇ ಪ್ರಮಾಣದಲ್ಲಿ ಜೇನುತುಪ್ಪವನ್ನು ಸೇರಿಸಿ ಚೆನ್ನಾಗಿ ಕದಡಬೇಕು. ಅದನ್ನು ಗಂಟಲಿನ ಹೊರಭಾಗಕ್ಕೆ ಚೆನ್ನಾಗಿ ಲೇಪಿಸಬೇಕು.

ಶನಿವಾರ, ಜೂನ್ 21, 2008

ಮನೆ ಮದ್ದು-1

ಮನೆ ಮದ್ದು-1
ಹೊಟ್ಟೆನೋವಿಗೆ: ಬೆಲ್ಲದಲ್ಲಿ ಕಾಳುಮೆಣಸಿನಪುಡಿ ಬೆರೆಸಿ ಸೇವಿಸಿದರೆ ನೋವು ಶಮನವಾಗುತ್ತದೆ
ಒಣಕೆಮ್ಮು: ಬೆಲ್ಲದಲ್ಲಿ ಅರಿಶಿಣಪುಡಿ ಸೇರಿಸಿ ಸೇವಿಸಿದರೆ ಒಣಕೆಮ್ಮು ನಿವಾರಣೆಯಾಗಿ ಗಂಟಲಿಗೆ ಹಿತವಾಗಿರುತ್ತದೆ.

ಮಂಗಳವಾರ, ಜೂನ್ 10, 2008

ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿ

09-6-2008 ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿ

ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿಯನ್ನೇ ಯಾವಾಗಲೂ ಊಟಕ್ಕೆ ಉಪಯೋಗಿಸಿ ಆನಂದವನ್ನು ಪಡೆಯಿರಿ. ಈ ಅಕ್ಕಿಗೆ ಆಡು ಭಾಷೆಯಲ್ಲಿ ಕೆಂಪು ಮುಂಡಗ ಅಕ್ಕಿ ಅಥವಾ ಕಜ್ಜಾಯ ಅಕ್ಕಿ ಎಂದೂ ಕರೆಯುತ್ತಾರೆ. ಈ ಅಕ್ಕಿಯಲ್ಲಿ ಬೇಕಾದಷ್ಟು ಪೌಷ್ಟಿಕಾಂಶಗಳು ಇವೆ. ಹೊರಗಡೆ ಯಾವುದೇ ಅಂಗಡಿಯಲ್ಲಿ ಇದು ದೊರಕುವಂತಾದ್ದಲ್ಲ. ಕೋಟಿ ರೂಪಾಯಿಗಳನ್ನು ಕೊಟ್ಟರೂ ಸಿಗುವುದಿಲ್ಲ. ಊಟ ಮಾಡುತ್ತಿರುವಾಗಲೇ ಈ ಪೌಷ್ಟಿಕಾಂಶಗಳು ದೇಹದಲ್ಲಿರುವ ಎಲ್ಲ ಕಸಕಡ್ಡಿಗಳನ್ನೂ, ಅತಿಯಾದ ವಾತ ಪಿತ್ತ ಕಫಗಳನ್ನೂ, ಯಾವುದೇ ರೀತಿಯ ಬೆನ್ನುನೋವು, ತಲೆನೋವು, ಸೊಂಟನೋವು, ಕಾಲುನೋವು, ತಲೆಭಾರ, ನಿದ್ರೆ ಸರಿಯಾಗಿ ಬಾರದಿರುವುದು, ಕೊಲೆಸ್ಟರಾಲನ್ನು ಪೂರ್ತಿಯಾಗಿ ಕರಗಿಸುವುದು. ಮುಂದೆ ಎಂದೆಂದಿಗೂ ಕೊಲೆಸ್ಟರಾಲ್ ದೇಹದಲ್ಲಿ ಸೇರಲು ಅವಕಾಶ ಕೊಡುವುದಿಲ್ಲ, ಬ್ಲಡ್ ಶುಗರನ್ನು ೧೦೦ ಕ್ಕೆ ೧೦೦ ರಷ್ಟು ಕಡಿಮೆಮಾಡುವುದು. ಇದನ್ನೆಲ್ಲ ವಿಜ್ನಾನಿಗಳು ದೃಡಪಡಿಸಿದ್ದಾರೆ. ಮನೆಯಲ್ಲಿ ಪಿ.ಸಿ. ಇದ್ದು ಇಂಟರ್ನೆಟ್ ಹಾಕಿಸಿಕೊಂಡಿರುವವರು ಗೂಗಲ್ ನಲ್ಲಿ ಜಾಲಾಡಿನೋಡಿ. ಈ ಕಜ್ಜಾಯ ಅಕ್ಕಿಗೆ ೧೦೦ ಕ್ಕೆ ೧೦೦ ರಷ್ಟು ಕ್ಯಾನ್ಸರ್ ವಾಸಿಮಾಡುವ ಶಕ್ತಿ ಇದೆ.

ಇದಲ್ಲದೆ ಆಸಿಡಿಟಿ, ಗ್ಯಾಸ್ಟ್ರೈಟಿಸ್, ಬೊಜ್ಜು ಈ ಎಲ್ಲವೂ ೧೦೦% ವಾಸಿಯಾಗುತ್ತದೆ. ಇದಲ್ಲದೇ ಮುಖವೂ ಕಾಂತಿಯುಕ್ತವಾಗುತ್ತದೆ. ಕಣ್ಣುಗಳು ಮಿನುಗುತ್ತವೆ. ಚಟುವಟಿಕೆ ಜಾಸ್ತಿಯಾಗುತ್ತದೆ. ಊಟ ಮಾಡಿದ ತಕ್ಷಣ ಹೊಟ್ಟೆ ಭಾರವಾಗುವುದಿಲ್ಲ. ಬ್ಲೋಟಿಂಗ್ ಅನುಭವ ಇರುವುದಿಲ್ಲ. ಹೊಟ್ಟೆಯಲ್ಲಿ ಸಂಕಟವಾಗುವುದೂ ನಿಂತುಹೋಗುತ್ತದೆ. ಹೊಟ್ಟೆ ಯಾವಾಗಲೂ ತಂಪಾಗಿರುತ್ತದೆ. ಮಲಬದ್ದತೆ ನಿರ್ನಾಮವಾಗಿ ದೊಡ್ಡಕರುಳಿನಲ್ಲಿ ಕಟ್ಟಿಕೊಂಡಿರುವ ಅತ್ಯಂತ ಕಟ್ಟಕಡೆ ಪಾಚಿಯೂ ಸಹ ಕೊಚ್ಚಿಕೊಂಡು ಹೋಗುತ್ತದೆ. ಮಲವಿಸರ್ಜನೆಯ ಬಳಿಕ ದೇಹ ಮತ್ತು ಮನಸ್ಸು ಆನಂದಮಯವಾಗುತ್ತದೆ. ಪ್ರತಿದಿನ ಮಲವಿಸರ್ಜನೆಯ ನಂತರ ದೇಹ ಮತ್ತು ಮನಸ್ಸು ಹಗುರವಾಗಿ ಚಟುವಟಿಕೆಯಿಂದ ಕೂಡಿರುತ್ತದೆ. ಕೆಂಪು ಅಕ್ಕಿಯಲ್ಲಿರುವ ಅತ್ಯಂತ ಶಕ್ತಿ ಬೇರೆ ಯಾವುದೇ ಇಲ್ಲ ಎಂದು ಕಾಣಿಸುತ್ತದೆ. ಎಲ್ಲ ಧಾನ್ಯಗಳಿಗೂ ತನ್ನದೇ ಆದ ಶಕ್ತಿ ಇರುತ್ತದೆ. ಎಲ್ಲಾ ಕಾಲಕ್ಕೂ ಹೊಟ್ಟಿನಿಂದ ಕೂಡಿದ ಕೆಂಪು ಅಕ್ಕಿಯೇ ಸರ್ವಶ್ರೇಷ್ಟ ವಾದುದು.

ಬರೆದವರು : ಹೆಚ್.ಕೆ.ಸತ್ಯಪ್ರಕಾಶ್
೯೮೮೬೩ ೩೪೬೬೭
ಇ-ಮೈಲ್: ಎಸ್ಪಿ೧೯೩೯@ಜಿಮೈಲ್.kaaM