ಮಂಗಳವಾರ, ಜುಲೈ 1, 2008

ಗಂಟಲು ನೋವು

ಮುಂದುವರೆದುದು
೨)-ಸೋಮಾರಿ ಬೇರನ್ನು ಲಿಂಬೆರಸದಲ್ಲಿ ತೇಯ್ದು ಗಂಟಲಿನ ಹೊರ್ಭಾಗಕ್ಕೆ ಹಚ್ಚಬೇಕು.
೩)-ಉಪ್ಪಿನಕಾಯಿಯನ್ನು ಸ್ವಲ್ಪ ತೆಗೆದುಕೊಂಡು ಗಂಟಲು ಮೂಳೆಗೆ(ಕೆನ್ನಾಲಿಗೆಗೆ) ಹಚ್ಚಬೇಕು. ಬಂದ ಎಂಜಲನ್ನು ಉಗುಳಬೇಕು.
೪)-ಸ್ವಲ್ಪ ಬಿಸಿನೀರನ್ನು ಕುಡಿಯುತ್ತಿರಬೇಕು

ಅಜೀರ್ಣದಿಂದ ಹೊಟ್ಟೆ ಉಬ್ಬರಿಸಿದರೆ:
೧)-ಊಟದ ಜೊತೆ ಬೆಳ್ಳುಳ್ಳಿ ತಿನ್ನಬೆಕು.
೨)-ಹಸಿ ಶುಂಠಿಯನ್ನು ತಿನ್ನಬೇಕು.
೩)-ಸ್ವಲ್ಪ ಜೀರಿಗೆಯನ್ನು ಅಗಿದು ತಿನ್ನಬೇಕು.

ಆಮಶಂಕೆಯಲ್ಲಾಗುವ ರಕ್ತಸ್ರಾವ ತಡೆಗಟ್ಟಲು:
ನಿಂಬೆಹಣ್ಣಿನ ಪಾನಕಕ್ಕೆ ಅಡಿಗೆ ಉಪ್ಪನ್ನು ಸೇರಿಸಿ ಕುಡಿಯುವುದರಿಂದ ಸ್ವಲ್ಪಮಟ್ಟಿನ ಗುಣ ಕಂಡುಬರುವುದು.

ಮೂತ್ರದ ಕಟ್ಟುವಿಕೆ:
೧)-ಚೆನ್ನಾಗಿ ಮಾಗಿದ ಅನಾನಸ್ ಹಣ್ಣಿನಿಂದ ತಯಾರಿಸಿದ ಪಾನಕ(ರಸ) ಸೇವಿಸಬೇಕು.
೨)-ಬಾಳೆಪಟ್ಟಿಯನ್ನು ಹಿಂಡಿ ರಸ ತೆಗೆದು ಒಂದು ಕಪ್ ರಸಕ್ಕೆ ಒಂದು ಸ್ಪೂನ್ ಹಸುವಿನ ತುಪ್ಪ ಸೇರಿಸಿ ಕುಡಿಯಬೇಕು.
ತಕ್ಷಣವೇ ಮೂತ್ರ ಸರಾಗವಾಗಿ ವಿಸರ್ಜನೆಯಾಗುತ್ತದೆ.
೩)-ಒಂದು ಕಪ್ ಟೀ ತಯಾರಿಸಿ ಅದಕ್ಕೆ ಒಂದು ಚಿಟಿಕೆ ಏಲಕ್ಕಿಪುಡಿ ಸೇರಿಸಿ ಕುಡಿದರೆ ಸರಾಗ ಮೂತ್ರವಿಸರ್ಜನೆಯಾಗುತ್ತದೆ.
೪)-ಕಬ್ಬಿನ ಹಾಲಿಗೆ ಎಳೆನೀರು, ಹಸಿಶುಂಠಿರಸ, ನಿಂಬೆರಸ ಸೇರಿಸಿ ಸೇವಿಸುವುದರಿಂದ ಗುಣಕಾರಿ.
೫)-ಎಳೆನೀರನ್ನು ಸೇವಿಸಿ.
೬)-ಮೂಲಂಗಿ ಸೊಪ್ಪಿನ ರಸ ಕುಡಿಯಬೇಕು.

ಜೇನುನೊಣ ಕಚ್ಚಿದಾಗ:
ಈರುಳ್ಳಿಯನ್ನು ಹೋಳುಮಾಡಿ ಒಂದು ಹೋಳಿನಿಂದ ಕಚ್ಚಿದ ಜಾಗಕ್ಕೆ ತಿಕ್ಕಬೇಕು.
ಶ್ರವಣಶಕ್ತಿ ಹೆಚ್ಚಿಸಲು: ಒಂದು ಬಟ್ಟಲು ಮಾವಿನಹಣ್ಣಿನ ರಸವನ್ನು ಹಾಲು ಮತ್ತು ಜೇನಿನೊಂದಿಗೆ ಪ್ರತಿದಿನ ಸೇವಿಸಬೇಕು.

ವಿಷಾಹಾರ ಸೇವಿಸಿದಾಗ: ಒಂದು ಟೀ ಚಮಚದಷ್ಟು ಸಾಸಿವೆ ಪುಡಿಯನ್ನು ಉಗುರುಬೆಚ್ಚಗಿನ ನೀರಿನಲ್ಲಿ ಸೇರಿಸಿ ಕುಡಿಯಬೇಕು.

ನಿದ್ರೆ ಬಾರದಿದ್ದರೆ: ಗಸಗಸೆಯ ಹಾಲನ್ನು ತೆಂಗಿನಕಾಯಿಯ ಹಾಲಿನೊಂದಿಗೆ ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ ಸೇವಿಸಬೇಕು.