ಶುಕ್ರವಾರ, ಆಗಸ್ಟ್ 2, 2013
ಬುಧವಾರ, ಅಕ್ಟೋಬರ್ 3, 2012
ಸಸ್ಯಾಹಾರಿಗಳಾದರೆ ಮಾತ್ರ 10 ಬಂಪರ್ ಲಾಭ!
ಸಸ್ಯಾಹಾರಿಗಳಾದರೆ ಮಾತ್ರ 10 ಬಂಪರ್ ಲಾಭ!
Posted by: Reena
ಇಂದು
ವಿಶ್ವ ಸಸ್ಯಾಹಾರಿ ದಿನ. ಕೆಲವರು ಹುಟ್ಟಿದಾಗಿನಿಂದ ಸಸ್ಯಾಹಾರಿಗಳಾಗಿರುತ್ತಾರೆ,
ಮತ್ತೆ ಕೆಲವರು ಮಾಂಸಾಹಾರವನ್ನು ತಿನ್ನುತ್ತಿದ್ದು ಯಾವುದೋ ಒಂದು ಕಾರಣಕ್ಕೆ ಶುದ್ಧ
ಸಸ್ಯಾಹಾರಿಗಳಾಗುತ್ತಾರೆ. ಸಸ್ಯಾಹಾರ ಮಾತ್ರ ತಿಂದರೆ ಸೌಂದರ್ಯ ಹೆಚ್ಚಾಗುತ್ತದೆ ಎಂದು
ಅನೇಕ ಸೆಲೆಬ್ರಿಟಿಗಳು ಹೇಳುವುದನ್ನು ಕೇಳಿರಬಹುದು. ಹೌದು, ಮಾಂಸಾಹಾರಕ್ಕಿಂತ
ಸಸ್ಯಾಹಾರ ಆರೋಗ್ಯಕ್ಕೆ ಮತ್ತು ದೇಹದ ಸೌಂದರ್ಯಕ್ಕೆ ಒಳ್ಳೆಯದು. ಯಾವ ರೀತಿಯಲ್ಲಿ
ಒಳ್ಳೆಯದು ಎಂಬುದನ್ನು ಇಲ್ಲಿ ಹೇಳಲಾಗಿದೆ ನೋಡಿ.
1. ಹಣ್ಣುಗಳು, ನಾರಿನಂಶವಿರುವ ಪದಾರ್ಥಗಳು ಹಾಗೂ ತರಕಾರಿಗಳು ಕೊಲೆಸ್ಟ್ರಾಲ್ ನ ಹಾಗೂ ಶ್ವಾಸಕೋಶದ ಕ್ಯಾನ್ಸರ್ ಬರುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.
2. ಒಬೆಸಿಟಿ ಹೆಚ್ಚಾದರೆ ಟೈಪ್ 2 ಮಧುಮೇಹ ಬರುವ ಸಾಧ್ಯತೆ ಹೆಚ್ಚು. ಒಬೆಸಿಟಿಗೆ ಕೊಬ್ಬಿನಂಶವಿರುವ ಪದಾರ್ಥಗಳು ಕಾರಣವಾಗಿದೆ. ತರಕಾರಿಗಳಿಗೆ ಹೋಲಿಕೆ ಮಾಡಿದರೆ ಮಾಂಸಾಹಾರದಲ್ಲಿ ಕೊಬ್ಬಿನಂಶ ಅಧಿಕವಿರುತ್ತದೆ, ಅಲ್ಲದೆ ನಾರಿನಂಶವಿರುವ ತರಕಾರಿಗಳು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರದಲ್ಲಿಡಲು ಸಹಕಾರಿಯಾಗಿದೆ.
3. ತರಕಾರಿಯಲ್ಲಿ antioxidants ಅಂಶವಿರುವುದರಿಂದ ತ್ವಚೆಯಲ್ಲಿರುವ ಕಶ್ಮಲಗಳನ್ನು ಹೋಗಲಾಡಿಸಿ, ತ್ವಚೆ ಸೌಂದರ್ಯವನ್ನು ಹೆಚ್ಚಿಸುತ್ತದೆ. ಅದರಲ್ಲೂ ನೀರಿನಂಶವಿರುವ ಹಣ್ಣುಗಳು ತ್ವಚೆ ಸೌಂದರ್ಯಕ್ಕೆ ತುಂಬಾ ಒಳ್ಳೆಯದು.
4. ಹಣ್ಣು, ತರಕಾರಿಗಳಲ್ಲಿ ಹಾರ್ಮೋನ್ ಗಳನ್ನು ಚುಚ್ಚುವುದಿಲ್ಲ, ಆದರೆ ಕೆಲವು ಪ್ರಾಣಿಗಳಿಗೆ ಬೇಗನೆ ಬೆಳೆಯಲು ಹಾರ್ಮೋನ್ ಗಳನ್ನು ಇಂಜೆಕ್ಟ್ ಮಾಡಲಾಗುವುದು. ಆದ್ದರಿಂದ ಹಾರ್ಮೋನ್ ಫ್ರೀ ತರಕಾರಿಗಳು ಆರೋಗ್ಯಕ್ಕೆ ಒಳ್ಳೆಯದು.
5. ತರಕಾರಿಗಳನ್ನು ತಿಂದರೆ ದೇಹದಲ್ಲಿ ರಕ್ತ ಸಂಚಾರ ಸರಿಯಾಗಿ ನಡೆಯಲು ಸಹಾಯ ಮಾಡಿ ರಕ್ತದೊತ್ತಡ ಸರಿಯಾದ ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳುತ್ತದೆ.
6. ತರಕಾರಿಗಳಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆಗೆ ತುಂಬಾ ಸಹಕಾರಿಯಾಗಿದೆ.
7. ತರಕಾರಿಗಳಲ್ಲಿ ಆರೋಗ್ಯಕ್ಕೆ ಅಗತ್ಯವಾದ ಅಮೈನೊ ಅಂಶ ಅಧಿಕವಿರುತ್ತದೆ.
8. ತರಕಾರಿಯಲ್ಲಿ ಕೊಬ್ಬಿನಂಶ ಕಡಿಮೆ ಇರುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು.
9. ತರಕಾರಿ, ಹಣ್ಣುಗಳು ಇವುಗಳಿಂದ ಸೂಪ್, ಸಲಾಡ್ ಇಂತಹ ಪದಾರ್ಥಗಳನ್ನು ಮಾಡಿ ಸೇವಿಸುವುದರಿಂದ ಬೊಜ್ಜು ಬರುವ ಸಾಧ್ಯತೆ ಕಡಿಮೆಯಾಗುವುದು.
10. ಮಾಂಸಾಹಾರಕ್ಕೆ ಹೋಲಿಸಿದರೆ ತರಕಾರಿ ಬೆಲೆ ಕೂಡ ಕಡಿಮೆ.
1. ಹಣ್ಣುಗಳು, ನಾರಿನಂಶವಿರುವ ಪದಾರ್ಥಗಳು ಹಾಗೂ ತರಕಾರಿಗಳು ಕೊಲೆಸ್ಟ್ರಾಲ್ ನ ಹಾಗೂ ಶ್ವಾಸಕೋಶದ ಕ್ಯಾನ್ಸರ್ ಬರುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.
2. ಒಬೆಸಿಟಿ ಹೆಚ್ಚಾದರೆ ಟೈಪ್ 2 ಮಧುಮೇಹ ಬರುವ ಸಾಧ್ಯತೆ ಹೆಚ್ಚು. ಒಬೆಸಿಟಿಗೆ ಕೊಬ್ಬಿನಂಶವಿರುವ ಪದಾರ್ಥಗಳು ಕಾರಣವಾಗಿದೆ. ತರಕಾರಿಗಳಿಗೆ ಹೋಲಿಕೆ ಮಾಡಿದರೆ ಮಾಂಸಾಹಾರದಲ್ಲಿ ಕೊಬ್ಬಿನಂಶ ಅಧಿಕವಿರುತ್ತದೆ, ಅಲ್ಲದೆ ನಾರಿನಂಶವಿರುವ ತರಕಾರಿಗಳು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರದಲ್ಲಿಡಲು ಸಹಕಾರಿಯಾಗಿದೆ.
3. ತರಕಾರಿಯಲ್ಲಿ antioxidants ಅಂಶವಿರುವುದರಿಂದ ತ್ವಚೆಯಲ್ಲಿರುವ ಕಶ್ಮಲಗಳನ್ನು ಹೋಗಲಾಡಿಸಿ, ತ್ವಚೆ ಸೌಂದರ್ಯವನ್ನು ಹೆಚ್ಚಿಸುತ್ತದೆ. ಅದರಲ್ಲೂ ನೀರಿನಂಶವಿರುವ ಹಣ್ಣುಗಳು ತ್ವಚೆ ಸೌಂದರ್ಯಕ್ಕೆ ತುಂಬಾ ಒಳ್ಳೆಯದು.
4. ಹಣ್ಣು, ತರಕಾರಿಗಳಲ್ಲಿ ಹಾರ್ಮೋನ್ ಗಳನ್ನು ಚುಚ್ಚುವುದಿಲ್ಲ, ಆದರೆ ಕೆಲವು ಪ್ರಾಣಿಗಳಿಗೆ ಬೇಗನೆ ಬೆಳೆಯಲು ಹಾರ್ಮೋನ್ ಗಳನ್ನು ಇಂಜೆಕ್ಟ್ ಮಾಡಲಾಗುವುದು. ಆದ್ದರಿಂದ ಹಾರ್ಮೋನ್ ಫ್ರೀ ತರಕಾರಿಗಳು ಆರೋಗ್ಯಕ್ಕೆ ಒಳ್ಳೆಯದು.
5. ತರಕಾರಿಗಳನ್ನು ತಿಂದರೆ ದೇಹದಲ್ಲಿ ರಕ್ತ ಸಂಚಾರ ಸರಿಯಾಗಿ ನಡೆಯಲು ಸಹಾಯ ಮಾಡಿ ರಕ್ತದೊತ್ತಡ ಸರಿಯಾದ ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳುತ್ತದೆ.
6. ತರಕಾರಿಗಳಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆಗೆ ತುಂಬಾ ಸಹಕಾರಿಯಾಗಿದೆ.
7. ತರಕಾರಿಗಳಲ್ಲಿ ಆರೋಗ್ಯಕ್ಕೆ ಅಗತ್ಯವಾದ ಅಮೈನೊ ಅಂಶ ಅಧಿಕವಿರುತ್ತದೆ.
8. ತರಕಾರಿಯಲ್ಲಿ ಕೊಬ್ಬಿನಂಶ ಕಡಿಮೆ ಇರುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು.
9. ತರಕಾರಿ, ಹಣ್ಣುಗಳು ಇವುಗಳಿಂದ ಸೂಪ್, ಸಲಾಡ್ ಇಂತಹ ಪದಾರ್ಥಗಳನ್ನು ಮಾಡಿ ಸೇವಿಸುವುದರಿಂದ ಬೊಜ್ಜು ಬರುವ ಸಾಧ್ಯತೆ ಕಡಿಮೆಯಾಗುವುದು.
10. ಮಾಂಸಾಹಾರಕ್ಕೆ ಹೋಲಿಸಿದರೆ ತರಕಾರಿ ಬೆಲೆ ಕೂಡ ಕಡಿಮೆ.
ಸೋಮವಾರ, ಸೆಪ್ಟೆಂಬರ್ 24, 2012
ಆರೋಗ್ಯವೇ ಬಹಳ ಮುಖ್ಯ
ಆಸಿಡಿಟಿ : ಇದು ಬರುವುದು ಬಹಳ ಸುಲಭ. ಇದು ಯಾವುದರಿಂದ ಬರುತ್ತದೆ? ಈ ಆಸಿಡಿಟಿ ಬಂದರೆ ಸಾಕು, ಎಲ್ಲಾ ಖಾಯಿಲೆಗಳಿಗೂ ಆಹ್ವಾನ ಕೊಟ್ಟಂತೆ. ಈ ಆಸಿಡಿಟಿ ಬಹಳ ಅಪಾಯಕಾರಿ ಖಾಯಿಲೆ. ಇದು ಬಂದಾಗ ಜನರೇನು ಮಾಡುತ್ತಾರೆ? ತಕ್ಷಣ ಅಲ್ಲೋಪತಿ ಡಾಕ್ಟರ ಹತ್ತಿರ ಓಡುತ್ತಾರೆ. ಅವರು ಕೊಡುವುದು ಏನನ್ನು ಡೈಜೀನ್ ಎಂಬ ಮಾತ್ರೆಯನ್ನು. ಅದನ್ನು ತೆಗೆದುಕೊಂಡ ತಕ್ಷಣ ಇದು ಮಾಯ. ಆದರೆ ಇದು ಪುನಹ ಯಾವಾಗ ಬೇಕಾದರೂ ಕಾಣಿಸಿಕೊಳ್ಳಬಹುದು.
ಈ ಆಸಿಡಿಟಿ ಬರಲು ಕಾರಣ ಏನೆಂದರೆ ಅತಿಯಾದ ಎಣ್ಣೆಯಲ್ಲಿ ಕರಿದ ಪದಾರ್ಥಗಳು, ಮೈದಾ ಹಿಟ್ಟಿನಿಂದ ಮಾಡಿದ ಸಿಹಿ ತಿಂಡಿಗಳು, ಐಸ್ ಕ್ರೀಮ್, ಅತಿಯಾದ ಕಾಫೀ ಸೇವನೆ, ಅತಿ ಎಣ್ಣೆಯ ಸೇವನೆ, ಇತ್ಯಾದಿ ಗಳಿಂದ ಬರುತ್ತದೆ. ಇದನ್ನು ತಡೆಗಟ್ಟುವುದು ಹೇಗೆ?
ಈ ಆಸಿಡಿಟಿ ಬರಲು ಕಾರಣ ಏನೆಂದರೆ ಅತಿಯಾದ ಎಣ್ಣೆಯಲ್ಲಿ ಕರಿದ ಪದಾರ್ಥಗಳು, ಮೈದಾ ಹಿಟ್ಟಿನಿಂದ ಮಾಡಿದ ಸಿಹಿ ತಿಂಡಿಗಳು, ಐಸ್ ಕ್ರೀಮ್, ಅತಿಯಾದ ಕಾಫೀ ಸೇವನೆ, ಅತಿ ಎಣ್ಣೆಯ ಸೇವನೆ, ಇತ್ಯಾದಿ ಗಳಿಂದ ಬರುತ್ತದೆ. ಇದನ್ನು ತಡೆಗಟ್ಟುವುದು ಹೇಗೆ?
ಬಿ-೧ ಜೀವಸತ್ವ ೧೯-೭-೨೦೦೫
ಸಂಜೀವಿನಿ ಗುಣದ ಜೀವಸತ್ವ ಬಿ-೧
ಬಿ-೧ ಜೀವಸತ್ವದ ಕೊರತೆಯಿಂದ ಹಲವು ರೀತಿಯ ಮಾನಸಿಕ ಹಾಗೂ ದೈಹಿಕ ತೊಂದರೆಗಳು ಕಂಡುಬರುತ್ತವೆ.
ನಾಗರತ್ನ ತನ್ನ ಗಂಡನ ಸ್ವಭಾವದಲ್ಲಿ ಇತ್ತೀಚೆಗೆ ಅನೇಕ ಬದಲಾವಣೆಗಳಾಗಿರುವುದನ್ನು ಗಮನಿಸಿದಳು. ಸದಾ ಉಲ್ಲಾಸದಿಂದ ಇರುತ್ತಿದ್ದ ಗಂಡ ಚಿಂತೆಯಿಂದ ಮುಂಗೋಪಿಯಾಗಿದ್ದ. ಎಷ್ಟೇ ಚೆನ್ನಾಗಿ ಅಡುಗೆ ಮಾಡಿದ್ದರೂ ಊಟಮಾಡಲು ಒಪ್ಪುತ್ತಿರಲಿಲ್ಲ. ತನ್ನ ಸಂಸಾರ, ನೆರೆ-ಹೊರೆ, ಸ್ನೇಹಿತರ ಬಗ್ಗೆ ಆಸಕ್ತಿ, ಉತ್ಸಾಹ ಕಳೆದುಕೊಂಡು ಸದಾ ಮೌನಿಯಾಗಿರುತ್ತಿದ್ದ. ತೀವ್ರವಾದ ತಲೆನೋವು, ಓಡಾಡಿದರೆ ತಲೆ ತಿರುಗುವುದು, ತಲೆ ಅಲ್ಲಾಡಿಸಿದರೆ ಕಿವಿಯಲ್ಲಿ ಗುಂಯ್ ಎಂಬ ಶಬ್ದ ಕೇಳಿಸುತ್ತದೆಂದು ಹೇಳುತ್ತಿದ್ದ. ಇತ್ತೀಚೆಗಂತೂ ಪತ್ನಿಯ ಮೇಲೆ ಪದೇಪದೇ ರೇಗುತ್ತಾನೆ. ಸಣ್ಣ-ಸಣ್ಣ ವಿಚಾರಗಳಿಗೂ ಜಗಳ ಮಾಡುತ್ತಾನೆ. ಏನೋ ಕಳೆದುಕೊಂಡವನಂತೆ ಏಕಾಂಗಿಯಾಗಿ ಕುಳಿತು ಎತ್ತಲೋ ನೋಡುತ್ತಾ ಇರುತ್ತಾನೆ. ತಾನು ಮನೆಯಿಂದ ಓಡಿಹೋಗುವುದಾಗಿ ಇಲ್ಲವೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಡಬಡಿಸುತ್ತಾನೆ. ತನ್ನ ಪ್ರತಿಬಿಂಬವನ್ನು ನೋಡಿ ದ್ವೇಷ ಕಾರುತ್ತಾನೆ. ರಾತ್ರಿಯೆಲ್ಲಾ ನಿದ್ದೆ ಮಾಡದೇ ಎಚ್ಚರವಾಗಿರುತ್ತಾನೆ. ಎದೆಯಲ್ಲಿ ಉರಿ, ಮಲಬದ್ಧತೆಗಳು ಕಾಡುತ್ತಿವೆ. ಆಗಿಂದಾಗ್ಗೆ ದುರ್ವಾಸನೆಯಿಂದ ಕೂಡಿದ ವಾಯು ಬಿಡುತ್ತಿರುತ್ತಾನೆ. ಸದಾ ಆಯಾಸಗೊಂಡವರಂತೆ ಕಾಣಿಸುತ್ತಾನೆ. ಈತನ ಈ ಎಲ್ಲ ಲಕ್ಷಣಗಳಿಗೆ ಕಾರಣ ಅವನಲ್ಲಿ 'ಬಿ-೧' ಜೀವಸತ್ವದ ಕೊರತೆ.
ಮಕ್ಕಳಲ್ಲಿ ಹಾಗೂ ವಯಸ್ಕರಲ್ಲಿ ಬಿ-೧ ಜೀವಸತ್ವದ ಕೊರತೆಯಿಂದ ಚಿತ್ತ ಏಕಾಗ್ರತೆ ಇಲ್ಲದೆ ಮೊಂಡುತನ ಹಾಗೂ ಸೋಮಾರಿತನ ಉಂಟಾಗುತ್ತದೆ. ಗುರುಗಳು, ತಂದೆ-ತಾಯಿ, ಪರಕೀಯರನ್ನು ಕಂಡರೆ ಮಕ್ಕಳು ಭಯಪಡುತ್ತಾರೆ. ಶಾಲೆಗೆ ಹೋಗಲು ಒಪ್ಪುವುದಿಲ್ಲ. ಸ್ನೇಹಿತರೊಂದಿಗೆ ಆಟ ಆಡಲು ಹೋಗುವುದಿಲ್ಲ. ತರಗತಿಯಲ್ಲಿ ಗುರುಗಳು ಪಾಠಮಾಡುವಾಗ ನಿದ್ದೆ ಮಾಡುತ್ತಾರೆ. ಬಹಳ ದಣಿದವರಂತೆ ಮನೆಗೆ ಬಂದೊಡನೆ ಮಲಗಲು ಬಯಸುತ್ತಾರೆ. ಅದನ್ನು ಯಾರಾದರೂ ವಿರೋಧಿಸಿದರೆ ಜಗಳ ಮಾಡುತ್ತಾರೆ.
ಈ ಹಂತದಲ್ಲಿ ಮಕ್ಕಳಿಗೆ ಬಿ-೧ ಜೀವಸತ್ವ ಚಿಕಿತ್ಸೆ ಕೊಡದಿದ್ದರೆ ಅವರ ಪರಿಸ್ಥಿತಿ ಇನ್ನಷ್ಟು ಕೆಡುತ್ತದೆ. ಓಡಾಡುವಾಗ, ಮೆಟ್ಟಲುಗಳನ್ನು ಹತ್ತುವಾಗ ಉಸಿರಾಡಲು ಕಷ್ಟಪಡುತ್ತಾರೆ. ಕಾಲುಗಳು ಊದಿಕೊಳ್ಳುತ್ತವೆ. ಬುದ್ಧಿಶಕ್ತಿಗೆ ಮಂಕು ಕವಿಯುತ್ತದೆ. ಯೋಚನಾಶಕ್ತಿ ಕಳೆದುಕೊಳ್ಳುತ್ತಾರೆ. ಹೃದಯ ವೇಗವಾಗಿ ಬಡಿದುಕೊಳ್ಳುತ್ತದೆ. ಕಾಲುಗಳು ಜಡವಾಗಿ ಭಾರವಾಗುತ್ತವೆ. ಯಾವುದೇ ರೀತಿಯ ಶಬ್ದ ಸಹಿಸುವುದಿಲ್ಲ. ಪ್ರಾಣ ಭಯದಿಂದ ಹೊರಗೆ ಹೋಗದೆ ಮನೆಯಲ್ಲೇ ಇರುತ್ತಾರೆ. ರೋಗ ನಿರೋಧಕ ಶಕ್ತಿ ಕುಗ್ಗಿ ವಿವಿಧ ರೋಗಗಳಿಗೆ ಬಲಿಯಾಗುತ್ತಾರೆ. ಇವೆಲ್ಲವೂ ಬಿ-೧ ಜೀವಸತ್ವ ಕೊರತೆಯ ಲಕ್ಷಣಗಳೇ.
ಥಿಯಾಮಿನ್ ಹೈಡ್ರೋಕ್ಲೋರೈಡ್ ರೂಪದಲ್ಲಿರುವ ಬಿ-೧ ಜೀವಸತ್ವ ಬಿಳುಪಾದ ಸ್ಪಟಿಕದಂಥ ಪದಾರ್ಥ, ನೀರಿನಲ್ಲಿ ಕರಗುತ್ತದೆ. ಪ್ರತಿನಿತ್ಯ ೦.೫ ರಿಂದ ೧.೫ ಮಿಲಿ ಗ್ರಾಂ ನಷ್ಟು ಬಿ-೧ ಜೀವಸತ್ವ ಮನುಷ್ಯನಿಗೆ ಬೇಕು. ಈ ಜೀವಸತ್ವ ದೇಹದಲ್ಲಿ ನರಕೋಶಗಳಿಗೆ ಶಕ್ತಿಯನ್ನು ಒದಗಿಸುವುದರೊಂದಿಗೆ ಅವುಗಳ ರಕ್ಷಣೆಯನ್ನೂ ಮಾಡುತ್ತದೆ. ಆದ್ದರಿಂದ ಬಿ-೧ ಜೀವಸತ್ವವನ್ನು ನರಸಂಬಂಧಿ ರೋಗಗಳಾದ ಸ್ನಾಯು ಸೆಳೆತ, ಚಳಕು, ನಿಶ್ಶಕ್ತಿ, ಸ್ಪರ್ಶನಾಶ, ಮೂಳೆ ಜರುಗುವಿಕೆ, ಪಾರ್ಶ್ವವಾಯು ಚಿಕಿತ್ಸೆಗಳಲ್ಲಿ ಉಪಯೋಗಿಸಲಾಗುತ್ತದೆ.
ಹೃದಯ ಸಂಬಂಧಿ ಕಾಯಿಲೆ, ಬೆರಿಬೆರಿ ರೋಗದಲ್ಲಿ ಥಿಯಾಮಿನ್ ನ ಕೊರತೆ ಕಂಡುಬರುತ್ತದೆ. ನೆತ್ತಿಯ ಮೇಲ್ಭಾಗದ ರಕ್ತ ಪರಿಚಲನೆಗೆ ಬಿ-೧ ಜೀವಸತ್ವ ಬೇಕೇಬೇಕು. ಅಜೀರ್ಣ ಮತ್ತು ಮಲಬದ್ಧತೆಯಿಂದ ಉಂಟಾಗುವ ವೇಗದ ಹೃದಯ ಬಡಿತ, ಹೃದಯದ ಅಸಮರ್ಪಕ ಕೆಲಸ, ಬಲಭಾಗದ ಹೃದಯಸ್ತಂಭನವಾದಾಗ ನೀಡುವ ಚಿಕೆತ್ಸೆಯಲ್ಲಿಯೂ ಬಿ-೧ ಜೀವಸತ್ವ ಬಳಸುತ್ತಾರೆ.
ಸಾಮಾನ್ಯವಾಗಿ ಹೊಟ್ಟೆ ಶಸ್ತ್ರಚಿಕಿತ್ಸೆಗೊಳಗಾದ ರೋಗಿಗಳಲ್ಲಿ ಈ ಬಿ-೧ ಜೀವಸತ್ವದ ಕೊರತೆ ಕಂಡುಬರುತ್ತದೆ. ಹೊಟ್ಟೆಯ ಹಾಗೂ ಕರುಳು ಸಂಬಂಧಿ ಕಾಯಿಲೆ ಇರುವವರು ನಿತ್ಯವೂ ಬಿ-೧ ಜೀವಸತ್ವ ಸೇವಿಸುವುದು ಒಳ್ಳೆಯದು. ಬಹುಕಾಲದ ಕೆಮ್ಮು ಸಹಾ ಬಿ-೧ ಜೀವಸತ್ವದ ಬಳಕೆಯಿಂದ ಕಡಿಮೆಯಾಗುತ್ತದೆ. ಗರ್ಭಿಣಿಯರು ಬಿ-೧ ಜೀವಸತ್ವವನ್ನು ಕ್ರಮವಾಗಿ ಉಪಯೋಗಿಸುವುದರಿಂದ ಹೆರಿಗೆ ಸುಲಭವಾಗುತ್ತದೆ. ಕಣ್ಣಿನ ನರಗಳ ತೊಂದರೆ, ಮಕ್ಕಳಲ್ಲಿ ಪಾರ್ಶ್ವವಾಯು, ದೇಹದ ನರಗಳ ತೊಂದರೆ, ಮರೆವು, ಮುಂಗೋಪ, ಆಯಾಸ, ಹೊಟ್ಟೆಯಲ್ಲಿ ಹುಣ್ಣು...... ಇತ್ಯಾದಿಗಳು ಕಂಡುಬಂದಾಗ ತಪ್ಪದೆ ಬಿ-೧ ಜೀವಸತ್ವ ಕೊಡಿಸುವುದು ಒಳ್ಳೆಯದು.
ಅಕ್ಕಿಯನ್ನು ಗಿರಣಿಯಲ್ಲಿ ಪಾಲೀಶ್ ಮಾಡುವಾಗ ಸಾಕಷ್ಟು ಪ್ರಮಾಣದಲ್ಲಿ ಈ ಜೀವಸತ್ವ ನಾಶವಾಗುತ್ತದೆ. ಬಿ-೧ ಜೀವಸತ್ವದ ದೈನಂದಿನ ಪೂರೈಕೆಯು ನಾವು ಸೇವಿಸುವ ಕಾರ್ಬೋಹೈಡ್ರೇಟ್ ಅನ್ನು ಅವಲಂಬಿಸಿದೆ. ದೇಹದಲ್ಲಿ ಶಕ್ತಿ ಬಿಡುಗಡೆಯಾಗಲು, ದೈಹಿಕ ಬೆಳವಣಿಗೆ, ಹಸಿವು ಉಂಟಾಗಲು, ಪಚನಕ್ರಿಯೆ ಹಾಗೂ ನರಕ್ಕೆ ಸಂಬಂಧಿಸಿದ ಕಾರ್ಯಚಟುವಟಿಕೆಗಳಲ್ಲಿ ಈ ಜೀವಸತ್ವ ಪಾತ್ರ ವಹಿಸುತ್ತದೆ.
ವಿಪರೀತ ಮದ್ಯಪಾನ ಮಾಡುವವರಲ್ಲಿಯೂ ಬಿ-೧ ಜೀವಸತ್ವದ ಕೊರತೆ ಉಂಟಾಗುತ್ತದೆ. ಅವರ ಚಲನೆಯಲ್ಲಿ ಅಸ್ಠಿರತೆ, ಗಲಿಬಿಲಿ ಉಂಟಾಗುತ್ತದೆ. ಕೆಲವರಲ್ಲಿ ರೋಗ ಉಲ್ಬಣಿಸಿ ಮರೆವು, ಹೊಸದನ್ನು ಕಲಿಯದ ಸ್ಠಿತಿ, ಮರೆವನ್ನು ಮರೆಮಾಡುವ ಪ್ರಯತ್ನ ಕಂಡುಬರುತ್ತದೆ.
ಬಿ-೧ ಜೀವಸತ್ವಕ್ಕೆ ಇವುಗಳನ್ನು ಸೇವಿಸಿ:
ಜಾಸ್ತಿ ಪಾಲೀಶ್ ಮಾಡಿರದ ಅಕ್ಕಿ, ಬೇಳೆಕಾಳು, ಹುರುಳಿ, ಕುಸುಬಲಕ್ಕಿ, ಗೋಧಿಕಾಳು, ಹಾಲು, ಮೊಳಕೆಯೊಡೆದ ಕಾಳು, ಬಟಾಣಿ, ನೆಲಗಡಲೆ, ಅಕ್ಕಿಯ ತೌಡು, ಕೋಸು, ಮೂಲಂಗಿ ಗಳು... ಇತ್ಯಾದಿ.
ಬರೆದವರು : ಡಾ. ಎಸ್. ರವಿಕುಮಾರ ರಾರಾವಿ
ಕೃಪೆ : ವಿಜಯಕರ್ನಾಟಕ
ಸಂಗ್ರಹಿಸಿದವರು : ಹೆಚ್.ಕೆ. ಸತ್ಯಪ್ರಕಾಶ್. - ೯೮೮೬೩ ೩೪೬೬೭ ಇ-ಮೈಲ್ : ಮನುಸತ್ಯ ಅಟ್ ರಿಡಿಫ್ ಮೈಲ್.ಕಾಮ್.
ಸಂಜೀವಿನಿ ಗುಣದ ಜೀವಸತ್ವ ಬಿ-೧
ಬಿ-೧ ಜೀವಸತ್ವದ ಕೊರತೆಯಿಂದ ಹಲವು ರೀತಿಯ ಮಾನಸಿಕ ಹಾಗೂ ದೈಹಿಕ ತೊಂದರೆಗಳು ಕಂಡುಬರುತ್ತವೆ.
ನಾಗರತ್ನ ತನ್ನ ಗಂಡನ ಸ್ವಭಾವದಲ್ಲಿ ಇತ್ತೀಚೆಗೆ ಅನೇಕ ಬದಲಾವಣೆಗಳಾಗಿರುವುದನ್ನು ಗಮನಿಸಿದಳು. ಸದಾ ಉಲ್ಲಾಸದಿಂದ ಇರುತ್ತಿದ್ದ ಗಂಡ ಚಿಂತೆಯಿಂದ ಮುಂಗೋಪಿಯಾಗಿದ್ದ. ಎಷ್ಟೇ ಚೆನ್ನಾಗಿ ಅಡುಗೆ ಮಾಡಿದ್ದರೂ ಊಟಮಾಡಲು ಒಪ್ಪುತ್ತಿರಲಿಲ್ಲ. ತನ್ನ ಸಂಸಾರ, ನೆರೆ-ಹೊರೆ, ಸ್ನೇಹಿತರ ಬಗ್ಗೆ ಆಸಕ್ತಿ, ಉತ್ಸಾಹ ಕಳೆದುಕೊಂಡು ಸದಾ ಮೌನಿಯಾಗಿರುತ್ತಿದ್ದ. ತೀವ್ರವಾದ ತಲೆನೋವು, ಓಡಾಡಿದರೆ ತಲೆ ತಿರುಗುವುದು, ತಲೆ ಅಲ್ಲಾಡಿಸಿದರೆ ಕಿವಿಯಲ್ಲಿ ಗುಂಯ್ ಎಂಬ ಶಬ್ದ ಕೇಳಿಸುತ್ತದೆಂದು ಹೇಳುತ್ತಿದ್ದ. ಇತ್ತೀಚೆಗಂತೂ ಪತ್ನಿಯ ಮೇಲೆ ಪದೇಪದೇ ರೇಗುತ್ತಾನೆ. ಸಣ್ಣ-ಸಣ್ಣ ವಿಚಾರಗಳಿಗೂ ಜಗಳ ಮಾಡುತ್ತಾನೆ. ಏನೋ ಕಳೆದುಕೊಂಡವನಂತೆ ಏಕಾಂಗಿಯಾಗಿ ಕುಳಿತು ಎತ್ತಲೋ ನೋಡುತ್ತಾ ಇರುತ್ತಾನೆ. ತಾನು ಮನೆಯಿಂದ ಓಡಿಹೋಗುವುದಾಗಿ ಇಲ್ಲವೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಡಬಡಿಸುತ್ತಾನೆ. ತನ್ನ ಪ್ರತಿಬಿಂಬವನ್ನು ನೋಡಿ ದ್ವೇಷ ಕಾರುತ್ತಾನೆ. ರಾತ್ರಿಯೆಲ್ಲಾ ನಿದ್ದೆ ಮಾಡದೇ ಎಚ್ಚರವಾಗಿರುತ್ತಾನೆ. ಎದೆಯಲ್ಲಿ ಉರಿ, ಮಲಬದ್ಧತೆಗಳು ಕಾಡುತ್ತಿವೆ. ಆಗಿಂದಾಗ್ಗೆ ದುರ್ವಾಸನೆಯಿಂದ ಕೂಡಿದ ವಾಯು ಬಿಡುತ್ತಿರುತ್ತಾನೆ. ಸದಾ ಆಯಾಸಗೊಂಡವರಂತೆ ಕಾಣಿಸುತ್ತಾನೆ. ಈತನ ಈ ಎಲ್ಲ ಲಕ್ಷಣಗಳಿಗೆ ಕಾರಣ ಅವನಲ್ಲಿ 'ಬಿ-೧' ಜೀವಸತ್ವದ ಕೊರತೆ.
ಮಕ್ಕಳಲ್ಲಿ ಹಾಗೂ ವಯಸ್ಕರಲ್ಲಿ ಬಿ-೧ ಜೀವಸತ್ವದ ಕೊರತೆಯಿಂದ ಚಿತ್ತ ಏಕಾಗ್ರತೆ ಇಲ್ಲದೆ ಮೊಂಡುತನ ಹಾಗೂ ಸೋಮಾರಿತನ ಉಂಟಾಗುತ್ತದೆ. ಗುರುಗಳು, ತಂದೆ-ತಾಯಿ, ಪರಕೀಯರನ್ನು ಕಂಡರೆ ಮಕ್ಕಳು ಭಯಪಡುತ್ತಾರೆ. ಶಾಲೆಗೆ ಹೋಗಲು ಒಪ್ಪುವುದಿಲ್ಲ. ಸ್ನೇಹಿತರೊಂದಿಗೆ ಆಟ ಆಡಲು ಹೋಗುವುದಿಲ್ಲ. ತರಗತಿಯಲ್ಲಿ ಗುರುಗಳು ಪಾಠಮಾಡುವಾಗ ನಿದ್ದೆ ಮಾಡುತ್ತಾರೆ. ಬಹಳ ದಣಿದವರಂತೆ ಮನೆಗೆ ಬಂದೊಡನೆ ಮಲಗಲು ಬಯಸುತ್ತಾರೆ. ಅದನ್ನು ಯಾರಾದರೂ ವಿರೋಧಿಸಿದರೆ ಜಗಳ ಮಾಡುತ್ತಾರೆ.
ಈ ಹಂತದಲ್ಲಿ ಮಕ್ಕಳಿಗೆ ಬಿ-೧ ಜೀವಸತ್ವ ಚಿಕಿತ್ಸೆ ಕೊಡದಿದ್ದರೆ ಅವರ ಪರಿಸ್ಥಿತಿ ಇನ್ನಷ್ಟು ಕೆಡುತ್ತದೆ. ಓಡಾಡುವಾಗ, ಮೆಟ್ಟಲುಗಳನ್ನು ಹತ್ತುವಾಗ ಉಸಿರಾಡಲು ಕಷ್ಟಪಡುತ್ತಾರೆ. ಕಾಲುಗಳು ಊದಿಕೊಳ್ಳುತ್ತವೆ. ಬುದ್ಧಿಶಕ್ತಿಗೆ ಮಂಕು ಕವಿಯುತ್ತದೆ. ಯೋಚನಾಶಕ್ತಿ ಕಳೆದುಕೊಳ್ಳುತ್ತಾರೆ. ಹೃದಯ ವೇಗವಾಗಿ ಬಡಿದುಕೊಳ್ಳುತ್ತದೆ. ಕಾಲುಗಳು ಜಡವಾಗಿ ಭಾರವಾಗುತ್ತವೆ. ಯಾವುದೇ ರೀತಿಯ ಶಬ್ದ ಸಹಿಸುವುದಿಲ್ಲ. ಪ್ರಾಣ ಭಯದಿಂದ ಹೊರಗೆ ಹೋಗದೆ ಮನೆಯಲ್ಲೇ ಇರುತ್ತಾರೆ. ರೋಗ ನಿರೋಧಕ ಶಕ್ತಿ ಕುಗ್ಗಿ ವಿವಿಧ ರೋಗಗಳಿಗೆ ಬಲಿಯಾಗುತ್ತಾರೆ. ಇವೆಲ್ಲವೂ ಬಿ-೧ ಜೀವಸತ್ವ ಕೊರತೆಯ ಲಕ್ಷಣಗಳೇ.
ಥಿಯಾಮಿನ್ ಹೈಡ್ರೋಕ್ಲೋರೈಡ್ ರೂಪದಲ್ಲಿರುವ ಬಿ-೧ ಜೀವಸತ್ವ ಬಿಳುಪಾದ ಸ್ಪಟಿಕದಂಥ ಪದಾರ್ಥ, ನೀರಿನಲ್ಲಿ ಕರಗುತ್ತದೆ. ಪ್ರತಿನಿತ್ಯ ೦.೫ ರಿಂದ ೧.೫ ಮಿಲಿ ಗ್ರಾಂ ನಷ್ಟು ಬಿ-೧ ಜೀವಸತ್ವ ಮನುಷ್ಯನಿಗೆ ಬೇಕು. ಈ ಜೀವಸತ್ವ ದೇಹದಲ್ಲಿ ನರಕೋಶಗಳಿಗೆ ಶಕ್ತಿಯನ್ನು ಒದಗಿಸುವುದರೊಂದಿಗೆ ಅವುಗಳ ರಕ್ಷಣೆಯನ್ನೂ ಮಾಡುತ್ತದೆ. ಆದ್ದರಿಂದ ಬಿ-೧ ಜೀವಸತ್ವವನ್ನು ನರಸಂಬಂಧಿ ರೋಗಗಳಾದ ಸ್ನಾಯು ಸೆಳೆತ, ಚಳಕು, ನಿಶ್ಶಕ್ತಿ, ಸ್ಪರ್ಶನಾಶ, ಮೂಳೆ ಜರುಗುವಿಕೆ, ಪಾರ್ಶ್ವವಾಯು ಚಿಕಿತ್ಸೆಗಳಲ್ಲಿ ಉಪಯೋಗಿಸಲಾಗುತ್ತದೆ.
ಹೃದಯ ಸಂಬಂಧಿ ಕಾಯಿಲೆ, ಬೆರಿಬೆರಿ ರೋಗದಲ್ಲಿ ಥಿಯಾಮಿನ್ ನ ಕೊರತೆ ಕಂಡುಬರುತ್ತದೆ. ನೆತ್ತಿಯ ಮೇಲ್ಭಾಗದ ರಕ್ತ ಪರಿಚಲನೆಗೆ ಬಿ-೧ ಜೀವಸತ್ವ ಬೇಕೇಬೇಕು. ಅಜೀರ್ಣ ಮತ್ತು ಮಲಬದ್ಧತೆಯಿಂದ ಉಂಟಾಗುವ ವೇಗದ ಹೃದಯ ಬಡಿತ, ಹೃದಯದ ಅಸಮರ್ಪಕ ಕೆಲಸ, ಬಲಭಾಗದ ಹೃದಯಸ್ತಂಭನವಾದಾಗ ನೀಡುವ ಚಿಕೆತ್ಸೆಯಲ್ಲಿಯೂ ಬಿ-೧ ಜೀವಸತ್ವ ಬಳಸುತ್ತಾರೆ.
ಸಾಮಾನ್ಯವಾಗಿ ಹೊಟ್ಟೆ ಶಸ್ತ್ರಚಿಕಿತ್ಸೆಗೊಳಗಾದ ರೋಗಿಗಳಲ್ಲಿ ಈ ಬಿ-೧ ಜೀವಸತ್ವದ ಕೊರತೆ ಕಂಡುಬರುತ್ತದೆ. ಹೊಟ್ಟೆಯ ಹಾಗೂ ಕರುಳು ಸಂಬಂಧಿ ಕಾಯಿಲೆ ಇರುವವರು ನಿತ್ಯವೂ ಬಿ-೧ ಜೀವಸತ್ವ ಸೇವಿಸುವುದು ಒಳ್ಳೆಯದು. ಬಹುಕಾಲದ ಕೆಮ್ಮು ಸಹಾ ಬಿ-೧ ಜೀವಸತ್ವದ ಬಳಕೆಯಿಂದ ಕಡಿಮೆಯಾಗುತ್ತದೆ. ಗರ್ಭಿಣಿಯರು ಬಿ-೧ ಜೀವಸತ್ವವನ್ನು ಕ್ರಮವಾಗಿ ಉಪಯೋಗಿಸುವುದರಿಂದ ಹೆರಿಗೆ ಸುಲಭವಾಗುತ್ತದೆ. ಕಣ್ಣಿನ ನರಗಳ ತೊಂದರೆ, ಮಕ್ಕಳಲ್ಲಿ ಪಾರ್ಶ್ವವಾಯು, ದೇಹದ ನರಗಳ ತೊಂದರೆ, ಮರೆವು, ಮುಂಗೋಪ, ಆಯಾಸ, ಹೊಟ್ಟೆಯಲ್ಲಿ ಹುಣ್ಣು...... ಇತ್ಯಾದಿಗಳು ಕಂಡುಬಂದಾಗ ತಪ್ಪದೆ ಬಿ-೧ ಜೀವಸತ್ವ ಕೊಡಿಸುವುದು ಒಳ್ಳೆಯದು.
ಅಕ್ಕಿಯನ್ನು ಗಿರಣಿಯಲ್ಲಿ ಪಾಲೀಶ್ ಮಾಡುವಾಗ ಸಾಕಷ್ಟು ಪ್ರಮಾಣದಲ್ಲಿ ಈ ಜೀವಸತ್ವ ನಾಶವಾಗುತ್ತದೆ. ಬಿ-೧ ಜೀವಸತ್ವದ ದೈನಂದಿನ ಪೂರೈಕೆಯು ನಾವು ಸೇವಿಸುವ ಕಾರ್ಬೋಹೈಡ್ರೇಟ್ ಅನ್ನು ಅವಲಂಬಿಸಿದೆ. ದೇಹದಲ್ಲಿ ಶಕ್ತಿ ಬಿಡುಗಡೆಯಾಗಲು, ದೈಹಿಕ ಬೆಳವಣಿಗೆ, ಹಸಿವು ಉಂಟಾಗಲು, ಪಚನಕ್ರಿಯೆ ಹಾಗೂ ನರಕ್ಕೆ ಸಂಬಂಧಿಸಿದ ಕಾರ್ಯಚಟುವಟಿಕೆಗಳಲ್ಲಿ ಈ ಜೀವಸತ್ವ ಪಾತ್ರ ವಹಿಸುತ್ತದೆ.
ವಿಪರೀತ ಮದ್ಯಪಾನ ಮಾಡುವವರಲ್ಲಿಯೂ ಬಿ-೧ ಜೀವಸತ್ವದ ಕೊರತೆ ಉಂಟಾಗುತ್ತದೆ. ಅವರ ಚಲನೆಯಲ್ಲಿ ಅಸ್ಠಿರತೆ, ಗಲಿಬಿಲಿ ಉಂಟಾಗುತ್ತದೆ. ಕೆಲವರಲ್ಲಿ ರೋಗ ಉಲ್ಬಣಿಸಿ ಮರೆವು, ಹೊಸದನ್ನು ಕಲಿಯದ ಸ್ಠಿತಿ, ಮರೆವನ್ನು ಮರೆಮಾಡುವ ಪ್ರಯತ್ನ ಕಂಡುಬರುತ್ತದೆ.
ಬಿ-೧ ಜೀವಸತ್ವಕ್ಕೆ ಇವುಗಳನ್ನು ಸೇವಿಸಿ:
ಜಾಸ್ತಿ ಪಾಲೀಶ್ ಮಾಡಿರದ ಅಕ್ಕಿ, ಬೇಳೆಕಾಳು, ಹುರುಳಿ, ಕುಸುಬಲಕ್ಕಿ, ಗೋಧಿಕಾಳು, ಹಾಲು, ಮೊಳಕೆಯೊಡೆದ ಕಾಳು, ಬಟಾಣಿ, ನೆಲಗಡಲೆ, ಅಕ್ಕಿಯ ತೌಡು, ಕೋಸು, ಮೂಲಂಗಿ ಗಳು... ಇತ್ಯಾದಿ.
ಬರೆದವರು : ಡಾ. ಎಸ್. ರವಿಕುಮಾರ ರಾರಾವಿ
ಕೃಪೆ : ವಿಜಯಕರ್ನಾಟಕ
ಸಂಗ್ರಹಿಸಿದವರು : ಹೆಚ್.ಕೆ. ಸತ್ಯಪ್ರಕಾಶ್. - ೯೮೮೬೩ ೩೪೬೬೭ ಇ-ಮೈಲ್ : ಮನುಸತ್ಯ ಅಟ್ ರಿಡಿಫ್ ಮೈಲ್.ಕಾಮ್.
ಬುಧವಾರ, ಸೆಪ್ಟೆಂಬರ್ 7, 2011
ಒಡೆದ ಹಿಮ್ಮಡಿ ನಿಮ್ಮನ್ನು ಕಾಡುತ್ತಿದೆಯಾ?
ಒಡೆದ ಹಿಮ್ಮಡಿ ನಿಮ್ಮನ್ನು ಕಾಡುತ್ತಿದೆಯಾ?
ಸರಿಯಾಗಿ ಪೋಷಣೆ ಮಾಡದಿದ್ದರೆ ನಿಮ್ಮ ಕಾಲುಗಳೇ ನಿಮಗೆ ಶತ್ರುವಾಗಬಹುದು. ಅದರಲ್ಲೂ ಮಳೆಗಾಲದಲ್ಲಿ ಹಿಮ್ಮಡಿ ಒಡೆಯುವುದನ್ನು ನಿರ್ಲಕ್ಷಿಸಿದರೆ ಸಹಿಸಲಾರದ ನೋವು. ಒಡೆದ ಹಿಮ್ಮಡಿಯನ್ನು ಮೃದುಗೊಳಿಸುವುದು ಹೇಗೆ ಎಂಬ ಬಗ್ಗೆ ಕೆಲವು ಸಲಹೆಗಳು ಇಲ್ಲಿವೆ.
ಒಡೆದ ಹಿಮ್ಮಡಿಗೆ ಸಲಹೆಗಳು:
1. ಪ್ಯೂಮಿಕ್ ಸ್ಟೋನ್: ಮೆಡಿಕಲ್ ಶಾಪ್ ಗಳಲ್ಲಿ ದೊರೆಯುವ ಪ್ಯೂಮಿಕ್ ಸ್ಟೋನ್ ನಿಂದ ಒಣಗಿದ ನಿಮ್ಮ ಹಿಮ್ಮಡಿಗಳನ್ನು ಸ್ನಾನ ಮಾಡುವಾಗ ಸ್ಕ್ರಬ್ ನಂತೆ ಮೃದುವಾಗಿ ಉಜ್ಜಿಕೊಂಡರೆ ನಿರ್ಜೀವ ಕಣಗಳು ತೊಲಗಿ ಪಾದಗಳು ನುಣುಪಾಗುತ್ತದೆ.
2. ಮಾಯಿಶ್ಚರೈಸರ್: ಚರ್ಮ ಒಣಗಲು ಬಿಡದೆ ಪಾದಕ್ಕೆ ಮಾಯಿಶ್ಚರೈಸರನ್ನು ಹಚ್ಚುತ್ತಿದ್ದರೆ ಚರ್ಮ ಮೃದುಗೊಳ್ಳುತ್ತದೆ. ಸಾಕ್ಸ್ ಹಾಕಿಕೊಳ್ಳುವ ಮುನ್ನ ಬಾಡಿ ಲೋಶನ್ ಅಥವಾ ಮಾಯಿಶ್ಚರೈಸರ್ ಲೇಪಿಸಿಕೊಂಡರೆ ಪಾದ ಕೋಮಲವಾಗಿರುತ್ತದೆ. ರಾತ್ರಿ ಹೊತ್ತು ಲೇಪಿಸಿಕೊಂಡು ಮಲಗಿದರೆ ಉತ್ತಮ.
3. ಉಪ್ಪು ನೀರು: ಉಗುರು ಬೆಚ್ಚಗಿನ ನೀರಿನಲ್ಲಿ ಉಪ್ಪು ಮತ್ತು ನಿಂಬೆ ರಸ ಬೆರೆಸಿ 20 ನಿಮಿಷ ಪಾದವನ್ನು ಅದರಲ್ಲಿ ಇಡಬೇಕು. ಉಪ್ಪು ಪಾದವನ್ನು ಮೃದುಗೊಳಿಸಿದರೆ, ನಿಂಬೆ ಕೊಳೆಯನ್ನು ತೊಲಗಿಸುತ್ತದೆ. ಪ್ಯೂಮಿಕ್ ಸ್ಟೋನ್ ನಿಂದ ಮೃದುವಾಗಿ ಉಜ್ಜಿದರೆ ಸ್ವಚ್ಛ ಪಾದ ನಿಮ್ಮದಾಗುತ್ತೆ.
4. ರೊಸ್ ವಾಟರ್: ಗ್ಲಿಸರಿನ್ ಜೊತೆ ರೋಸ್ ವಾಟರ್ ಸೇರಿಸಿ ಅದನ್ನು ಹತ್ತಿಯಿಂದ ಹಚ್ಚಿಕೊಳ್ಳಬೇಕು. ಸುಮಾರು 15 ದಿನ ಈ ನಿಯಮ ಪಾಲಿಸಿದರೆ ಒಡೆದ ಹಿಮ್ಮಡಿ ಬೇಗ ಗುಣಹೊಂದುತ್ತದೆ.
5. ಶೂ ಧರಿಸಿ: ನಿಮ್ಮ ಪಾದಗಳಲ್ಲಿ ತೇವಾಂಶವಿರುವಂತೆ ನೋಡಿಕೊಂಡು ಹಿಮ್ಮಡಿ ಒಡೆಯದಂತಿರಲು ಶೂ ಧರಿಸಿದರೆ ತುಂಬಾ ಉಪಯುಕ್ತ.
6. ನೀರು ಕುಡಿಯಿರಿ: ತುಂಬಾ ಚೆನ್ನಾಗಿ ನೀರು ಕುಡಿದರೆ ದೇಹದೊಂದಿಗೆ ಪಾದವನ್ನೂ ತಣ್ಣಗಿಡುತ್ತದೆ. ಇದು ಹಿಮ್ಮಡಿ ಒಡೆಯದಂತೆ ಒಳಗಿನಿಂದ ರಕ್ಷಣೆ ನೀಡುತ್ತದೆ.
7. ಬಾಳೆಯೊಂದಿಗೆ ಗ್ಲಿಸರಿನ್: ಚೆನ್ನಾಗಿ ಕಳಿತ ಬಾಳೆ ಹಣ್ಣಿಗೆ ಕೆಲವು ಹನಿ ಗ್ಲಿಸರಿನ್ ಬೆರೆಸಿ ಅದನ್ನು ಒಡೆದ ಪಾದಗಳಿಗೆ ಹಚ್ಚಿಕೊಂಡರೆ ಪಾದ ನುಣುಪಾಗಿ ಮಿರುಗುತ್ತದೆ.
Topics: ಆರೋಗ್ಯ, ಕಾಲು, heel, foot, health
English summary
Cracked heels can be a major skin problem if not treated well. The deeper the cracks; the longer it will take to get healed so keep the feet moisturized specially in the winter time. Apart from applying moisturizer before going to bed here are tips to cure cracked heels. Take a look.
ಮಂಗಳವಾರ, ಏಪ್ರಿಲ್ 6, 2010
ನಿಮ್ಮ ದೇಹದ ಒಳಗಡೆ ಏನಿದೆ ನೋಡಿದ್ದೀರಾ?
ನಿಮ್ಮ ದೇಹದ ಒಳಗಡೆ ಏನಿದೆ ನೋಡಿದ್ದೀರಾ? ನಿಮ್ಮ ದೇಹದ ಒಳಗೆ ಎಷ್ಟು ಕೊಳಕು ತುಂಬಿದೆ ಅನ್ನೋದು ಗೊತ್ತಾ?





ನಿಮ್ಮ ದೇಹದ ಒಳಗಡೆ ಏನಿದೆ ನೋಡಿದ್ದೀರಾ? ನಿಮ್ಮ ದೇಹದ ಒಳಗೆ ಎಷ್ಟು ಕೊಳಕು ತುಂಬಿದೆ ಅನ್ನೋದು ಗೊತ್ತಾ?
ನೀವು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ಉಜ್ಜಿ, ಉಜ್ಜಿ ಉಜ್ಜುತ್ತೀರಾ. ಚೆನ್ನಾಗಿ ಸೋಪ್ ಹಾಕಿ ಸ್ನಾನ ಮಾಡುತ್ತೀರ, ದೇಹದ ಹೊರಗೆಲ್ಲಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದೀರಾ, ಅಲ್ಲವೇ? ಹಾಗೆಯೇ ನಿಮ್ಮ ದೇಹದ ಒಳಗೂ ಚೆನ್ನಾಗಿರುವಂತೆ ನೋಡಿಕೊಳ್ಳಬೇಕಲ್ಲವೇ? ಇದಕ್ಕಾಗಿ ಏನು ಮಾಡಬೇಕು ಎಂಬುದನ್ನು ಇಲ್ಲಿ ಸೂಕ್ಷ್ಮವಾಗಿ ಬರೆಯುತ್ತೇನೆ ಹಾಗು ನಿಮ್ಮ ದೊಡ್ಡ ಕರುಳಿನ ಒಳಗೆ ಎಷ್ಟೆಲ್ಲಾ ಪಾಚಿ ಕಟ್ಟಿಕೊಂಡಿದೆ ಎಂಬ ಚಿತ್ರಗಳನ್ನೂ ಇಲ್ಲಿ ಅಂಟಿಸುತ್ತೇನೆ.
ನೀವು ನಿಮ್ಮ ದೇಹವನ್ನು ಯಾವುದೇ ರೋಗ ಬರದಂತೆ ನೋಡಿಕೊಳ್ಳಬೇಕಾದರೆ ಅಥವಾ ರೋಗ ಬಂದಮೇಲೆ ಸರಿಪಡಿಸಿಕೊಳ್ಳಬೇಕಾದರೆ ಈ ಕೆಳಕಂಡ ಬ್ರಾನ್ ಗಳನ್ನು ನಿಮ್ಮ ನಿತ್ಯ ಊಟಗಳಲ್ಲಿ ಉಪಯೋಗಿಸುತ್ತಲೇ ಇದ್ದರೆ ಎಲ್ಲ ತರಹ ರೋಗಗಳು ಮಂಗಮಾಯವಾಗುತ್ತವೆ.
ಓಟ್ ಬ್ರಾನ್, ಗೋಧಿ ಬ್ರಾನ್, ರೈಸ್ ಬ್ರಾನ್, ಓಟ್ ಮೀಲ್ಸ್, ಬಾರ್ಲಿ ಬ್ರಾನ್, ಇತ್ಯಾದಿ ಉಪಯೋಗಿಸುತ್ತಲೇ ಇರಬೇಕು. ಪಾಲೀಶ್ ಮಾಡಿದ ಅಕ್ಕಿಯ ಅನ್ನವನ್ನು ತಿನ್ನುವವರು, ಜಂಕ್ ತಿಂಡಿಗಳನ್ನು ತಿನ್ನುವವರು, ಮೈದಾದಲ್ಲಿ ಮಾಡಿರುವ ತಿಂಡಿಗಳನ್ನು ತಿನ್ನುವವರು, ಕುರುಕು ತಿಂಡಿಗಳನ್ನು ತಿನ್ನುವವರು ಈ ಮೇಲೆ ಹೇಳಿದ ಬ್ರಾನ್ ಗಳನ್ನು ದಿನ ನಿತ್ಯ ಉಪಯೋಗಿಸುತ್ತಿದ್ದರೆ ಅನುಕೂಲವಾಗುತ್ತದೆ. ಆದರೆ ಪ್ರತಿದಿನವೂ ಈ ಮೇಲಿನ ತಿಂಡಿಗಳನ್ನು ತಿಂದು ಬ್ರಾನ್ ಉಪಯೋಗಿಸುತ್ತಿದ್ದರೂ ಸಹಾ ಏನೂ ಪ್ರಯೋಜನ ಆಗುವುದಿಲ್ಲ. ಇದಲ್ಲದೆ ವಾತಾವರಣದಿಂದ, ಹೊರಗಿನ ಕೆಮಿಕಲ್ ಹೊಗೆಗಳಿಂದಲೂ ಈ ಕೆಟ್ಟ ಪಾಚಿಗಳೂ ನಮ್ಮ ಕರುಳಿನಲ್ಲಿ ಶೇಖರವಾಗಿ ತುಂಬಾ ತೊಂದರೆ ಅನುಭವಿಸಬೇಕಾಗಿ ಬರುತ್ತದೆ.





ನಿಮ್ಮ ದೇಹದ ಒಳಗಡೆ ಏನಿದೆ ನೋಡಿದ್ದೀರಾ? ನಿಮ್ಮ ದೇಹದ ಒಳಗೆ ಎಷ್ಟು ಕೊಳಕು ತುಂಬಿದೆ ಅನ್ನೋದು ಗೊತ್ತಾ?
ನೀವು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ಉಜ್ಜಿ, ಉಜ್ಜಿ ಉಜ್ಜುತ್ತೀರಾ. ಚೆನ್ನಾಗಿ ಸೋಪ್ ಹಾಕಿ ಸ್ನಾನ ಮಾಡುತ್ತೀರ, ದೇಹದ ಹೊರಗೆಲ್ಲಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದೀರಾ, ಅಲ್ಲವೇ? ಹಾಗೆಯೇ ನಿಮ್ಮ ದೇಹದ ಒಳಗೂ ಚೆನ್ನಾಗಿರುವಂತೆ ನೋಡಿಕೊಳ್ಳಬೇಕಲ್ಲವೇ? ಇದಕ್ಕಾಗಿ ಏನು ಮಾಡಬೇಕು ಎಂಬುದನ್ನು ಇಲ್ಲಿ ಸೂಕ್ಷ್ಮವಾಗಿ ಬರೆಯುತ್ತೇನೆ ಹಾಗು ನಿಮ್ಮ ದೊಡ್ಡ ಕರುಳಿನ ಒಳಗೆ ಎಷ್ಟೆಲ್ಲಾ ಪಾಚಿ ಕಟ್ಟಿಕೊಂಡಿದೆ ಎಂಬ ಚಿತ್ರಗಳನ್ನೂ ಇಲ್ಲಿ ಅಂಟಿಸುತ್ತೇನೆ.
ನೀವು ನಿಮ್ಮ ದೇಹವನ್ನು ಯಾವುದೇ ರೋಗ ಬರದಂತೆ ನೋಡಿಕೊಳ್ಳಬೇಕಾದರೆ ಅಥವಾ ರೋಗ ಬಂದಮೇಲೆ ಸರಿಪಡಿಸಿಕೊಳ್ಳಬೇಕಾದರೆ ಈ ಕೆಳಕಂಡ ಬ್ರಾನ್ ಗಳನ್ನು ನಿಮ್ಮ ನಿತ್ಯ ಊಟಗಳಲ್ಲಿ ಉಪಯೋಗಿಸುತ್ತಲೇ ಇದ್ದರೆ ಎಲ್ಲ ತರಹ ರೋಗಗಳು ಮಂಗಮಾಯವಾಗುತ್ತವೆ.
ಓಟ್ ಬ್ರಾನ್, ಗೋಧಿ ಬ್ರಾನ್, ರೈಸ್ ಬ್ರಾನ್, ಓಟ್ ಮೀಲ್ಸ್, ಬಾರ್ಲಿ ಬ್ರಾನ್, ಇತ್ಯಾದಿ ಉಪಯೋಗಿಸುತ್ತಲೇ ಇರಬೇಕು. ಪಾಲೀಶ್ ಮಾಡಿದ ಅಕ್ಕಿಯ ಅನ್ನವನ್ನು ತಿನ್ನುವವರು, ಜಂಕ್ ತಿಂಡಿಗಳನ್ನು ತಿನ್ನುವವರು, ಮೈದಾದಲ್ಲಿ ಮಾಡಿರುವ ತಿಂಡಿಗಳನ್ನು ತಿನ್ನುವವರು, ಕುರುಕು ತಿಂಡಿಗಳನ್ನು ತಿನ್ನುವವರು ಈ ಮೇಲೆ ಹೇಳಿದ ಬ್ರಾನ್ ಗಳನ್ನು ದಿನ ನಿತ್ಯ ಉಪಯೋಗಿಸುತ್ತಿದ್ದರೆ ಅನುಕೂಲವಾಗುತ್ತದೆ. ಆದರೆ ಪ್ರತಿದಿನವೂ ಈ ಮೇಲಿನ ತಿಂಡಿಗಳನ್ನು ತಿಂದು ಬ್ರಾನ್ ಉಪಯೋಗಿಸುತ್ತಿದ್ದರೂ ಸಹಾ ಏನೂ ಪ್ರಯೋಜನ ಆಗುವುದಿಲ್ಲ. ಇದಲ್ಲದೆ ವಾತಾವರಣದಿಂದ, ಹೊರಗಿನ ಕೆಮಿಕಲ್ ಹೊಗೆಗಳಿಂದಲೂ ಈ ಕೆಟ್ಟ ಪಾಚಿಗಳೂ ನಮ್ಮ ಕರುಳಿನಲ್ಲಿ ಶೇಖರವಾಗಿ ತುಂಬಾ ತೊಂದರೆ ಅನುಭವಿಸಬೇಕಾಗಿ ಬರುತ್ತದೆ.
ಬುಧವಾರ, ಸೆಪ್ಟೆಂಬರ್ 17, 2008
ಮನೆಯಲ್ಲೇ ಮೊಡವೆಗಳಿಗೆ ಔಷಧಿ
೧. ಮೆಣಸನ್ನು ನೀರಿನಲ್ಲಿ ತೇಯ್ದು ಮೊಡವೆಗಳಿಗೆ ಹಚ್ಚುತ್ತಾ ಬಂದರೆ ಕೆಲವೇ ದಿನಗಳಲ್ಲಿ ಮೊಡವೆಗಳು ಮುಖದಲ್ಲಿ ಇಲ್ಲದಂತಾಗುವುದು.
೨. ಕೊತ್ತಂಬರಿಸೊಪ್ಪಿನ ರಸದೊಂದಿಗೆ ನಿಂಬೆರಸ ಮಿಶ್ರ ಮಾಡಿ, ಕ್ರಮವಾಗಿ ಹಚ್ಚುತ್ತಿದ್ದರೆ ಮೊಡವೆ ಹಾಗೂ ಚರ್ಮದ ಮೇಲಿನ ಕಲೆಗಳು ಕಣ್ಮರೆ ಆಗುವುವು.
೩. ಬಾದಾಮಿ ಬೀಜಗಳನ್ನು ಶುದ್ಧವಾದ ಹಸುವಿನ ಹಾಲಿನಲ್ಲಿ ಅರೆದು, ಹತ್ತಿಯೊಂದಿಗೆ ಆ ಮಿಶ್ರಣವನ್ನು ಅದ್ದಿ ಮೊಡವೆಯ ಮೇಲೆ ಸವರುತ್ತಿದ್ದರೆ ಮೊಡವೆಯ ಗುರುತು ಮಾಯವಾಗುವುದು.
೪. ಸೇಬಿನ ಹಾಗೂ ನಿಂಬೆಯ ಸಿಪ್ಪೆಯನ್ನು ಬಿಸಿಲಿನಲ್ಲಿ ಒಣಗಿಸಿ ನುಣ್ಣಗೆ ಅರೆದು ಪುಡಿ ಮಾಡಿ ಚೂರ್ಣವನ್ನು ಹಾಲಿನಲ್ಲಿ ಬೆರೆಸಿ ಮೊಡವೆಗಳಿಗೆ ಹಚ್ಚಿದರೆ ಶೀಘ್ಹ್ರದಲ್ಲಿಯೇ ಮೊಡವೆಯ ಗುಳ್ಳೆ ಕರಗುವುದು.
೫. ಸೇಬಿನ ತಿರುಳನ್ನು ಅರೆದು ಮುಖಕ್ಕೆ ಲೇಪಿಸಿಕೊಳ್ಳುವುದರಿಂದ ವಾರದ ಒಳಗಾಗಿ ಮೊಡವೆ ಗುಳ್ಳೆಗಳು ಮಾಯ ಆಗುವುವು. ಜೊತೆಗೆ ಮುಖ ಕಾಂತಿ ಹೆಚ್ಚುವುದು.
೬. ಎಳೆನೀರಿನಲ್ಲಿ ಕೆಲವು ವಾರ ಮುಖ ತೊಳೆಯುತ್ತಿದ್ದರೆ ಮೊಡವೆಗಳು ಮಾಗುತ್ತವೆ. ಮುಖದ ಮೇಲೆ ಕಪ್ಪು ಕಲೆಗಳಿದ್ದರೆ ಮಾಯ ಆಗುವುವು. ಮುಖದ ಮೇಲೆ ಹೊಳಪು ಹೆಚ್ಚುವುದು.
೭. ಕಿತ್ತಲೆ ಸಿಪ್ಪೆಯನ್ನು ಮುಖದಮೇಲೆ ಉಜ್ಜುತ್ತಿದ್ದರೆ ಅದರಿಂದ ಸುವಾಸನೆಯ ದ್ರವ ಹೊರಬಂದು ಮೊಡವೆ ಗುಳ್ಳೆಗಳು ಒಣಗುವುವು.
೮. ನಿಂಬೇರಸದಲ್ಲಿ ದಾಲ್ಚಿನ್ನಿಯನ್ನು ತೇಯ್ದು ಮೊಡವೆಗಳಿಗೆ ಹಚ್ಚಿದರೆ ಬೇಗ ಒಣಗುವುವು.
೯. ಗರಿಕೆ ಹುಲ್ಲಿನ ರಸವನ್ನು ಮುಖದಮೇಲೆ ಲೇಪಿಸುವುದರಿಂದ ಮೊಡವೆಗಳು ಮಾಗುವುವು.
೧೦. ಹಿಂಗನ್ನು ನೀರಿನಲ್ಲಿ ತೇಯ್ದು ಮೊಡವೆಗಳಿಗೆ ಹಚ್ಚುತ್ತಿದ್ದರೂ ಸಹಾ ಮೊಡವೆ ಗುಳ್ಳೆಗಳು ಮುಖದ ಮೇಲೆ ಕಾಣದಂತಾಗುವುದು.
ಇದಕ್ಕಿಂತ ಮುಖ್ಯವಾಗಿ ಈ ಯಾವುದೇ ಚರ್ಮ ರೋಗಗಳು ಬರುವುದು ಹೊಟ್ಟೆಯೊಳಗಿಂದ. ಹೊಟ್ಟೆ ಶುದ್ಧ ಆಗಿದ್ದರೆ ಯಾವುದೇ ತರಹದ ಚರ್ಮ ರೋಗಗಳು ಬರುವುದಿಲ್ಲ. ಇದಕ್ಕಾಗಿ ತಿಂಗಳಿಗೆ ಒಂದು ಸಲ ಭೇದಿ ಮಾತ್ರೆಯನ್ನು ತೆಗೆದುಕೊಳ್ಳಬೇಕು. ಇಲ್ಲದಿದ್ದ ಪಕ್ಷದಲ್ಲಿ ಹೊಟ್ಟುಳ್ಳ ಧಾನ್ಯಗಳನ್ನು ಸೇವಿಸಬೇಕು. ನಮ್ಮ ದೇಹವೂ ಸಹಾ ನಮ್ಮ ಮನೆಯಲ್ಲಿರುವ ಚರಂಡಿಯಂತೆ. ಮನೆಯಲ್ಲಿರುವ ಚರಂಡಿಗೆ ಏನೇನೊ ಹಾಕಿದರೆ ಹೇಗೆ ಮನೆಯೆಲ್ಲಾ ಹಾಳಾಗುತ್ತದೋ, ಅದೇ ರೀತಿ ನಮ್ಮ ದೇಹದ ಚರಂಡಿ ಕೂಡ. ಎಣ್ಣೆಯಲ್ಲಿ ಕರಿದ ತಿಂಡಿಗಳು, ಮೈದಾ ಹಿಟ್ಟಿನಿಂದ ಮಾಡಿದ ಸಿಹಿ ತಿಂಡಿಗಳು ಮತ್ತು ಕರಿದ ತಿಂಡಿಗಳು, ಮೈದಾ ದೋಸೆ, ಮೈದಾ ಬ್ರೆಡ್ ಇತ್ಯಾದಿಗಳನ್ನು ತಿಂದರೆ ಹೊರಗಿನ ಯಾವ ಔಷಢಿಗಳಿಗೂ ಈ ರೋಗಗಳು ವಾಸಿಯಾಗುವುದಿಲ್ಲ. ವೃಥಾ ಹಣ ಪೋಲು.
೨. ಕೊತ್ತಂಬರಿಸೊಪ್ಪಿನ ರಸದೊಂದಿಗೆ ನಿಂಬೆರಸ ಮಿಶ್ರ ಮಾಡಿ, ಕ್ರಮವಾಗಿ ಹಚ್ಚುತ್ತಿದ್ದರೆ ಮೊಡವೆ ಹಾಗೂ ಚರ್ಮದ ಮೇಲಿನ ಕಲೆಗಳು ಕಣ್ಮರೆ ಆಗುವುವು.
೩. ಬಾದಾಮಿ ಬೀಜಗಳನ್ನು ಶುದ್ಧವಾದ ಹಸುವಿನ ಹಾಲಿನಲ್ಲಿ ಅರೆದು, ಹತ್ತಿಯೊಂದಿಗೆ ಆ ಮಿಶ್ರಣವನ್ನು ಅದ್ದಿ ಮೊಡವೆಯ ಮೇಲೆ ಸವರುತ್ತಿದ್ದರೆ ಮೊಡವೆಯ ಗುರುತು ಮಾಯವಾಗುವುದು.
೪. ಸೇಬಿನ ಹಾಗೂ ನಿಂಬೆಯ ಸಿಪ್ಪೆಯನ್ನು ಬಿಸಿಲಿನಲ್ಲಿ ಒಣಗಿಸಿ ನುಣ್ಣಗೆ ಅರೆದು ಪುಡಿ ಮಾಡಿ ಚೂರ್ಣವನ್ನು ಹಾಲಿನಲ್ಲಿ ಬೆರೆಸಿ ಮೊಡವೆಗಳಿಗೆ ಹಚ್ಚಿದರೆ ಶೀಘ್ಹ್ರದಲ್ಲಿಯೇ ಮೊಡವೆಯ ಗುಳ್ಳೆ ಕರಗುವುದು.
೫. ಸೇಬಿನ ತಿರುಳನ್ನು ಅರೆದು ಮುಖಕ್ಕೆ ಲೇಪಿಸಿಕೊಳ್ಳುವುದರಿಂದ ವಾರದ ಒಳಗಾಗಿ ಮೊಡವೆ ಗುಳ್ಳೆಗಳು ಮಾಯ ಆಗುವುವು. ಜೊತೆಗೆ ಮುಖ ಕಾಂತಿ ಹೆಚ್ಚುವುದು.
೬. ಎಳೆನೀರಿನಲ್ಲಿ ಕೆಲವು ವಾರ ಮುಖ ತೊಳೆಯುತ್ತಿದ್ದರೆ ಮೊಡವೆಗಳು ಮಾಗುತ್ತವೆ. ಮುಖದ ಮೇಲೆ ಕಪ್ಪು ಕಲೆಗಳಿದ್ದರೆ ಮಾಯ ಆಗುವುವು. ಮುಖದ ಮೇಲೆ ಹೊಳಪು ಹೆಚ್ಚುವುದು.
೭. ಕಿತ್ತಲೆ ಸಿಪ್ಪೆಯನ್ನು ಮುಖದಮೇಲೆ ಉಜ್ಜುತ್ತಿದ್ದರೆ ಅದರಿಂದ ಸುವಾಸನೆಯ ದ್ರವ ಹೊರಬಂದು ಮೊಡವೆ ಗುಳ್ಳೆಗಳು ಒಣಗುವುವು.
೮. ನಿಂಬೇರಸದಲ್ಲಿ ದಾಲ್ಚಿನ್ನಿಯನ್ನು ತೇಯ್ದು ಮೊಡವೆಗಳಿಗೆ ಹಚ್ಚಿದರೆ ಬೇಗ ಒಣಗುವುವು.
೯. ಗರಿಕೆ ಹುಲ್ಲಿನ ರಸವನ್ನು ಮುಖದಮೇಲೆ ಲೇಪಿಸುವುದರಿಂದ ಮೊಡವೆಗಳು ಮಾಗುವುವು.
೧೦. ಹಿಂಗನ್ನು ನೀರಿನಲ್ಲಿ ತೇಯ್ದು ಮೊಡವೆಗಳಿಗೆ ಹಚ್ಚುತ್ತಿದ್ದರೂ ಸಹಾ ಮೊಡವೆ ಗುಳ್ಳೆಗಳು ಮುಖದ ಮೇಲೆ ಕಾಣದಂತಾಗುವುದು.
ಇದಕ್ಕಿಂತ ಮುಖ್ಯವಾಗಿ ಈ ಯಾವುದೇ ಚರ್ಮ ರೋಗಗಳು ಬರುವುದು ಹೊಟ್ಟೆಯೊಳಗಿಂದ. ಹೊಟ್ಟೆ ಶುದ್ಧ ಆಗಿದ್ದರೆ ಯಾವುದೇ ತರಹದ ಚರ್ಮ ರೋಗಗಳು ಬರುವುದಿಲ್ಲ. ಇದಕ್ಕಾಗಿ ತಿಂಗಳಿಗೆ ಒಂದು ಸಲ ಭೇದಿ ಮಾತ್ರೆಯನ್ನು ತೆಗೆದುಕೊಳ್ಳಬೇಕು. ಇಲ್ಲದಿದ್ದ ಪಕ್ಷದಲ್ಲಿ ಹೊಟ್ಟುಳ್ಳ ಧಾನ್ಯಗಳನ್ನು ಸೇವಿಸಬೇಕು. ನಮ್ಮ ದೇಹವೂ ಸಹಾ ನಮ್ಮ ಮನೆಯಲ್ಲಿರುವ ಚರಂಡಿಯಂತೆ. ಮನೆಯಲ್ಲಿರುವ ಚರಂಡಿಗೆ ಏನೇನೊ ಹಾಕಿದರೆ ಹೇಗೆ ಮನೆಯೆಲ್ಲಾ ಹಾಳಾಗುತ್ತದೋ, ಅದೇ ರೀತಿ ನಮ್ಮ ದೇಹದ ಚರಂಡಿ ಕೂಡ. ಎಣ್ಣೆಯಲ್ಲಿ ಕರಿದ ತಿಂಡಿಗಳು, ಮೈದಾ ಹಿಟ್ಟಿನಿಂದ ಮಾಡಿದ ಸಿಹಿ ತಿಂಡಿಗಳು ಮತ್ತು ಕರಿದ ತಿಂಡಿಗಳು, ಮೈದಾ ದೋಸೆ, ಮೈದಾ ಬ್ರೆಡ್ ಇತ್ಯಾದಿಗಳನ್ನು ತಿಂದರೆ ಹೊರಗಿನ ಯಾವ ಔಷಢಿಗಳಿಗೂ ಈ ರೋಗಗಳು ವಾಸಿಯಾಗುವುದಿಲ್ಲ. ವೃಥಾ ಹಣ ಪೋಲು.
ಶುಕ್ರವಾರ, ಸೆಪ್ಟೆಂಬರ್ 12, 2008
ನಿಮ್ಮ ಆರೋಗ್ಯ ಬಹಳ ಮುಖ್ಯ
ನಿಮ್ಮ ಆರೋಗ್ಯವನ್ನು ದಯವಿಟ್ಟು ಕಾಪಾಡಿಕೊಳ್ಳಿ. ಆರೋಗ್ಯವನ್ನು ಕೆಡಿಸಿಕೊಂಡು ಆಮೇಲೆ ಪರದಾಡಬೇಡಿ.
ಯಾವಾಗಲೂ ನಿಮ್ಮ ಊಟಕ್ಕೆ ಪಾಲೀಶ್ ಮಾಡದೇ ಇರುವ ಕೆಂಪು ಕಜ್ಜಾಯ ಅಕ್ಕಿಯನ್ನೇ ಉಪಯೋಗಿಸಿರಿ. ನಿಮಗೆ ಒಂದು ಪಕ್ಷ ಕಜ್ಜಾಯ ಅಕ್ಕಿ ಸಿಗದಿದ್ದಲ್ಲಿ ಮಾಮೂಲಿ ಅಕ್ಕಿಯನ್ನೇ ಊಟ ಮಾಡಿ. ಎರಡು ಮೂರು ದಿನಕ್ಕೆ ಒಂದು ಸಲ ರಾತ್ರಿ ನಿಮ್ಮ ಊಟವಾದ ಎರಡು ಘಂಟೆಗಳ ಬಳಿಕ
ಇಸಬ್ ಗೋಲ್ ಎಂಬ ಹೊಟ್ಟನ್ನು ಒಂದು ಒಣಗಿದ ಲೋಟಕ್ಕೆ ಹಾಕಿ ಅದಕ್ಕೆ ಪೂರ್ತಿ ನೀರು ತುಂಬಿ ತಕ್ಷಣ ಕಲಕಿ ತಕ್ಷಣ ಕುಡಿಯಿರಿ.
ನಂತರ ಒಂದು ದೊಡ್ಡ ಲೋಟ ನೀರು ಕುಡಿಯಿರಿ. ಇದರಿಂದ ನಿಮ್ಮ ಹೊಟ್ಟೆಯಲ್ಲಿ ಕಟ್ಟಿಕೊಂಡಿರುವ ಟಾಕ್ಸಿನ್ ಗಳು, ಕೊಲೆಸ್ಟರಾಲ್, ಕಫ ಇತ್ಯಾದಿ ಮಾರನೆ ದಿನ ಮಲವಿಸರ್ಜನೆಯಲ್ಲಿ ಹೋಗಿಬಿಡುತ್ತದೆ. ನೀವು ಪಾಲೀಶ್ ಮಾಡಿದ ಅಕ್ಕಿಯನ್ನು ಊಟ ಮಾಡುತ್ತಿದ್ದರೆ ನಿಮಗೆ ಆಸಿಡಿಟಿ ಉಂಟಾಗುತ್ತದೆ. ಆಗ ನಿಮಗೆ ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ತಿನ್ನಬೇಕೆನಿಸುತ್ತದೆ. ಸಿಕ್ಕಿದ್ದನ್ನೆಲ್ಲಾ ತಿನ್ನಬೇಕೆನಿಸುತ್ತದೆ. ಜೋಪಾನ.
ಸಾವಯವ ಕೆಂಪು ಅಕ್ಕಿಯನ್ನು ಉಪಯೋಗಿಸಬೇಡಿ. ಅದರಲ್ಲಿ ನಮಗೆ ಅತಿ ಮುಖ್ಯವಾಗಿ ಬೇಕಾದ ಬಿ-ಕಾಂಪ್ಲೆಕ್ಸ್ ಇಲ್ಲ. ಮಲವಿಸರ್ಜನೆ ಏನೋ ಆಗುತ್ತದೆ. ಆದರೆ ಬಹಳ ಮುಖ್ಯವಾಗಿರುವ ಬಿ-ಕಾಂಪ್ಲೆಕ್ಸ್ ಇಲ್ಲದಿರುವ ಆ ಅಕ್ಕಿ ಊಟ ಮಾಡಿ ಏನು ಪ್ರಯೋಜನ? ನಿಮ್ಮ ದೇಹದ ಚರಂಡಿಯನ್ನು ಶುದ್ಧವಾಗಿಟ್ಟುಕೊಳ್ಳಿ. ನಮ್ಮ ಮನೆಯಲ್ಲಿರುವ ಚರಂಡಿಯನ್ನು ಹೇಗೆ ಚೊಕ್ಕಟವಾಗಿ ಇಟ್ಟುಕೊಳ್ಳುತ್ತೇವೋ, ಅದೇ ರೀತಿ ನಮ್ಮ ದೇಹದ ಚರಂಡಿಯನ್ನು ಚೊಕ್ಕಟವಾಗಿಟ್ಟುಕೊಳ್ಳಬೇಕು. ಮೈದಾ ಹಿಟ್ಟಿನಿಂದ ಮಾಡಿರುವ ತಿಂಡಿಗಳನ್ನು ಹತ್ತಿರವೂ ಸೇರಿಸಬೇಡಿ. ಅಂದರೆ ಮೈದಾ ಹಿಟ್ಟಿನಿಂದ ಮಾಡಿದ ಬ್ರೆಡ್, ಬಿಸ್ಕತ್ ಗಳು, ದೋಸೆ, ಕರಿದ ತಿಂಡಿಗಳು, ಸಿಹಿ ತಿಂಡಿಗಳು, ಪೂರಿ, ಚಪಾತಿ ಇತ್ಯಾದಿ
ಮೈದಾ ದಿಂದ ಗೋಂದು ತಯಾರಿಸುತ್ತಾರೆ ವಾಲ್ ಪೋಸ್ಟರ್ ಅಂಟಿಸಲು ಗೊತ್ತಾ ನಿಮಗೆ? ಆಮೇಲೆ ಆ ವಾಲ್ ಪೋಸ್ಟರ್ ನ ಕೀಳಲು ಎಷ್ಟು ಕಷ್ಟ ಗೊತ್ತಾ? ಅದೇ ರೀತಿಯಲ್ಲೇ ನಮ್ಮ ದೇಹದಲ್ಲೂ ಆ ಮೈದಾ ಕೆಲಸ ಮಾಡುವುದು. ಜೋಪಾನ, ಜೋಪಾನ ನಿಮ್ಮ ದೇಹ. ಸಾಧ್ಯವಾದಷ್ಟೂ ಕಾಯಿಸಿ ಆರಿದ ನೀರನ್ನು ಕುಡಿಯಿರಿ. ಈ ಮೇಲಿನ ತಿಂಡಿಗಳಿಂದ ಪಿತ್ತ ಅತೀ ಜಾಸ್ತಿಯಾಗುತ್ತದೆ. ನೀವುಗಳು ಬರೀ ಪಿತ್ತದಿಂದ ನರಳುತ್ತಿದ್ದರೆ ಮಾಮೂಲಿ ತಣ್ಣೀರನ್ನು ಕುಡಿಯಿರಿ. ಪಿತ್ತ ಮತ್ತು ಕಫ ಆಗಿದ್ದರೆ ಕಾದಾರಿದ ನೀರನ್ನು ಎರಡು ದೊಡ್ಡ ಲೋಟದಷ್ಟು ಕುಡಿಯಿರಿ. ಬರೀ ಕಫ ಇದ್ದರೆ ಬಿಸಿ ನೀರನ್ನು ಕುಡಿಯಿರಿ. ಪಿತ್ತ ಇರುವಾಗ ಬಿಸಿ ನೀರನ್ನು ಕುಡಿಯಬೇಡಿ.
ಯಾವಾಗಲೂ ನಿಮ್ಮ ಊಟಕ್ಕೆ ಪಾಲೀಶ್ ಮಾಡದೇ ಇರುವ ಕೆಂಪು ಕಜ್ಜಾಯ ಅಕ್ಕಿಯನ್ನೇ ಉಪಯೋಗಿಸಿರಿ. ನಿಮಗೆ ಒಂದು ಪಕ್ಷ ಕಜ್ಜಾಯ ಅಕ್ಕಿ ಸಿಗದಿದ್ದಲ್ಲಿ ಮಾಮೂಲಿ ಅಕ್ಕಿಯನ್ನೇ ಊಟ ಮಾಡಿ. ಎರಡು ಮೂರು ದಿನಕ್ಕೆ ಒಂದು ಸಲ ರಾತ್ರಿ ನಿಮ್ಮ ಊಟವಾದ ಎರಡು ಘಂಟೆಗಳ ಬಳಿಕ
ಇಸಬ್ ಗೋಲ್ ಎಂಬ ಹೊಟ್ಟನ್ನು ಒಂದು ಒಣಗಿದ ಲೋಟಕ್ಕೆ ಹಾಕಿ ಅದಕ್ಕೆ ಪೂರ್ತಿ ನೀರು ತುಂಬಿ ತಕ್ಷಣ ಕಲಕಿ ತಕ್ಷಣ ಕುಡಿಯಿರಿ.
ನಂತರ ಒಂದು ದೊಡ್ಡ ಲೋಟ ನೀರು ಕುಡಿಯಿರಿ. ಇದರಿಂದ ನಿಮ್ಮ ಹೊಟ್ಟೆಯಲ್ಲಿ ಕಟ್ಟಿಕೊಂಡಿರುವ ಟಾಕ್ಸಿನ್ ಗಳು, ಕೊಲೆಸ್ಟರಾಲ್, ಕಫ ಇತ್ಯಾದಿ ಮಾರನೆ ದಿನ ಮಲವಿಸರ್ಜನೆಯಲ್ಲಿ ಹೋಗಿಬಿಡುತ್ತದೆ. ನೀವು ಪಾಲೀಶ್ ಮಾಡಿದ ಅಕ್ಕಿಯನ್ನು ಊಟ ಮಾಡುತ್ತಿದ್ದರೆ ನಿಮಗೆ ಆಸಿಡಿಟಿ ಉಂಟಾಗುತ್ತದೆ. ಆಗ ನಿಮಗೆ ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ತಿನ್ನಬೇಕೆನಿಸುತ್ತದೆ. ಸಿಕ್ಕಿದ್ದನ್ನೆಲ್ಲಾ ತಿನ್ನಬೇಕೆನಿಸುತ್ತದೆ. ಜೋಪಾನ.
ಸಾವಯವ ಕೆಂಪು ಅಕ್ಕಿಯನ್ನು ಉಪಯೋಗಿಸಬೇಡಿ. ಅದರಲ್ಲಿ ನಮಗೆ ಅತಿ ಮುಖ್ಯವಾಗಿ ಬೇಕಾದ ಬಿ-ಕಾಂಪ್ಲೆಕ್ಸ್ ಇಲ್ಲ. ಮಲವಿಸರ್ಜನೆ ಏನೋ ಆಗುತ್ತದೆ. ಆದರೆ ಬಹಳ ಮುಖ್ಯವಾಗಿರುವ ಬಿ-ಕಾಂಪ್ಲೆಕ್ಸ್ ಇಲ್ಲದಿರುವ ಆ ಅಕ್ಕಿ ಊಟ ಮಾಡಿ ಏನು ಪ್ರಯೋಜನ? ನಿಮ್ಮ ದೇಹದ ಚರಂಡಿಯನ್ನು ಶುದ್ಧವಾಗಿಟ್ಟುಕೊಳ್ಳಿ. ನಮ್ಮ ಮನೆಯಲ್ಲಿರುವ ಚರಂಡಿಯನ್ನು ಹೇಗೆ ಚೊಕ್ಕಟವಾಗಿ ಇಟ್ಟುಕೊಳ್ಳುತ್ತೇವೋ, ಅದೇ ರೀತಿ ನಮ್ಮ ದೇಹದ ಚರಂಡಿಯನ್ನು ಚೊಕ್ಕಟವಾಗಿಟ್ಟುಕೊಳ್ಳಬೇಕು. ಮೈದಾ ಹಿಟ್ಟಿನಿಂದ ಮಾಡಿರುವ ತಿಂಡಿಗಳನ್ನು ಹತ್ತಿರವೂ ಸೇರಿಸಬೇಡಿ. ಅಂದರೆ ಮೈದಾ ಹಿಟ್ಟಿನಿಂದ ಮಾಡಿದ ಬ್ರೆಡ್, ಬಿಸ್ಕತ್ ಗಳು, ದೋಸೆ, ಕರಿದ ತಿಂಡಿಗಳು, ಸಿಹಿ ತಿಂಡಿಗಳು, ಪೂರಿ, ಚಪಾತಿ ಇತ್ಯಾದಿ
ಮೈದಾ ದಿಂದ ಗೋಂದು ತಯಾರಿಸುತ್ತಾರೆ ವಾಲ್ ಪೋಸ್ಟರ್ ಅಂಟಿಸಲು ಗೊತ್ತಾ ನಿಮಗೆ? ಆಮೇಲೆ ಆ ವಾಲ್ ಪೋಸ್ಟರ್ ನ ಕೀಳಲು ಎಷ್ಟು ಕಷ್ಟ ಗೊತ್ತಾ? ಅದೇ ರೀತಿಯಲ್ಲೇ ನಮ್ಮ ದೇಹದಲ್ಲೂ ಆ ಮೈದಾ ಕೆಲಸ ಮಾಡುವುದು. ಜೋಪಾನ, ಜೋಪಾನ ನಿಮ್ಮ ದೇಹ. ಸಾಧ್ಯವಾದಷ್ಟೂ ಕಾಯಿಸಿ ಆರಿದ ನೀರನ್ನು ಕುಡಿಯಿರಿ. ಈ ಮೇಲಿನ ತಿಂಡಿಗಳಿಂದ ಪಿತ್ತ ಅತೀ ಜಾಸ್ತಿಯಾಗುತ್ತದೆ. ನೀವುಗಳು ಬರೀ ಪಿತ್ತದಿಂದ ನರಳುತ್ತಿದ್ದರೆ ಮಾಮೂಲಿ ತಣ್ಣೀರನ್ನು ಕುಡಿಯಿರಿ. ಪಿತ್ತ ಮತ್ತು ಕಫ ಆಗಿದ್ದರೆ ಕಾದಾರಿದ ನೀರನ್ನು ಎರಡು ದೊಡ್ಡ ಲೋಟದಷ್ಟು ಕುಡಿಯಿರಿ. ಬರೀ ಕಫ ಇದ್ದರೆ ಬಿಸಿ ನೀರನ್ನು ಕುಡಿಯಿರಿ. ಪಿತ್ತ ಇರುವಾಗ ಬಿಸಿ ನೀರನ್ನು ಕುಡಿಯಬೇಡಿ.
ಮಂಗಳವಾರ, ಜುಲೈ 1, 2008
ಗಂಟಲು ನೋವು
ಮುಂದುವರೆದುದು
೨)-ಸೋಮಾರಿ ಬೇರನ್ನು ಲಿಂಬೆರಸದಲ್ಲಿ ತೇಯ್ದು ಗಂಟಲಿನ ಹೊರ್ಭಾಗಕ್ಕೆ ಹಚ್ಚಬೇಕು.
೩)-ಉಪ್ಪಿನಕಾಯಿಯನ್ನು ಸ್ವಲ್ಪ ತೆಗೆದುಕೊಂಡು ಗಂಟಲು ಮೂಳೆಗೆ(ಕೆನ್ನಾಲಿಗೆಗೆ) ಹಚ್ಚಬೇಕು. ಬಂದ ಎಂಜಲನ್ನು ಉಗುಳಬೇಕು.
೪)-ಸ್ವಲ್ಪ ಬಿಸಿನೀರನ್ನು ಕುಡಿಯುತ್ತಿರಬೇಕು
ಅಜೀರ್ಣದಿಂದ ಹೊಟ್ಟೆ ಉಬ್ಬರಿಸಿದರೆ:
೧)-ಊಟದ ಜೊತೆ ಬೆಳ್ಳುಳ್ಳಿ ತಿನ್ನಬೆಕು.
೨)-ಹಸಿ ಶುಂಠಿಯನ್ನು ತಿನ್ನಬೇಕು.
೩)-ಸ್ವಲ್ಪ ಜೀರಿಗೆಯನ್ನು ಅಗಿದು ತಿನ್ನಬೇಕು.
ಆಮಶಂಕೆಯಲ್ಲಾಗುವ ರಕ್ತಸ್ರಾವ ತಡೆಗಟ್ಟಲು:
ನಿಂಬೆಹಣ್ಣಿನ ಪಾನಕಕ್ಕೆ ಅಡಿಗೆ ಉಪ್ಪನ್ನು ಸೇರಿಸಿ ಕುಡಿಯುವುದರಿಂದ ಸ್ವಲ್ಪಮಟ್ಟಿನ ಗುಣ ಕಂಡುಬರುವುದು.
ಮೂತ್ರದ ಕಟ್ಟುವಿಕೆ:
೧)-ಚೆನ್ನಾಗಿ ಮಾಗಿದ ಅನಾನಸ್ ಹಣ್ಣಿನಿಂದ ತಯಾರಿಸಿದ ಪಾನಕ(ರಸ) ಸೇವಿಸಬೇಕು.
೨)-ಬಾಳೆಪಟ್ಟಿಯನ್ನು ಹಿಂಡಿ ರಸ ತೆಗೆದು ಒಂದು ಕಪ್ ರಸಕ್ಕೆ ಒಂದು ಸ್ಪೂನ್ ಹಸುವಿನ ತುಪ್ಪ ಸೇರಿಸಿ ಕುಡಿಯಬೇಕು.
ತಕ್ಷಣವೇ ಮೂತ್ರ ಸರಾಗವಾಗಿ ವಿಸರ್ಜನೆಯಾಗುತ್ತದೆ.
೩)-ಒಂದು ಕಪ್ ಟೀ ತಯಾರಿಸಿ ಅದಕ್ಕೆ ಒಂದು ಚಿಟಿಕೆ ಏಲಕ್ಕಿಪುಡಿ ಸೇರಿಸಿ ಕುಡಿದರೆ ಸರಾಗ ಮೂತ್ರವಿಸರ್ಜನೆಯಾಗುತ್ತದೆ.
೪)-ಕಬ್ಬಿನ ಹಾಲಿಗೆ ಎಳೆನೀರು, ಹಸಿಶುಂಠಿರಸ, ನಿಂಬೆರಸ ಸೇರಿಸಿ ಸೇವಿಸುವುದರಿಂದ ಗುಣಕಾರಿ.
೫)-ಎಳೆನೀರನ್ನು ಸೇವಿಸಿ.
೬)-ಮೂಲಂಗಿ ಸೊಪ್ಪಿನ ರಸ ಕುಡಿಯಬೇಕು.
ಜೇನುನೊಣ ಕಚ್ಚಿದಾಗ:
ಈರುಳ್ಳಿಯನ್ನು ಹೋಳುಮಾಡಿ ಒಂದು ಹೋಳಿನಿಂದ ಕಚ್ಚಿದ ಜಾಗಕ್ಕೆ ತಿಕ್ಕಬೇಕು.
ಶ್ರವಣಶಕ್ತಿ ಹೆಚ್ಚಿಸಲು: ಒಂದು ಬಟ್ಟಲು ಮಾವಿನಹಣ್ಣಿನ ರಸವನ್ನು ಹಾಲು ಮತ್ತು ಜೇನಿನೊಂದಿಗೆ ಪ್ರತಿದಿನ ಸೇವಿಸಬೇಕು.
ವಿಷಾಹಾರ ಸೇವಿಸಿದಾಗ: ಒಂದು ಟೀ ಚಮಚದಷ್ಟು ಸಾಸಿವೆ ಪುಡಿಯನ್ನು ಉಗುರುಬೆಚ್ಚಗಿನ ನೀರಿನಲ್ಲಿ ಸೇರಿಸಿ ಕುಡಿಯಬೇಕು.
ನಿದ್ರೆ ಬಾರದಿದ್ದರೆ: ಗಸಗಸೆಯ ಹಾಲನ್ನು ತೆಂಗಿನಕಾಯಿಯ ಹಾಲಿನೊಂದಿಗೆ ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ ಸೇವಿಸಬೇಕು.
೨)-ಸೋಮಾರಿ ಬೇರನ್ನು ಲಿಂಬೆರಸದಲ್ಲಿ ತೇಯ್ದು ಗಂಟಲಿನ ಹೊರ್ಭಾಗಕ್ಕೆ ಹಚ್ಚಬೇಕು.
೩)-ಉಪ್ಪಿನಕಾಯಿಯನ್ನು ಸ್ವಲ್ಪ ತೆಗೆದುಕೊಂಡು ಗಂಟಲು ಮೂಳೆಗೆ(ಕೆನ್ನಾಲಿಗೆಗೆ) ಹಚ್ಚಬೇಕು. ಬಂದ ಎಂಜಲನ್ನು ಉಗುಳಬೇಕು.
೪)-ಸ್ವಲ್ಪ ಬಿಸಿನೀರನ್ನು ಕುಡಿಯುತ್ತಿರಬೇಕು
ಅಜೀರ್ಣದಿಂದ ಹೊಟ್ಟೆ ಉಬ್ಬರಿಸಿದರೆ:
೧)-ಊಟದ ಜೊತೆ ಬೆಳ್ಳುಳ್ಳಿ ತಿನ್ನಬೆಕು.
೨)-ಹಸಿ ಶುಂಠಿಯನ್ನು ತಿನ್ನಬೇಕು.
೩)-ಸ್ವಲ್ಪ ಜೀರಿಗೆಯನ್ನು ಅಗಿದು ತಿನ್ನಬೇಕು.
ಆಮಶಂಕೆಯಲ್ಲಾಗುವ ರಕ್ತಸ್ರಾವ ತಡೆಗಟ್ಟಲು:
ನಿಂಬೆಹಣ್ಣಿನ ಪಾನಕಕ್ಕೆ ಅಡಿಗೆ ಉಪ್ಪನ್ನು ಸೇರಿಸಿ ಕುಡಿಯುವುದರಿಂದ ಸ್ವಲ್ಪಮಟ್ಟಿನ ಗುಣ ಕಂಡುಬರುವುದು.
ಮೂತ್ರದ ಕಟ್ಟುವಿಕೆ:
೧)-ಚೆನ್ನಾಗಿ ಮಾಗಿದ ಅನಾನಸ್ ಹಣ್ಣಿನಿಂದ ತಯಾರಿಸಿದ ಪಾನಕ(ರಸ) ಸೇವಿಸಬೇಕು.
೨)-ಬಾಳೆಪಟ್ಟಿಯನ್ನು ಹಿಂಡಿ ರಸ ತೆಗೆದು ಒಂದು ಕಪ್ ರಸಕ್ಕೆ ಒಂದು ಸ್ಪೂನ್ ಹಸುವಿನ ತುಪ್ಪ ಸೇರಿಸಿ ಕುಡಿಯಬೇಕು.
ತಕ್ಷಣವೇ ಮೂತ್ರ ಸರಾಗವಾಗಿ ವಿಸರ್ಜನೆಯಾಗುತ್ತದೆ.
೩)-ಒಂದು ಕಪ್ ಟೀ ತಯಾರಿಸಿ ಅದಕ್ಕೆ ಒಂದು ಚಿಟಿಕೆ ಏಲಕ್ಕಿಪುಡಿ ಸೇರಿಸಿ ಕುಡಿದರೆ ಸರಾಗ ಮೂತ್ರವಿಸರ್ಜನೆಯಾಗುತ್ತದೆ.
೪)-ಕಬ್ಬಿನ ಹಾಲಿಗೆ ಎಳೆನೀರು, ಹಸಿಶುಂಠಿರಸ, ನಿಂಬೆರಸ ಸೇರಿಸಿ ಸೇವಿಸುವುದರಿಂದ ಗುಣಕಾರಿ.
೫)-ಎಳೆನೀರನ್ನು ಸೇವಿಸಿ.
೬)-ಮೂಲಂಗಿ ಸೊಪ್ಪಿನ ರಸ ಕುಡಿಯಬೇಕು.
ಜೇನುನೊಣ ಕಚ್ಚಿದಾಗ:
ಈರುಳ್ಳಿಯನ್ನು ಹೋಳುಮಾಡಿ ಒಂದು ಹೋಳಿನಿಂದ ಕಚ್ಚಿದ ಜಾಗಕ್ಕೆ ತಿಕ್ಕಬೇಕು.
ಶ್ರವಣಶಕ್ತಿ ಹೆಚ್ಚಿಸಲು: ಒಂದು ಬಟ್ಟಲು ಮಾವಿನಹಣ್ಣಿನ ರಸವನ್ನು ಹಾಲು ಮತ್ತು ಜೇನಿನೊಂದಿಗೆ ಪ್ರತಿದಿನ ಸೇವಿಸಬೇಕು.
ವಿಷಾಹಾರ ಸೇವಿಸಿದಾಗ: ಒಂದು ಟೀ ಚಮಚದಷ್ಟು ಸಾಸಿವೆ ಪುಡಿಯನ್ನು ಉಗುರುಬೆಚ್ಚಗಿನ ನೀರಿನಲ್ಲಿ ಸೇರಿಸಿ ಕುಡಿಯಬೇಕು.
ನಿದ್ರೆ ಬಾರದಿದ್ದರೆ: ಗಸಗಸೆಯ ಹಾಲನ್ನು ತೆಂಗಿನಕಾಯಿಯ ಹಾಲಿನೊಂದಿಗೆ ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ ಸೇವಿಸಬೇಕು.
ಭಾನುವಾರ, ಜೂನ್ 22, 2008
ಮನೆ ಮದ್ದು-ಮುಂದುವರಿದದ್ದು
ಮುಂದುವರೆದದ್ದು
ಕಫ ಮತ್ತು ಕೆಮ್ಮು: ಹಸಿ ಶುಂಠಿಯರಸ ಮತ್ತು ವೀಳ್ಯೆದೆಲೆಯರಸವನ್ನು ಒಟ್ಟುಗೂಡಿಸಿ ಅದರಲ್ಲಿ ಜೇನುತುಪ್ಪವನ್ನು ಬೆರೆಸಿ ತಿನ್ನಬೇಕು.
ಶೀಘ್ರ ವಾಸಿಯಾಗುತ್ತದೆ.
ಸ್ತನದಲ್ಲಿ ಹಾಲು ತುಂಬಿಕೊಂಡು ಊದಿಕೊಂಡರೆ: ಪೂರ್ಣ ಅರಳಿದ ಹಿಡಿಮಲ್ಲಿಗೆ ಹೂಗಳನ್ನು ಎರಡೂ ಸ್ತನಗಳ ಮೇಲೆ ಇಟ್ಟು ಕಟ್ಟಬೇಕು ಅಥವಾ
ಹಸಿ ವೀಳ್ಯೆದೆಲೆ ಕಟ್ಟಿದರೂ ನಡೆಯುತ್ತದೆ.
ಅಜೀರ್ಣವಾದಾಗ: 1)-ಸ್ವಲ್ಪ ಓಮಕಾಳು(ಅಜವಾನ) ಸೇವಿಸಿ ಅಥವಾ ಅದರ ಕಷಾಯವನ್ನು ಕುಡಿಯಬೇಕು.
2)-ನೀರಿಗೆ ಒಂದು ಟೀ ಚಮಚ ನಿಂಬೆರಸ ಮತ್ತು ಒಂದು ಚಿಟಿಕೆ ಅಡುಗೆ ಸೋಡ ಬೆರೆಸಿ ಸೇವಿಸಿ.
ವಾಂತಿಯಾದಾಗ: ನಿಂಬೆಹಣ್ಣನ್ನು ಅರ್ಧ ಹೆಚ್ಚಿ ಅರ್ಧ ಹೋಳಿನಲ್ಲಿ ಸಕ್ಕರೆ ಹಾಕಿ ಕಾಯಿಸಿ ಸೇವಿಸಬೇಕು.
ಗಂಟಲು ನೋವು: ಸ್ವಲ್ಪ ತಿನ್ನುವ ಸುಣ್ಣಕ್ಕೆ ಅಷ್ಟೇ ಪ್ರಮಾಣದಲ್ಲಿ ಜೇನುತುಪ್ಪವನ್ನು ಸೇರಿಸಿ ಚೆನ್ನಾಗಿ ಕದಡಬೇಕು. ಅದನ್ನು ಗಂಟಲಿನ ಹೊರಭಾಗಕ್ಕೆ ಚೆನ್ನಾಗಿ ಲೇಪಿಸಬೇಕು.
ಕಫ ಮತ್ತು ಕೆಮ್ಮು: ಹಸಿ ಶುಂಠಿಯರಸ ಮತ್ತು ವೀಳ್ಯೆದೆಲೆಯರಸವನ್ನು ಒಟ್ಟುಗೂಡಿಸಿ ಅದರಲ್ಲಿ ಜೇನುತುಪ್ಪವನ್ನು ಬೆರೆಸಿ ತಿನ್ನಬೇಕು.
ಶೀಘ್ರ ವಾಸಿಯಾಗುತ್ತದೆ.
ಸ್ತನದಲ್ಲಿ ಹಾಲು ತುಂಬಿಕೊಂಡು ಊದಿಕೊಂಡರೆ: ಪೂರ್ಣ ಅರಳಿದ ಹಿಡಿಮಲ್ಲಿಗೆ ಹೂಗಳನ್ನು ಎರಡೂ ಸ್ತನಗಳ ಮೇಲೆ ಇಟ್ಟು ಕಟ್ಟಬೇಕು ಅಥವಾ
ಹಸಿ ವೀಳ್ಯೆದೆಲೆ ಕಟ್ಟಿದರೂ ನಡೆಯುತ್ತದೆ.
ಅಜೀರ್ಣವಾದಾಗ: 1)-ಸ್ವಲ್ಪ ಓಮಕಾಳು(ಅಜವಾನ) ಸೇವಿಸಿ ಅಥವಾ ಅದರ ಕಷಾಯವನ್ನು ಕುಡಿಯಬೇಕು.
2)-ನೀರಿಗೆ ಒಂದು ಟೀ ಚಮಚ ನಿಂಬೆರಸ ಮತ್ತು ಒಂದು ಚಿಟಿಕೆ ಅಡುಗೆ ಸೋಡ ಬೆರೆಸಿ ಸೇವಿಸಿ.
ವಾಂತಿಯಾದಾಗ: ನಿಂಬೆಹಣ್ಣನ್ನು ಅರ್ಧ ಹೆಚ್ಚಿ ಅರ್ಧ ಹೋಳಿನಲ್ಲಿ ಸಕ್ಕರೆ ಹಾಕಿ ಕಾಯಿಸಿ ಸೇವಿಸಬೇಕು.
ಗಂಟಲು ನೋವು: ಸ್ವಲ್ಪ ತಿನ್ನುವ ಸುಣ್ಣಕ್ಕೆ ಅಷ್ಟೇ ಪ್ರಮಾಣದಲ್ಲಿ ಜೇನುತುಪ್ಪವನ್ನು ಸೇರಿಸಿ ಚೆನ್ನಾಗಿ ಕದಡಬೇಕು. ಅದನ್ನು ಗಂಟಲಿನ ಹೊರಭಾಗಕ್ಕೆ ಚೆನ್ನಾಗಿ ಲೇಪಿಸಬೇಕು.
ಶನಿವಾರ, ಜೂನ್ 21, 2008
ಮನೆ ಮದ್ದು-1
ಮನೆ ಮದ್ದು-1
ಹೊಟ್ಟೆನೋವಿಗೆ: ಬೆಲ್ಲದಲ್ಲಿ ಕಾಳುಮೆಣಸಿನಪುಡಿ ಬೆರೆಸಿ ಸೇವಿಸಿದರೆ ನೋವು ಶಮನವಾಗುತ್ತದೆ
ಒಣಕೆಮ್ಮು: ಬೆಲ್ಲದಲ್ಲಿ ಅರಿಶಿಣಪುಡಿ ಸೇರಿಸಿ ಸೇವಿಸಿದರೆ ಒಣಕೆಮ್ಮು ನಿವಾರಣೆಯಾಗಿ ಗಂಟಲಿಗೆ ಹಿತವಾಗಿರುತ್ತದೆ.
ಹೊಟ್ಟೆನೋವಿಗೆ: ಬೆಲ್ಲದಲ್ಲಿ ಕಾಳುಮೆಣಸಿನಪುಡಿ ಬೆರೆಸಿ ಸೇವಿಸಿದರೆ ನೋವು ಶಮನವಾಗುತ್ತದೆ
ಒಣಕೆಮ್ಮು: ಬೆಲ್ಲದಲ್ಲಿ ಅರಿಶಿಣಪುಡಿ ಸೇರಿಸಿ ಸೇವಿಸಿದರೆ ಒಣಕೆಮ್ಮು ನಿವಾರಣೆಯಾಗಿ ಗಂಟಲಿಗೆ ಹಿತವಾಗಿರುತ್ತದೆ.
ಮಂಗಳವಾರ, ಜೂನ್ 10, 2008
ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿ
09-6-2008 ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿ
ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿಯನ್ನೇ ಯಾವಾಗಲೂ ಊಟಕ್ಕೆ ಉಪಯೋಗಿಸಿ ಆನಂದವನ್ನು ಪಡೆಯಿರಿ. ಈ ಅಕ್ಕಿಗೆ ಆಡು ಭಾಷೆಯಲ್ಲಿ ಕೆಂಪು ಮುಂಡಗ ಅಕ್ಕಿ ಅಥವಾ ಕಜ್ಜಾಯ ಅಕ್ಕಿ ಎಂದೂ ಕರೆಯುತ್ತಾರೆ. ಈ ಅಕ್ಕಿಯಲ್ಲಿ ಬೇಕಾದಷ್ಟು ಪೌಷ್ಟಿಕಾಂಶಗಳು ಇವೆ. ಹೊರಗಡೆ ಯಾವುದೇ ಅಂಗಡಿಯಲ್ಲಿ ಇದು ದೊರಕುವಂತಾದ್ದಲ್ಲ. ಕೋಟಿ ರೂಪಾಯಿಗಳನ್ನು ಕೊಟ್ಟರೂ ಸಿಗುವುದಿಲ್ಲ. ಊಟ ಮಾಡುತ್ತಿರುವಾಗಲೇ ಈ ಪೌಷ್ಟಿಕಾಂಶಗಳು ದೇಹದಲ್ಲಿರುವ ಎಲ್ಲ ಕಸಕಡ್ಡಿಗಳನ್ನೂ, ಅತಿಯಾದ ವಾತ ಪಿತ್ತ ಕಫಗಳನ್ನೂ, ಯಾವುದೇ ರೀತಿಯ ಬೆನ್ನುನೋವು, ತಲೆನೋವು, ಸೊಂಟನೋವು, ಕಾಲುನೋವು, ತಲೆಭಾರ, ನಿದ್ರೆ ಸರಿಯಾಗಿ ಬಾರದಿರುವುದು, ಕೊಲೆಸ್ಟರಾಲನ್ನು ಪೂರ್ತಿಯಾಗಿ ಕರಗಿಸುವುದು. ಮುಂದೆ ಎಂದೆಂದಿಗೂ ಕೊಲೆಸ್ಟರಾಲ್ ದೇಹದಲ್ಲಿ ಸೇರಲು ಅವಕಾಶ ಕೊಡುವುದಿಲ್ಲ, ಬ್ಲಡ್ ಶುಗರನ್ನು ೧೦೦ ಕ್ಕೆ ೧೦೦ ರಷ್ಟು ಕಡಿಮೆಮಾಡುವುದು. ಇದನ್ನೆಲ್ಲ ವಿಜ್ನಾನಿಗಳು ದೃಡಪಡಿಸಿದ್ದಾರೆ. ಮನೆಯಲ್ಲಿ ಪಿ.ಸಿ. ಇದ್ದು ಇಂಟರ್ನೆಟ್ ಹಾಕಿಸಿಕೊಂಡಿರುವವರು ಗೂಗಲ್ ನಲ್ಲಿ ಜಾಲಾಡಿನೋಡಿ. ಈ ಕಜ್ಜಾಯ ಅಕ್ಕಿಗೆ ೧೦೦ ಕ್ಕೆ ೧೦೦ ರಷ್ಟು ಕ್ಯಾನ್ಸರ್ ವಾಸಿಮಾಡುವ ಶಕ್ತಿ ಇದೆ.
ಇದಲ್ಲದೆ ಆಸಿಡಿಟಿ, ಗ್ಯಾಸ್ಟ್ರೈಟಿಸ್, ಬೊಜ್ಜು ಈ ಎಲ್ಲವೂ ೧೦೦% ವಾಸಿಯಾಗುತ್ತದೆ. ಇದಲ್ಲದೇ ಮುಖವೂ ಕಾಂತಿಯುಕ್ತವಾಗುತ್ತದೆ. ಕಣ್ಣುಗಳು ಮಿನುಗುತ್ತವೆ. ಚಟುವಟಿಕೆ ಜಾಸ್ತಿಯಾಗುತ್ತದೆ. ಊಟ ಮಾಡಿದ ತಕ್ಷಣ ಹೊಟ್ಟೆ ಭಾರವಾಗುವುದಿಲ್ಲ. ಬ್ಲೋಟಿಂಗ್ ಅನುಭವ ಇರುವುದಿಲ್ಲ. ಹೊಟ್ಟೆಯಲ್ಲಿ ಸಂಕಟವಾಗುವುದೂ ನಿಂತುಹೋಗುತ್ತದೆ. ಹೊಟ್ಟೆ ಯಾವಾಗಲೂ ತಂಪಾಗಿರುತ್ತದೆ. ಮಲಬದ್ದತೆ ನಿರ್ನಾಮವಾಗಿ ದೊಡ್ಡಕರುಳಿನಲ್ಲಿ ಕಟ್ಟಿಕೊಂಡಿರುವ ಅತ್ಯಂತ ಕಟ್ಟಕಡೆ ಪಾಚಿಯೂ ಸಹ ಕೊಚ್ಚಿಕೊಂಡು ಹೋಗುತ್ತದೆ. ಮಲವಿಸರ್ಜನೆಯ ಬಳಿಕ ದೇಹ ಮತ್ತು ಮನಸ್ಸು ಆನಂದಮಯವಾಗುತ್ತದೆ. ಪ್ರತಿದಿನ ಮಲವಿಸರ್ಜನೆಯ ನಂತರ ದೇಹ ಮತ್ತು ಮನಸ್ಸು ಹಗುರವಾಗಿ ಚಟುವಟಿಕೆಯಿಂದ ಕೂಡಿರುತ್ತದೆ. ಕೆಂಪು ಅಕ್ಕಿಯಲ್ಲಿರುವ ಅತ್ಯಂತ ಶಕ್ತಿ ಬೇರೆ ಯಾವುದೇ ಇಲ್ಲ ಎಂದು ಕಾಣಿಸುತ್ತದೆ. ಎಲ್ಲ ಧಾನ್ಯಗಳಿಗೂ ತನ್ನದೇ ಆದ ಶಕ್ತಿ ಇರುತ್ತದೆ. ಎಲ್ಲಾ ಕಾಲಕ್ಕೂ ಹೊಟ್ಟಿನಿಂದ ಕೂಡಿದ ಕೆಂಪು ಅಕ್ಕಿಯೇ ಸರ್ವಶ್ರೇಷ್ಟ ವಾದುದು.
ಬರೆದವರು : ಹೆಚ್.ಕೆ.ಸತ್ಯಪ್ರಕಾಶ್
೯೮೮೬೩ ೩೪೬೬೭
ಇ-ಮೈಲ್: ಎಸ್ಪಿ೧೯೩೯@ಜಿಮೈಲ್.kaaM
ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿಯನ್ನೇ ಯಾವಾಗಲೂ ಊಟಕ್ಕೆ ಉಪಯೋಗಿಸಿ ಆನಂದವನ್ನು ಪಡೆಯಿರಿ. ಈ ಅಕ್ಕಿಗೆ ಆಡು ಭಾಷೆಯಲ್ಲಿ ಕೆಂಪು ಮುಂಡಗ ಅಕ್ಕಿ ಅಥವಾ ಕಜ್ಜಾಯ ಅಕ್ಕಿ ಎಂದೂ ಕರೆಯುತ್ತಾರೆ. ಈ ಅಕ್ಕಿಯಲ್ಲಿ ಬೇಕಾದಷ್ಟು ಪೌಷ್ಟಿಕಾಂಶಗಳು ಇವೆ. ಹೊರಗಡೆ ಯಾವುದೇ ಅಂಗಡಿಯಲ್ಲಿ ಇದು ದೊರಕುವಂತಾದ್ದಲ್ಲ. ಕೋಟಿ ರೂಪಾಯಿಗಳನ್ನು ಕೊಟ್ಟರೂ ಸಿಗುವುದಿಲ್ಲ. ಊಟ ಮಾಡುತ್ತಿರುವಾಗಲೇ ಈ ಪೌಷ್ಟಿಕಾಂಶಗಳು ದೇಹದಲ್ಲಿರುವ ಎಲ್ಲ ಕಸಕಡ್ಡಿಗಳನ್ನೂ, ಅತಿಯಾದ ವಾತ ಪಿತ್ತ ಕಫಗಳನ್ನೂ, ಯಾವುದೇ ರೀತಿಯ ಬೆನ್ನುನೋವು, ತಲೆನೋವು, ಸೊಂಟನೋವು, ಕಾಲುನೋವು, ತಲೆಭಾರ, ನಿದ್ರೆ ಸರಿಯಾಗಿ ಬಾರದಿರುವುದು, ಕೊಲೆಸ್ಟರಾಲನ್ನು ಪೂರ್ತಿಯಾಗಿ ಕರಗಿಸುವುದು. ಮುಂದೆ ಎಂದೆಂದಿಗೂ ಕೊಲೆಸ್ಟರಾಲ್ ದೇಹದಲ್ಲಿ ಸೇರಲು ಅವಕಾಶ ಕೊಡುವುದಿಲ್ಲ, ಬ್ಲಡ್ ಶುಗರನ್ನು ೧೦೦ ಕ್ಕೆ ೧೦೦ ರಷ್ಟು ಕಡಿಮೆಮಾಡುವುದು. ಇದನ್ನೆಲ್ಲ ವಿಜ್ನಾನಿಗಳು ದೃಡಪಡಿಸಿದ್ದಾರೆ. ಮನೆಯಲ್ಲಿ ಪಿ.ಸಿ. ಇದ್ದು ಇಂಟರ್ನೆಟ್ ಹಾಕಿಸಿಕೊಂಡಿರುವವರು ಗೂಗಲ್ ನಲ್ಲಿ ಜಾಲಾಡಿನೋಡಿ. ಈ ಕಜ್ಜಾಯ ಅಕ್ಕಿಗೆ ೧೦೦ ಕ್ಕೆ ೧೦೦ ರಷ್ಟು ಕ್ಯಾನ್ಸರ್ ವಾಸಿಮಾಡುವ ಶಕ್ತಿ ಇದೆ.
ಇದಲ್ಲದೆ ಆಸಿಡಿಟಿ, ಗ್ಯಾಸ್ಟ್ರೈಟಿಸ್, ಬೊಜ್ಜು ಈ ಎಲ್ಲವೂ ೧೦೦% ವಾಸಿಯಾಗುತ್ತದೆ. ಇದಲ್ಲದೇ ಮುಖವೂ ಕಾಂತಿಯುಕ್ತವಾಗುತ್ತದೆ. ಕಣ್ಣುಗಳು ಮಿನುಗುತ್ತವೆ. ಚಟುವಟಿಕೆ ಜಾಸ್ತಿಯಾಗುತ್ತದೆ. ಊಟ ಮಾಡಿದ ತಕ್ಷಣ ಹೊಟ್ಟೆ ಭಾರವಾಗುವುದಿಲ್ಲ. ಬ್ಲೋಟಿಂಗ್ ಅನುಭವ ಇರುವುದಿಲ್ಲ. ಹೊಟ್ಟೆಯಲ್ಲಿ ಸಂಕಟವಾಗುವುದೂ ನಿಂತುಹೋಗುತ್ತದೆ. ಹೊಟ್ಟೆ ಯಾವಾಗಲೂ ತಂಪಾಗಿರುತ್ತದೆ. ಮಲಬದ್ದತೆ ನಿರ್ನಾಮವಾಗಿ ದೊಡ್ಡಕರುಳಿನಲ್ಲಿ ಕಟ್ಟಿಕೊಂಡಿರುವ ಅತ್ಯಂತ ಕಟ್ಟಕಡೆ ಪಾಚಿಯೂ ಸಹ ಕೊಚ್ಚಿಕೊಂಡು ಹೋಗುತ್ತದೆ. ಮಲವಿಸರ್ಜನೆಯ ಬಳಿಕ ದೇಹ ಮತ್ತು ಮನಸ್ಸು ಆನಂದಮಯವಾಗುತ್ತದೆ. ಪ್ರತಿದಿನ ಮಲವಿಸರ್ಜನೆಯ ನಂತರ ದೇಹ ಮತ್ತು ಮನಸ್ಸು ಹಗುರವಾಗಿ ಚಟುವಟಿಕೆಯಿಂದ ಕೂಡಿರುತ್ತದೆ. ಕೆಂಪು ಅಕ್ಕಿಯಲ್ಲಿರುವ ಅತ್ಯಂತ ಶಕ್ತಿ ಬೇರೆ ಯಾವುದೇ ಇಲ್ಲ ಎಂದು ಕಾಣಿಸುತ್ತದೆ. ಎಲ್ಲ ಧಾನ್ಯಗಳಿಗೂ ತನ್ನದೇ ಆದ ಶಕ್ತಿ ಇರುತ್ತದೆ. ಎಲ್ಲಾ ಕಾಲಕ್ಕೂ ಹೊಟ್ಟಿನಿಂದ ಕೂಡಿದ ಕೆಂಪು ಅಕ್ಕಿಯೇ ಸರ್ವಶ್ರೇಷ್ಟ ವಾದುದು.
ಬರೆದವರು : ಹೆಚ್.ಕೆ.ಸತ್ಯಪ್ರಕಾಶ್
೯೮೮೬೩ ೩೪೬೬೭
ಇ-ಮೈಲ್: ಎಸ್ಪಿ೧೯೩೯@ಜಿಮೈಲ್.kaaM
ಭಾನುವಾರ, ಏಪ್ರಿಲ್ 27, 2008
ಬೇಸಿಗೆಯ ಆರೋಗ್ಯಕರ ಪಾನೀಯಗಳು
ಸಿಹಿ ಲಸ್ಸಿ:
ಸಿಹಿ ಮೊಸರಿಗೆ ಕಲ್ಲುಸಕ್ಕರೆ ಬೆರೆಸಿ ಮಿಕ್ಸರ್ ನಲ್ಲಿ ತಿರುವಿ ಲಸ್ಸಿ ತಯಾರಿಸಬೇಕು.
ಕಬ್ಬಿನ ಹಾಲು :
ಇದಕ್ಕೆ ನಿಂಬೆರಸ ಬೆರೆಸಿ ಸೇವಿಸಬೇಕು. ಇದು ಬೇಸಿಗೆಯಲ್ಲಿ ಮಾತ್ರ. ಬೇರೆ ಕಾಲಗಳಲ್ಲಿ
ಬರೀ ಕಬ್ಬಿನ ರಸ ಸೇವಿಸಬೇಕು. ಅದಕ್ಕೆ ಸಕ್ಕರೆ, ಬೆಲ್ಲ, ಜೇನುತುಪ್ಪ ಇತ್ಯಾದಿಗಳನ್ನು ಬೆರೆಸಬಾರಾದು.
ಕಲ್ಲಂಗಡಿ ಜ್ಯೂಸ್:
ಕಲ್ಲಂಗಡಿ ಹಣ್ಣಿನ ತಿರುಳಿಗೆ ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಕಾಳುಮೆಣಸಿನಪುಡಿ ಬೆರೆಸಿ ಮಿಕ್ಸಿ ಯಲ್ಲಿ ತಿರುವಬೇಕು.
ರಾಗಿ ಪಾನೀಯ:
ಮೊಳಕೆ ಬರಿಸಿದ ರಾಗಿ ರುಬ್ಬಿ ಸೋಸಿ, ಅದಕ್ಕೆ ಬೆಲ್ಲ ಹಾಕಿ ತಣ್ಣಗೆ ಅಥವಾ ಬಿಸಿ ಮಾಡಿ ಸೇವಿಸಬಹುದು.
ಟೊಮೇಟೋ ಪಾನೀಯ:
ಮೂರು ಟೋಮೇಟೋಗಳನ್ನು ಹೆಚ್ಚಿ ರುಬ್ಬಿ, ಅದಕ್ಕೆ ಕಿತ್ತಳೆ, ನಿಂಬೆ ಅಥವಾ ಮೋಸಂಬಿ ರಸ ಬೆರೆಸಿ.
ಹೆಸರಿನ ಪೇಯ:
ಹೆಸರು ಕಾಳನ್ನು ಹುರಿದು ಪುಡಿ ಮಾಡಿ, ನೀರು ಹಾಗೂ ಬೆಲ್ಲ ಸೇರಿಸಿ ಸೇವಿಸಿ.
ಕಿತ್ತಳೆ ಲಸ್ಸಿ:
ಸಿಹಿ ಮೊಸರು ೧ ಕಪ್, ಕಿತ್ತಳೆ ರಸ ೧ ಕಪ್, ಸ್ವಲ್ಪ ಸಕ್ಕರೆ ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ ಕುಡಿಯಿರಿ.
ರಸಾಯನ: ಸಿಹಿ ಮಾವಿನಹಣ್ಣನ್ನು ಕತ್ತರಿಸಿ ಸಕ್ಕರೆ ಜೊತೆ ಬೆರೆಸಿ ಮಿಕ್ಸರ್ ನಲ್ಲಿ ರುಬ್ಬಿ ನೀರಿನ ಬದಲು ಹಾಲು ಬೆರೆಸಿದರೆ ಮಾವಿನ ರಸಾಯನ ಅಥವಾ ಮಿಲ್ಕ್ ಶೇಕ್ ಸಿದ್ಧ. ಮಾವಿನ ಹಣ್ಣಿನ ಬದಲು ಬಾಳೆಹಣ್ಣಿನಿಂದಲೂ ತಯಾರಿಸಬಹುದು.
ಎಳ್ಳಿನ ನೀರು:
ಬಿಳಿ ಎಳ್ಳನ್ನು ಹುರಿದು ಪುಡಿ ಮಾಡಿ ಅದಕ್ಕೆ ನೀರು, ಬೆಲ್ಲ, ಚಿಟಿಕೆ ಏಲಕ್ಕಿ ಪುಡಿ ಬೆರೆಸಬೇಕು.
ಈ ಮೇಲಿನ ಪಾನೀಯಗಳು ದೇಹವನ್ನು ತಂಪಾಗಿಡುತ್ತವೆ. ಬಾಯಾರಿಕೆ, ಸುಸ್ತು ನೀಗಿಸುತ್ತದೆ. ಅಗತ್ಯ ಪೋಷಕಾಂಶಗಳು, ನೀರಿನ ಅಂಶವನ್ನು ದೇಹಕ್ಕೆ ಪೂರೈಸುತ್ತದೆ.
ಸಿಹಿ ಮೊಸರಿಗೆ ಕಲ್ಲುಸಕ್ಕರೆ ಬೆರೆಸಿ ಮಿಕ್ಸರ್ ನಲ್ಲಿ ತಿರುವಿ ಲಸ್ಸಿ ತಯಾರಿಸಬೇಕು.
ಕಬ್ಬಿನ ಹಾಲು :
ಇದಕ್ಕೆ ನಿಂಬೆರಸ ಬೆರೆಸಿ ಸೇವಿಸಬೇಕು. ಇದು ಬೇಸಿಗೆಯಲ್ಲಿ ಮಾತ್ರ. ಬೇರೆ ಕಾಲಗಳಲ್ಲಿ
ಬರೀ ಕಬ್ಬಿನ ರಸ ಸೇವಿಸಬೇಕು. ಅದಕ್ಕೆ ಸಕ್ಕರೆ, ಬೆಲ್ಲ, ಜೇನುತುಪ್ಪ ಇತ್ಯಾದಿಗಳನ್ನು ಬೆರೆಸಬಾರಾದು.
ಕಲ್ಲಂಗಡಿ ಜ್ಯೂಸ್:
ಕಲ್ಲಂಗಡಿ ಹಣ್ಣಿನ ತಿರುಳಿಗೆ ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಕಾಳುಮೆಣಸಿನಪುಡಿ ಬೆರೆಸಿ ಮಿಕ್ಸಿ ಯಲ್ಲಿ ತಿರುವಬೇಕು.
ರಾಗಿ ಪಾನೀಯ:
ಮೊಳಕೆ ಬರಿಸಿದ ರಾಗಿ ರುಬ್ಬಿ ಸೋಸಿ, ಅದಕ್ಕೆ ಬೆಲ್ಲ ಹಾಕಿ ತಣ್ಣಗೆ ಅಥವಾ ಬಿಸಿ ಮಾಡಿ ಸೇವಿಸಬಹುದು.
ಟೊಮೇಟೋ ಪಾನೀಯ:
ಮೂರು ಟೋಮೇಟೋಗಳನ್ನು ಹೆಚ್ಚಿ ರುಬ್ಬಿ, ಅದಕ್ಕೆ ಕಿತ್ತಳೆ, ನಿಂಬೆ ಅಥವಾ ಮೋಸಂಬಿ ರಸ ಬೆರೆಸಿ.
ಹೆಸರಿನ ಪೇಯ:
ಹೆಸರು ಕಾಳನ್ನು ಹುರಿದು ಪುಡಿ ಮಾಡಿ, ನೀರು ಹಾಗೂ ಬೆಲ್ಲ ಸೇರಿಸಿ ಸೇವಿಸಿ.
ಕಿತ್ತಳೆ ಲಸ್ಸಿ:
ಸಿಹಿ ಮೊಸರು ೧ ಕಪ್, ಕಿತ್ತಳೆ ರಸ ೧ ಕಪ್, ಸ್ವಲ್ಪ ಸಕ್ಕರೆ ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ ಕುಡಿಯಿರಿ.
ರಸಾಯನ: ಸಿಹಿ ಮಾವಿನಹಣ್ಣನ್ನು ಕತ್ತರಿಸಿ ಸಕ್ಕರೆ ಜೊತೆ ಬೆರೆಸಿ ಮಿಕ್ಸರ್ ನಲ್ಲಿ ರುಬ್ಬಿ ನೀರಿನ ಬದಲು ಹಾಲು ಬೆರೆಸಿದರೆ ಮಾವಿನ ರಸಾಯನ ಅಥವಾ ಮಿಲ್ಕ್ ಶೇಕ್ ಸಿದ್ಧ. ಮಾವಿನ ಹಣ್ಣಿನ ಬದಲು ಬಾಳೆಹಣ್ಣಿನಿಂದಲೂ ತಯಾರಿಸಬಹುದು.
ಎಳ್ಳಿನ ನೀರು:
ಬಿಳಿ ಎಳ್ಳನ್ನು ಹುರಿದು ಪುಡಿ ಮಾಡಿ ಅದಕ್ಕೆ ನೀರು, ಬೆಲ್ಲ, ಚಿಟಿಕೆ ಏಲಕ್ಕಿ ಪುಡಿ ಬೆರೆಸಬೇಕು.
ಈ ಮೇಲಿನ ಪಾನೀಯಗಳು ದೇಹವನ್ನು ತಂಪಾಗಿಡುತ್ತವೆ. ಬಾಯಾರಿಕೆ, ಸುಸ್ತು ನೀಗಿಸುತ್ತದೆ. ಅಗತ್ಯ ಪೋಷಕಾಂಶಗಳು, ನೀರಿನ ಅಂಶವನ್ನು ದೇಹಕ್ಕೆ ಪೂರೈಸುತ್ತದೆ.
ಶುಕ್ರವಾರ, ಏಪ್ರಿಲ್ 25, 2008
ಬೇಸಿಗೆ ಕಾಲದಲ್ಲಿ ಆಹಾರ
ಪ್ರಕೃತಿಯಲ್ಲಿ ಕಾಲಗಳು ಬದಲಾವಣೆ ಆಗುತ್ತಿರುತ್ತವೆ. ಅದರಲ್ಲೂ ಈ ಬೇಸಿಗೆ ಕಾಲ ಅನ್ನುವುದು ಬಹಳ ತಾಪವನ್ನುಂಟು ಮಾಡುವಂತಾದ್ದು.
ಈ ಬೇಸಿಗೆಯಲ್ಲಿ ನಾವುಗಳು ಆಹಾರದಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ಬೇಸಿಗೆಯಲ್ಲಿ ಸೂರ್ಯನ ತಾಪದಿಂದಾಗಿ ದೇಹ ಬಳಲುತ್ತದೆ. ದೇಹದಲ್ಲಿ ನೀರಿನ ಅಂಶ ಕಡಿಮೆಯಾಗುತ್ತದೆ. ಶಕ್ತಿ ಕುಂದುತ್ತದೆ. ಜೀರ್ಣಶಕ್ತಿ ಕಡಿಮೆಯಾಗುತ್ತದೆ. ಹಾಗಾಗಿ ದೇಹ ತಂಪು ಮಾಡುವ, ಜಲ ಅಂಶ ಹೆಚ್ಚು ಇರುವ ಆಹಾರ, ಜ್ಯೂಸ್ ಗಳನ್ನು ಸೇವಿಸಬೇಕು. ಅವು ಜೀರ್ಣಕ್ರಿಯೆಗೂ ಸಹಕಾರಿಯಾಗುವಂತೆ ಇರಬೇಕು. ಉಷ್ಣದ ಪಾನೀಯಗಳನ್ನು ಸೇವಿಸಕೂಡದು. ಉಪ್ಪು, ಹುಳಿ, ಖಾರರಸಗಳುಳ್ಳ ಸಾಧ್ಯವಾದಷ್ಟೂ ಕಡಿಮೆ ಮಾಡಬೇಕು. ಎಣ್ಣೆಯಲ್ಲಿ ಕರಿದ ತಿಂಡಿಗಳಿಂದ ದೂರವಿರಬೇಕು. ಮೈದಾ ಹಿಟ್ಟಿನಿಂದ ತಯಾರಿಸಿದ ಸಿಹಿ ಮತ್ತು ಖಾರದ ತಿಂಡಿಗಳನ್ನು ಸೇವಿಸಲೇಬಾರದು.
ಬೇಸಿಗೆಯಲ್ಲಿ ಆರೋಗ್ಯಕರ ಪಾನೀಯಗಳು:
೧)-ದ್ರಾಕ್ಷಿ ಜ್ಯೂಸ್: ಒಣ ದ್ರಾಕ್ಷಿ ಹಾಗೂ ಒಂದು ಕಪ್ನಷ್ಟು ಹಸಿ ದ್ರಾಕ್ಷಿ ಬೆರೆಸಿ ರುಬ್ಬಿ ಜ್ಯೂಸ್ ತಯಾರಿಸಬೇಕು. ಒಣ ದ್ರಾಕ್ಷಿ ಸಿಹಿಯಾಗಿರುವುದರಿಂದ ಜ್ಯೂಸ್ ಗೆ ಸಕ್ಕರೆ ಬೆರೆಸುವ ಅಗತ್ಯವಿಲ್ಲ. ಯಾವುದೇ ಹಣ್ಣಿನ ಪಾನೀಯಕ್ಕೂ ಸಕ್ಕರೆ ಬೆರೆಸಬೇಡಿ. ಬೇಕಿದ್ದರೆ ಜೇನುತುಪ್ಪ ಬೆರೆಸಿ ಕುಡಿಯಿರಿ.
..................................................................ಮುಂದುವರೆಯುವುದು
ಈ ಬೇಸಿಗೆಯಲ್ಲಿ ನಾವುಗಳು ಆಹಾರದಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ಬೇಸಿಗೆಯಲ್ಲಿ ಸೂರ್ಯನ ತಾಪದಿಂದಾಗಿ ದೇಹ ಬಳಲುತ್ತದೆ. ದೇಹದಲ್ಲಿ ನೀರಿನ ಅಂಶ ಕಡಿಮೆಯಾಗುತ್ತದೆ. ಶಕ್ತಿ ಕುಂದುತ್ತದೆ. ಜೀರ್ಣಶಕ್ತಿ ಕಡಿಮೆಯಾಗುತ್ತದೆ. ಹಾಗಾಗಿ ದೇಹ ತಂಪು ಮಾಡುವ, ಜಲ ಅಂಶ ಹೆಚ್ಚು ಇರುವ ಆಹಾರ, ಜ್ಯೂಸ್ ಗಳನ್ನು ಸೇವಿಸಬೇಕು. ಅವು ಜೀರ್ಣಕ್ರಿಯೆಗೂ ಸಹಕಾರಿಯಾಗುವಂತೆ ಇರಬೇಕು. ಉಷ್ಣದ ಪಾನೀಯಗಳನ್ನು ಸೇವಿಸಕೂಡದು. ಉಪ್ಪು, ಹುಳಿ, ಖಾರರಸಗಳುಳ್ಳ ಸಾಧ್ಯವಾದಷ್ಟೂ ಕಡಿಮೆ ಮಾಡಬೇಕು. ಎಣ್ಣೆಯಲ್ಲಿ ಕರಿದ ತಿಂಡಿಗಳಿಂದ ದೂರವಿರಬೇಕು. ಮೈದಾ ಹಿಟ್ಟಿನಿಂದ ತಯಾರಿಸಿದ ಸಿಹಿ ಮತ್ತು ಖಾರದ ತಿಂಡಿಗಳನ್ನು ಸೇವಿಸಲೇಬಾರದು.
ಬೇಸಿಗೆಯಲ್ಲಿ ಆರೋಗ್ಯಕರ ಪಾನೀಯಗಳು:
೧)-ದ್ರಾಕ್ಷಿ ಜ್ಯೂಸ್: ಒಣ ದ್ರಾಕ್ಷಿ ಹಾಗೂ ಒಂದು ಕಪ್ನಷ್ಟು ಹಸಿ ದ್ರಾಕ್ಷಿ ಬೆರೆಸಿ ರುಬ್ಬಿ ಜ್ಯೂಸ್ ತಯಾರಿಸಬೇಕು. ಒಣ ದ್ರಾಕ್ಷಿ ಸಿಹಿಯಾಗಿರುವುದರಿಂದ ಜ್ಯೂಸ್ ಗೆ ಸಕ್ಕರೆ ಬೆರೆಸುವ ಅಗತ್ಯವಿಲ್ಲ. ಯಾವುದೇ ಹಣ್ಣಿನ ಪಾನೀಯಕ್ಕೂ ಸಕ್ಕರೆ ಬೆರೆಸಬೇಡಿ. ಬೇಕಿದ್ದರೆ ಜೇನುತುಪ್ಪ ಬೆರೆಸಿ ಕುಡಿಯಿರಿ.
..................................................................ಮುಂದುವರೆಯುವುದು
ಗುರುವಾರ, ಏಪ್ರಿಲ್ 24, 2008
ಕೂದಲು ಉದುರುವುದು
ಕೂದಲು ಉದುರುವುದಕ್ಕೆ ಶಕ್ತಿಹೀನತೆಯೇ ಮುಖ್ಯ ಕಾರಣ. ಪೋಷಕಾಂಶಗಳ ಅಭಾವದಿಂದ ಶಕ್ತಿಯ ಕೊರತೆಯುಂಟಾಗುವುದರಿಂದ ಇಳಿ ವಯಸ್ಸಿನಲ್ಲಿ ಹೆಚ್ಚು ಹೆಚ್ಚಾಗಿ ಕೂದಲು ಉದುರುವುದು. ಆದುದರಿಂದ ಉತ್ತಮ ಪೋಷಕಾಂಶಗಳುಳ್ಳ ಆಹಾರ ಜೀರ್ಣಿಸಿಕೊಳ್ಳುವ ಸಾಮರ್ಥ್ಯವಿದ್ದಲ್ಲಿ ಕೂದಲು ಉದುರುವಿಕೆ ಅಷ್ಟಾಗಿ ಕಂಡುಬರುವುದಿಲ್ಲ. ಕೂದಲು ಉದುರುವುದನ್ನು ತಡೆಗಟ್ಟಬೇಕಾದರೆ ಮಾಂಸ, ಮೀನು, ಹಾಲು, ಬೆಣ್ಣೆ, ತುಪ್ಪ, ಮೊಳೆತ ಕಡಲೆಕಾಳು, ಮೊಳೆತ ಹೆಸರುಕಾಳು ಕ್ರಮವಾಗಿ ಸೇವಿಸಬೇಕು. ಕರಿದ ತಿಂಡಿ, ತಿನಸುಗಳನ್ನು ಸಂಪೂರ್ಣವಾಗಿ ತ್ಯಜಿಸಬೇಕು. ಕೋಪ, ವ್ಯಥೆ, ನಿರೀಕ್ಷೆ, ಕುತೂಹಲ, ಭಯ, ಚಿಂತೆ ಮತ್ತಿತರ ಕಾರಣಗಳಿಂದ ಮನಸ್ಸು ಕೆರಳದಂತೆ ಎಚ್ಚರಿಕೆ ವಹಿಸಬೇಕು. ನಿದ್ದೆ ಕೆಡುವುದು, ಅತಿಯಾದ ಲೈಂಗಿಕ ಸಂಭೋಗ, ಮಲಮೂತ್ರಗಳ ಒತ್ತಡ ತಡೆಹಿಡಿಯುವುದು ಸಾಧುವಲ್ಲ. ಪ್ರತಿದಿನವೂ ತಲೆಗೆ ತಣ್ಣೀರಿನ ತುಂತುರು ಸ್ನಾನ ಮಾಡುವ ಅಭ್ಯಾಸವಿಟ್ಟುಕೊಳ್ಳಬೇಕು. ಇದಿಷ್ಟೂ ಎಚ್ಚರಿಕೆಯ ಕ್ರಮಗಳನ್ನು ಅನುಸರಿಸುವುದೇ ಅಲ್ಲದೆ, ಪ್ರತಿದಿನ ತಲೆಕೂದಲಿಗೆ ಎಳ್ಳೆಣ್ಣೆ ಅಥವಾ ಅಪ್ಪಟ ಕೊಬ್ಬರಿ ಎಣ್ಣೆ ಹಚ್ಚಿ ಬಾಚುತ್ತಿರಬೇಕು. ವಾರಕ್ಕೊಮ್ಮೆ ಅಭ್ಯಂಜನ ಸ್ನಾನ ಮಾಡಲು ಮರೆಯಬಾರದು. ಈ ಕ್ರಮ ಅನುಸರಿಸುವುದರಿಂದ ಕೂದಲು ಉದುರುವುದನ್ನು ಹಾಗೂ ತಲೆಯಲ್ಲಿ ಹೊಟ್ಟು ಏಳುವುದನ್ನು ಬಹುಮಟ್ಟಿಗೆ ನಿವಾರಿಸಬಹುದು.
ಮನೆ ಮದ್ದು:
೧)-ಸುಮಾರು ೧೦೦ ಗ್ರಾಂ ಕೊಬ್ಬರಿ ಎಣ್ಣೆಗೆ ಒಂದು ಟೀ ಚಮಚ ನಿಂಬೆರಸ ಹಿಂಡಿ. ನಂತರ, ಆ ಎಣ್ಣೆಯೊಂದಿಗೆ ಅಷ್ಟೇ ಪ್ರಮಾಣ ಸುಣ್ಣದ ತಿಳಿ ಮಿಶ್ರ ಮಾಡಿ ಚೆನ್ನಾಗಿ ಕುಲುಕಿ. ಈ ಮಿಶ್ರಣವನ್ನು ಪ್ರತಿದಿನವೂ ಕೂದಲಿಗೆ ಹಚ್ಚುವ ಅಭ್ಯಾಸವಿಟ್ಟುಕೊಳ್ಳಿ.
೨)-ರಾತ್ರಿ ಮಲಗುವುದಕ್ಕಿಂತ ಮುಂಚೆ ಉಗುರು ಬೆಚ್ಚಗಿನ ಕೊಬ್ಬರಿ ಎಣ್ಣೆಯನ್ನು ತಲೆಬುರುಡೆಗೆ ಹಚ್ಚಿ ಚೆನ್ನಾಗಿ ತಿಕ್ಕಿ, ಮರುದಿನ ಬೆಳಿಗ್ಗೆ ತಲೆಗೆ ಸ್ನಾನ ಮಾಡಿ. ವಾರಕ್ಕೆ ಎರಡು ಬಾರಿ ಈ ಕ್ರಮ ಅನುಸರಿಸಿ.
೩)-ಕೂದಲಿನ ಬುಡಕ್ಕೆ ನಿಂಬೆ ರಸ ಹಚ್ಚಿ ಚೆನ್ನಾಗಿ ತಿಕ್ಕಿ. ಅರ್ಧ ಗಂಟೆಯ ನಂತರ ತಣ್ಣೀರಿನಿಂದ ತಲೆ ತೊಳೆಯಿರಿ.
೪)-ಮೆಂತ್ಯವನ್ನು ತಂಗಿನ ಹಾಲಿನೊಂದಿಗೆ ನುಣ್ಣಗೆ ಅರೆಯಿರಿ. ಈ ಸರಿಯನ್ನು ತಲೆಗೆ ಹಚ್ಚಿ ಚೆನ್ನಾಗಿ ತಿಕ್ಕಿ. ಅರ್ಧ ಗಂಟೆಯ ನಂತರ ತಣ್ಣೀರಿನಿಂದ ತಲೆ ತೊಳೆಯಿರಿ.
೫)-ವಾರಕ್ಕೊಮ್ಮೆ ಬೇವಿನ ಎಲೆಗಳ ಕಷಾಯದಿಂದ ತಲೆ ತೊಳೆಯಿರಿ.
ಮನೆ ಮದ್ದು:
೧)-ಸುಮಾರು ೧೦೦ ಗ್ರಾಂ ಕೊಬ್ಬರಿ ಎಣ್ಣೆಗೆ ಒಂದು ಟೀ ಚಮಚ ನಿಂಬೆರಸ ಹಿಂಡಿ. ನಂತರ, ಆ ಎಣ್ಣೆಯೊಂದಿಗೆ ಅಷ್ಟೇ ಪ್ರಮಾಣ ಸುಣ್ಣದ ತಿಳಿ ಮಿಶ್ರ ಮಾಡಿ ಚೆನ್ನಾಗಿ ಕುಲುಕಿ. ಈ ಮಿಶ್ರಣವನ್ನು ಪ್ರತಿದಿನವೂ ಕೂದಲಿಗೆ ಹಚ್ಚುವ ಅಭ್ಯಾಸವಿಟ್ಟುಕೊಳ್ಳಿ.
೨)-ರಾತ್ರಿ ಮಲಗುವುದಕ್ಕಿಂತ ಮುಂಚೆ ಉಗುರು ಬೆಚ್ಚಗಿನ ಕೊಬ್ಬರಿ ಎಣ್ಣೆಯನ್ನು ತಲೆಬುರುಡೆಗೆ ಹಚ್ಚಿ ಚೆನ್ನಾಗಿ ತಿಕ್ಕಿ, ಮರುದಿನ ಬೆಳಿಗ್ಗೆ ತಲೆಗೆ ಸ್ನಾನ ಮಾಡಿ. ವಾರಕ್ಕೆ ಎರಡು ಬಾರಿ ಈ ಕ್ರಮ ಅನುಸರಿಸಿ.
೩)-ಕೂದಲಿನ ಬುಡಕ್ಕೆ ನಿಂಬೆ ರಸ ಹಚ್ಚಿ ಚೆನ್ನಾಗಿ ತಿಕ್ಕಿ. ಅರ್ಧ ಗಂಟೆಯ ನಂತರ ತಣ್ಣೀರಿನಿಂದ ತಲೆ ತೊಳೆಯಿರಿ.
೪)-ಮೆಂತ್ಯವನ್ನು ತಂಗಿನ ಹಾಲಿನೊಂದಿಗೆ ನುಣ್ಣಗೆ ಅರೆಯಿರಿ. ಈ ಸರಿಯನ್ನು ತಲೆಗೆ ಹಚ್ಚಿ ಚೆನ್ನಾಗಿ ತಿಕ್ಕಿ. ಅರ್ಧ ಗಂಟೆಯ ನಂತರ ತಣ್ಣೀರಿನಿಂದ ತಲೆ ತೊಳೆಯಿರಿ.
೫)-ವಾರಕ್ಕೊಮ್ಮೆ ಬೇವಿನ ಎಲೆಗಳ ಕಷಾಯದಿಂದ ತಲೆ ತೊಳೆಯಿರಿ.
ಮಂಗಳವಾರ, ಏಪ್ರಿಲ್ 8, 2008
ಫಿಸಿಯೋ ಥೆರಪಿ
ಮನೆ ಮದ್ದುಗಳು
ಮನೆ ಮದ್ದು
ವಸ್ತು : ಸೌತೆಕಾಯಿ
ಉಪಯೋಗ : ಜೀರ್ಣಶಕ್ತಿ ಹೆಚ್ಚಳ ಮತ್ತು ಉತ್ತಮ ನಿದ್ರೆ.
ಸೌತೆಕಾಯಿಯನ್ನು ಸಿಪ್ಪೆ ಸಹಿತ ಕತ್ತರಿಸಿ ಕಾಳುಮೆಣಸಿನ ಪುಡಿ ಮತ್ತು ಉಪ್ಪಿನೊಂದಿಗೆ ಸೇರಿಸಿಕೊಂಡು ತಿನ್ನುತ್ತಾ ಬಂದರೆ ಜೀರ್ಣಶಕ್ತಿ ಹೆಚ್ಚುವುದು. ಸೌತೆಕಾಯಿ ತಿರುಳಿನಿಂದ ಅಂಗಾಲು ಉಜ್ಜಿಕೊಂಡರೆ ಕಣ್ಣುಗಳ ಉರಿ ಶಾಂತವಾಗಿ ಚೆನ್ನಾಗಿ ನಿದ್ದೆ ಬರುತ್ತದೆ. ಮುಖದ ಚರ್ಮದ ಮೇಲೆ ಸೌತೆಕಾಯಿ ಚೂರುಗಳನ್ನು ತಿಕ್ಕಿದರೆ ಮುಖ ಕಾಂತಿಯುಕ್ತವಾಗುವುದು.
ವಸ್ತು : ಏಲಕ್ಕಿ
ಶಮನ : ಅಜೀರ್ಣದ ಸಮಸ್ಯೆಯಿಂದ ಬಳಲುತ್ತಿರುವವರು ಏಲಕ್ಕಿ ಸೇವಿಸಿದರೆ ಶಮನಗೊಳ್ಳುವುದು. ಏಲಕ್ಕಿ ಯಿಂದ ಆಹಾರ ಜೀರ್ಣವಾಗಿ ಬಾಯಿಗೆ ರುಚಿಯುಂಟಾಗುತ್ತದೆ. ಒಣಕೆಮ್ಮು ಕಾಣಿಸಿಕೊಂಡಾಗ ಏಲಕ್ಕಿ ಪುಡಿಗೆ ಸ್ವಲ್ಪ ಶುಂಠಿ ಪುಡಿಯನ್ನು ಸೇರಿಸಿ ಸೇವಿಸಿದರೆ ಪರಿಣಾಮ ಬೀರುವುದು. ಮೇಲಿಂದ ಮೇಲೆ ಭೇದಿಯಾಗುತ್ತಿದ್ದರೆ ಸ್ವಲ್ಪ ಏಲಕ್ಕಿಯನ್ನು ಬೆಣ್ಣೆಯೊಡನೆ ಅರೆದು ತಿನ್ನುವುದರಿಂದ ಭೇದಿ ಕಡಿಮೆಯಾಗುತ್ತದೆ.
ವಸ್ತು : ಮೆಣಸು
ಶಮನ : ಅಜೀರ್ಣ, ಮೊಡವೆ, ಜಂತುಹುಳು.
ಮೆಣಸನ್ನು ಚೆನ್ನಾಗಿ ಪುಡಿ ಮಾಡಿ ಶುಂಠಿಯ ರಸದೊಡನೆ ಸೇವಿಸುವುದರಿಂದ ಅಜೀರ್ಣವು ನಿವಾರಣೆಯಾಗುತ್ತದೆ. ಕೆಲವು ಮೆಣಸಿನ ಕಾಳುಗಳನ್ನು ನೀರಿನಲ್ಲಿ ತೇಯ್ದು ಮೊಡವೆಗಳಿರುವ ಜಾಗಕ್ಕೆ ಹಚ್ಚಿದರೆ ವಾಸಿಯಾಗುತ್ತವೆ. ಹೊಟ್ಟೆಯಲ್ಲಿ ಜಂತುಹುಳುಗಳ ಉಪಟಳ ಜಾಸ್ತಿಯಾದಾಗ ಬೆಳಗ್ಗೆ ಮತ್ತು ರಾತ್ರಿ ಮೆಣಸಿನ ಕಷಾಯವನ್ನು ಕುಡಿಯುವುದು ಪರಿಣಾಮಕಾರಿ.
ವಸ್ತು : ಈರುಳ್ಳಿ
ಶಮನ : ರಕ್ತಹೀನತೆ, ಗಾಯದ ನೋವು, ರಕ್ತಸ್ರಾವ.
ಊಟದ ಜತೆ ಹಲವು ದಿನಗಳವರೆಗೆ ಪ್ರತಿನಿತ್ಯ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ರಕ್ತಹೀನತೆ ವಾಸಿಯಾಗುತ್ತದೆ. ಪಟಾಕಿ ಸಿಡಿದು ಉಂಟಾದ ಗಾಯಗಳಿಗೆ ಈರುಳ್ಳಿಯನ್ನು ಜಜ್ಜಿ ಕಟ್ಟುವುದರಿಂದ ನೋವು ಕಡಿಮೆಯಾಗುತ್ತದೆ. ಮೂಗಿನಿಂದ ಆಗಾಗ್ಗೆ ರಕ್ತ ಒಸರುತ್ತಿದ್ದರೆ, ಮೂಗಿಗೆ ಒಂದೆರಡು ತೊಟ್ಟು ಈರುಳ್ಳಿ ರಸವನ್ನು ಹಾಕುವುದರಿಂದ ರಕ್ತ ಒಸರುವುದು ನಿಲ್ಲುವುದು.
ವಸ್ತು : ಕಡಲೆಕಾಳು
ಉಪಯೋಗ : ತೂಕ ಹೆಚ್ಚಳ, ಬಿಕ್ಕಳಿಕೆಗೆ ಕಡಿವಾಣ.
ಕಡಲೇಬೇಳೆಯನ್ನು ಚೆನ್ನಾಗಿ ಬೇಯಿಸಿ ಬೆಲ್ಲದೊಡನೆ ರುಬ್ಬಿ ತಯಾರಿಸಿದ ಹೂರಣವನ್ನು ಮಿತ ಪ್ರಮಾಣದಲ್ಲಿ ಹಲವು ದಿವಸ ತಿಂದರೆ ಶರೀರದ ತೂಕವು ಹೆಚ್ಚಾಗುವುದು. ಹುರಿದ ಕಡಲೆಯ ಹಿಟ್ಟನ್ನು ಕೆಂಡದ ಮೇಲೆ ಹಾಕಿ ಬಂದ ಹೊಗೆಯನ್ನು ಕುಡಿಯುವುದರಿಂದ ಬಿಕ್ಕಳಿಕೆ ನಿಲ್ಲುತ್ತದೆ.
ವಸ್ತು : ಹಲಸಿನ ಹಣ್ಣು
ಶಮನ : ತಲೆನೋವು, ನಿತ್ರಾಣ
ಸಾಮಾನ್ಯ ತಲೆನೋವು ಇರುವಾಗ, ಸ್ವಲ್ಪ ತುಪ್ಪದೊಡನೆ ಬೆಲ್ಲ ಸೇರಿಸಿ ಸೇವಿಸುವುದರಿಂದ ತಲೆನೋವು ಕಡಿಮೆಯಾಗುತ್ತದೆ. ಗರ್ಭಿಣಿಯರಿಗೆ ಮತ್ತು ಇತರರಿಗೆ ಆಗಾಗ್ಗೆ ನಿತ್ರಾಣವೆನಿಸಿದಾಗ ಬಿಸಿ ಹಾಲಿನ ಜೊತೆ ಸ್ವಲ್ಪ ಬೆಲ್ಲ ಸೇರಿಸಿ ಕುಡಿಯುವುದರಿಂದ ಚೈತನ್ಯ ಮೂಡುವುದು.
ವಸ್ತು : ಶುಂಠಿ
ಶಮನ : ಗಂಟಲು ಕಟ್ಟುವಿಕೆ, ಬಾಯಿ ವಾಸನೆ
ಶೀತ ಅಥವಾ ಇನ್ನಾವುದೇ ತೊಂದರೆಗಳಿಂದ ಗಂಟಲು ಕಟ್ಟಿ ಸರಿಯಾಗಿ ಮಾತನಾಡಲು ತೊಂದರೆಯಾದರೆ, ಹಸಿಶುಂಠಿ, ಲವಂಗ ಮತ್ತು ಸ್ವಲ್ಪ ಅಡುಗೆ ಉಪ್ಪು ಸೇರಿಸಿ ಬಾಯಿಗೆ ಹಾಕಿಕೊಂಡು ಚಪ್ಪರಿಸಿದರೆ ಗಂಟಲು ಕಟ್ಟುವುದು ನಿವಾರಣೆಯಾಗುತ್ತದೆ. ಶುಂಠಿ ಸುಟ್ಟು ಬೂದಿ ಮಾಡಿಟ್ಟುಕೊಂಡು ಅದಕ್ಕೆ ಸ್ವಲ್ಪ ಉಪ್ಪು ಬೆರೆಸಿ ಹಲ್ಲುಜ್ಜುವುದರಿಂದ ಬಾಯಿ ವಾಸನೆ ಕಡಿಮೆಯಾಗುತ್ತದೆ.
ವಸ್ತು : ಮೆಂತ್ಯಸೊಪ್ಪು
ಶಮನ : ಸಕ್ಕರೆ ಕಾಯಿಲೆ
ಸಕ್ಕರೆ ರೋಗ ನಿಯಂತ್ರಣದಲ್ಲಿ ಮೆಂತ್ಯಸೊಪ್ಪು ಸಹಕಾರಿ.
ಸಕ್ಕರೆ ಕಾಯಿಲೆ ಕಾಣಿಸಿಕೊಂಡ ಆರಂಭದಲ್ಲಿಯೇ ಪ್ರತಿದಿವಸ ಬೆಳಿಗ್ಗೆ ಮೆಣ್ತ್ಯಸೊಪ್ಪಿನ ರಸವನ್ನು ಕುಡಿಯುತ್ತಾ ಬಂದರೆ ಪರಿಣಾಮ ಬೀರುವುದು. ಮೆಂತ್ಯಸೊಪ್ಪಿನಂತೆಯೇ ಮೆಂತ್ಯ ಕೂಡ ಔಷಧೀಯ ಗುಣಗಳನ್ನು ಹೊಂದಿದೆ.
ವಸ್ತು : ಎಳ್ಳು
ಶಮನ : ಸುಟ್ಟ ಗಾಯ, ಉರಿಮೂತ್ರ
ಸುಟ್ಟಗಾಯಕ್ಕೆ ಎಳ್ಳೆಣ್ಣೆ ಹಚ್ಚುವುದರಿಂದ ಗಾಯ ಬೇಗ ವಾಸಿಯಾಗುತ್ತದೆ. ಎಳ್ಳು ಮತ್ತು ಸೌತೆಬೀಜವನ್ನು ಅರೆದು ಹಾಲು, ತುಪ್ಪದೊಡನೆ ಸೇರಿಸಿ ಕುಡಿಯುವುದರಿಂದ ಎಲ್ಲ ರೀತಿಯ ಕಟ್ಟು ಮೂತ್ರ ಮತ್ತು ಉರಿಮೂತ್ರ ಗುಣವಾಗುತ್ತದೆ.
ಸಾಸಿವೆ(ಮಸ್ಟರ್ಡ್)
ಶಮನ : ಹಲ್ಲು ನೋವು, ಉಪ್ಪಿನಕಾಯಿ ಶಿಲೀಂದ್ರ
ಹಲ್ಲು ನೋವಿರುವವರು ಸ್ವಲ್ಪ ಸಾಸಿವೆ ಕಾಳನ್ನು ಅಗಿದು ಸ್ವಲ್ಪ ಹೊತ್ತಿನ ನಂತರ ಉಗಿಯಬೇಕು. ಇದರಿಂದ ಹಲ್ಲುನೋವು ನಿವಾರಣೆಯಾಗುತ್ತದೆ. ಜತೆಗೆ ಹಸಿವನ್ನೂ ಹೆಚ್ಚಿಸುತ್ತದೆ. ಉಪ್ಪಿನಕಾಯಿಯಲ್ಲಿ ಸಾಸಿವೆಯನ್ನು ಸ್ವಲ್ಪ ಹೆಚ್ಚು ಬಳಸಿದರೆ, ಬೇಗ ಕೆಡುವುದಿಲ್ಲ. ಸಾಮಾನ್ಯವಾಗಿ ಉಪ್ಪಿನಕಾಯಿ ಹಾಳಾಗಲು ಆಸ್ಟರ್ಜಲಿನ್ ಎಂಬ ಶಿಲೀಂದ್ರ ಕಾರಣವಾಗಿದ್ದು, ಇದು ಬೆಳೆಯುವುದನ್ನು ಸಾಸಿವೆ ತಡೆಯುತ್ತದೆ.
ವಸ್ತು : ಗೋಧಿ
ಶಮನ : ಹೊಟ್ಟೆ ಹುಣ್ಣು, ಕೀಲುನೋವು
ಗೋಧಿ ಹಿಟ್ಟಿನಲ್ಲಿ ಚಪಾತಿ ಮಾಡಿ ತಿನ್ನುವುದರಿಂದ ಹೊಟ್ಟೆಯಹುಣ್ಣು ನಿವಾರಣೆಯಾಗುವುದು. ಜತೆಗೆ ಹಲ್ಲು ಮತ್ತು ವಸಡುಗಳಿಗೆ ಶಕ್ತಿ ಬರುವುದು. ಗೋಧಿ ಹಿಟ್ಟಿನ ತಂಬಿಟ್ಟು ಮಾಡಿಕೊಂಡು ತಿಂದರೆ ಕೀಲು ಮತ್ತು ಎಲುಬು ನೋವು ಶಮನಗೊಳ್ಳುವುದು.
ವಸ್ತು : ಶುಂಠಿ
ಶಮನ : ಅಜೀರ್ಣ, ನೆಗಡಿ, ಹಲ್ಲುನೋವು.
ಊಟ ಮಾಡುವುದಕ್ಕೆ ಮೊದಲು ಅವರೆಕಾಳಿನಷ್ಟು ಹಸಿಶುಂಠಿಯನ್ನು ನಾಲ್ಕು ಹರಳು ಉಪ್ಪು ಸಹಿತ ಅಗಿದು ತಿಂದರೆ ಅಜೀರ್ಣದ ಸಮಸ್ಯೆ ಇಲ್ಲವಾಗುವುದು. ಹಸಿಶುಂಠಿಯ ಕಷಾಯಕ್ಕೆ ಸಕ್ಕರೆ ಬೆರೆಸಿ ದಿನಕ್ಕೆ ಮೂರು ಬಾರಿ ಸೇವಿಸಿದರೆ ನೆಗಡಿ ನಿವಾರಣೆಯಾಗುವುದು. ಒಣಶುಂಠಿಯನ್ನು ಕೆಂಡದ ಮೇಲೆ ಸುಟ್ಟು ಪುಡಿ ಮಾಡಿ ಅದಕ್ಕೆ ಉಪ್ಪಿನ ಪುಡಿ ಬೆರೆಸಿ ಹಲ್ಲು ತಿಕ್ಕಿದರೆ ಹಲ್ಲು ನೋವು ಶಮನವಾಗುವುದು.
ವಸ್ತು : ಜೇನುತುಪ್ಪ
ಶಮನ : ಸುಟ್ಟ ಗಾಯ, ಚರ್ಮರೋಗ.
ಸುಟ್ಟ ಗಾಯಕ್ಕೆ ತಕ್ಷಣ ಜೇನುತುಪ್ಪ ಹಚ್ಚುವುದರಿಂದ ಉರಿ ಶಮನವಾಗಿ ಗಾಯ ಶೀಘ್ರ ಮಾಗುತ್ತದೆ. ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನುತುಪ್ಪ ಸವರುವುದರಿಂದ ಗುಣವಾಗುವುದು.
ವಸ್ತು : ಕಡಲೇ ಕಾಳು
ಶಮನ : ನಿಶ್ಯಕ್ತಿ, ನೆಗಡಿ
ನಿಶ್ಯಕ್ತಿಯಿಂದ ಬಳಲುವವರು, ಹೆಚ್ಚು ವ್ಯಾಯಾಮ ಮಾಡುವವರು ಎರಡು ಮೂರು ಚಮಚದಷ್ಟು ಕಡಲೇ ಕಾಳನ್ನು ತಣ್ಣೀರಿನಲ್ಲಿ ರಾತ್ರಿ ನೆನೆಸಿಟ್ಟು ಬೆಳಗ್ಗೆ ಒಣದ್ರಾಕ್ಷಿಯ ಜತೆ ಅಗಿದು ಸೇವಿಸಿ ನಂತರ ಹಾಲು ಕುಡಿದರೆ ನಿಶ್ಯಕ್ತಿ ಕಡಿಮೆಯಾಗುವುದು. ನೆಗಡಿಯಿರುವವರು ಬಿಸಿಯಾದ ಕಡಲೆಯನ್ನು ತಿನ್ನುವುದರಿಂದ ಶೀತ ಕಡಿಮೆಯಾಗುತ್ತದೆ.
ವಸ್ತು : ಹಲಸಿನ ಹಣ್ಣು
(ಜ್ಯಾಕ್ ಫ್ರೂಟ್)
ಶಮನ : ಪಿತ್ತ ವಿಕಾರ, ನರಗಳ ದೌರ್ಬಲ್ಯ.
ಹಲಸಿನ ಹಣ್ಣನ್ನು ಜೇನುತುಪ್ಪದೊಡನೆ ತಿನ್ನುತ್ತಾ ಬಂದರೆ ಪಿತ್ತವಿಕಾರಗಳು ಶಮನಗೊಳ್ಳುವುದು. ತೊಳೆಗಳನ್ನು ಸಣ್ಣದಾಗಿ ತುಂಡುಮಾಡಿ ಬಾಳೆಹಣ್ಣು, ಜೇನುತುಪ್ಪದೊಡನೆ ಸೇವಿಸಿದರೆ ದೈಹಿಕ ಶಕ್ತಿ ಹೆಚ್ಚುವುದಲ್ಲದೇ ನರಗಳ ದೌರ್ಬಲ್ಯ ಕಡಿಮೆಯಾಗುತ್ತದೆ. ಹಲಸಿನ ಸೇವನೆಯಿಂದ ವೀರ್ಯ್ ವೃದ್ಧಿಯೂ ಆಗುತ್ತದೆ. ಅತಿಯಾಗಿ ತಿಂದರೆ ಹೊಟ್ಟೆನೋವು ಬರುವ ಸಾಧ್ಯತೆ ಇದೆ.
ವಸ್ತು : ಸೀತಾಫಲ (ಕಸ್ಟರ್ಡ್ ಆಪಲ್)
ಉಪಯೋಗ : ಜೀರ್ಣಶಕ್ತಿ ಹೆಚ್ಚಳ, ರಕ್ತವೃದ್ಧಿ.
ಪ್ರತಿದಿನ ಊಟದ ನಂತರ ಈ ಹಣ್ಣನ್ನು ಸೇವಿಸುವುದರಿಂದ ಜೀರ್ಣಶಕ್ತಿ ಹೆಚ್ಚುವುದು. ಇದು ತಂಪುಕಾರಕವಾಗಿದ್ದು ಸೇವನೆಯಿಂದ ರಕ್ತವೃದ್ಧಿಯಾಗುವುದರ ಜತೆಗೆ ಸ್ನಾಯುಗಳು ಬಲಗೊಳ್ಳುತ್ತವೆ. ವಾಂತಿ ಹಾಗೂ ಹೊಟ್ಟೆ ಉರಿ ಶಮನವಾಗುತ್ತದೆ. ಕುರುಗಳನ್ನು ಪಕ್ವಗೊಳಿಸಲು ಹಣ್ಣಿನ ತಿರುಳನ್ನು ಉಪ್ಪಿನ ಜತೆ ಬೆರೆಸಿ ಲೇಪಿಸಬೇಕು.
ವಸ್ತು : ಹಾಗಲಕಾಯಿ
(ಬಿಟ್ಟರ್ ಗೌರ್ಡ್)
ಶಮನ : ಮಧುಮೇಹ, ಕರುಳಿನ ಹುಣ್ಣು, ಮೂಲವ್ಯಾಧಿ.
ಮಧುಮೇಹದಿಂದ ನರಳುತ್ತಿರುವ ರೋಗಿಗಳು ಹಾಗಲಕಾಯಿಯನ್ನು ಹಸಿಯಾಗಿ ತಿಂದರೆ ರೋಗ ಉಲ್ಬಣಿಸದೆ ಬಹುಪಾಲು ಗುಣವಾಗುವುದು. ಹಾಗಲಕಾಯಿಯ ಗೊಜ್ಜು ಮಾಡಿಕೊಂಡು ಕ್ರಮವಾಗಿ ಸೇವಿಸುತ್ತಿದ್ದರೆ ರಕ್ತ ಶುದ್ಧಿಯಾಗುವುದು. ಕರುಳಿನ ಹುಣ್ಣು, ಮೂಲವ್ಯಾಧಿ ಹಾಗೂ ಕೆಮ್ಮು ನಿವಾರಣೆಯಾಗುವುದು.
ವಸ್ತು : ಅಂಜೂರ (ಫಿಗ್)
ಶಮನ : ಒತ್ತಡ, ಮಲಬದ್ಧತೆ, ಮೂಲವ್ಯಾಧಿ.
ಅಂಜೂರದ ಹಣ್ಣುಗಳ ಸೇವನೆಯಿಂದ ಅಧಿಕ ಕೆಲಸದಿಂದ ಉಂಟಾದ ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಯಾಗುವುದು. ನವ ಚೈತನ್ಯ ಮೂಡುವುದು. ಈ ಹಣ್ಣಿನಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಶಮನವಾಗುವುದು. ಮೂಲವ್ಯಾಧಿಯಿಂದ ಬಳಲುವವರು ಮೂರು ಅಂಜೂರದ ಹಣ್ಣುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ಕೂಡಲೇ ಹಣ್ಣುಗಳನ್ನು ತಿಂದು ಆ ನೀರು ಕುಡಿದರೆ ಗುಣವಾಗುವುದು.
ವಸ್ತು ಸೇಬು (ಆಪಲ್)
ಶಮನ : ತಲೆನೋವು, ಮರೆವು, ಮೊಡವೆ.
ಸೇಬಿನ ಹಣ್ಣನ್ನು ತುಂಡುಮಾಡಿಕೊಂಡು ಉಪ್ಪು ಸಹಿತ ನಿರಂತರ ಸೇವಿಸಿದರೆ ತಲೆನೋವು ಕಡಿಮೆಯಾಗುವುದು. ಸೇಬಿನ ತಿರುಳನ್ನು ಅರೆದು ಮುಖಕ್ಕೆ ಲೇಪಿಸಿಕೊಂಡರೆ ಮೊಡವೆಗಳು ನಿವಾರಣೆಯಾಗಿ ಮುಖದ ಕಾಂತಿ ಹೆಚ್ಚುವುದು. ಊಟವಾದ ಬಳಿಕ ಸೇಬನ್ನು ತಿಂದರೆ ಜ್ನಾಪಕ ಶಕ್ತಿ ಹೆಚ್ಚುವುದು.
ವಸ್ತು : ಪರಂಗಿ ಹಣ್ಣು
(ಪಪಾಯ)
ಶಮನ : ಹೃದಯ ದೌರ್ಬಲ್ಯ
ಪರಂಗಿಹಣ್ಣಿನ ಜತೆ ಹಾಲು ಮತ್ತು ಜೇನುತುಪ್ಪ ಸೇರಿಸಿ ಸೇವಿಸುವುದರಿಂದ ಹೃದಯ ದೌರ್ಬಲ್ಯ ನಿವಾರಣೆಯಾಗಿ ಹೊಸ ಚೈತನ್ಯ ಮೂಡುವುದು. ಹಾಲುಣಿಸುವ ತಾಯಂದಿರು ಹಣ್ಣನ್ನು ನಿಯಮಿತವಾಗಿ ಬಳಸುವುದರಿಂದ ಶಕ್ತಿ ಹೆಚ್ಚುವುದು. ಊಟದ ನಂತರ ಹಣ್ಣನ್ನು ಸೇವಿಸುತ್ತಾ ಬಂದರೆ ಆಹಾರ ಚೆನ್ನಾಗಿ ಜೀರ್ಣವಾಗುವುದು.
ವಸ್ತು : ಕಡಲೇಕಾಯಿ
ಉಪಯೋಗ : ಮುಖದ ಕಾಂತಿ ಹೆಚ್ಚಳ, ಮಧುಮೇಹಿಗಳಿಗೆ ಅನುಕೂಲ.
ಒಂದು ಚಮಚ ಕಡಲೇಕಾಯಿ ಎಣ್ಣೆಗೆ ಅಷ್ಟೇ ಪ್ರಮಾಣದ ನಿಂಬೆ ರಸ ಬೆರೆಸಿ ರಾತ್ರಿ ಮುಖಕ್ಕೆ ಲೇಪಿಸುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ. ಗೋಧಿ ಹಿಟ್ಟು ಹಾಗೂ ಶೇಂಗಾ ಹಿಟ್ಟು ಬೆರೆಸಿದ ರೊಟ್ಟಿಯು ಮಧುಮೇಹಿಗಳಿಗೆ ಹಿತ. ಶೇಂಗಾ ಹಿಂಡಿಯಲ್ಲಿ ಉತ್ತಮ ಸಸಾರಜನಕವಿದ್ದು, ದನಕರುಗಳಿಗೆ ಉತ್ತಮ.
ವಸ್ತು : ಮಾವು (ಮ್ಯಾಂಗೊ)
ಶಮನ : ಮೂಲವ್ಯಾಧಿ, ವಾತ-ಪಿತ್ತ, ಮಲಬದ್ಧತೆ, ಅಜೀರ್ಣ.
ಹುಣಸೆ ಚಿಗುರು ಮತ್ತು ಎಳೆ ಮಾವಿನಕಾಯಿಯನ್ನು ಬೇಯಿಸಿಕೊಂಡು ತಿಂದರೆ ಮೂಲವ್ಯಾಧಿ ಗುಣವಾಗುವುದು. ಹಣ್ಣನ್ನು ಹಿತಮಿತವಾಗಿ ತಿಂದರೆ ವಾಯು ಶಮನಗೊಳ್ಳುವುದು. ವಾತ-ಪಿತ್ತ ನಾಶಗೊಳಿಸಿ ಹೃದಯಕ್ಕೆ ಹಿತವಾಗುವುದು. ಉಪ್ಪು ಮತ್ತು ಜೇನುತುಪ್ಪವನ್ನು ನಂಚಿಕೊಂಡು ಮಾವಿನಕಾಯಿ ಹೀಚು ತಿಂದರೆ ಮಲಬದ್ಧತೆ ಮತ್ತು ಅಜೀರ್ಣ ನಿವಾರಣೆಯಾಗುವುದು.
ವಸ್ತು : ಅಡುಗೆ ಉಪ್ಪು
ಶಮನ : ಬಾಯಿ ಹುಣ್ನು
ಒಂದು ಬಟ್ಟಲು ಬಿಸಿನೀರಿನಲ್ಲಿ ಅರ್ಧ ಟೀ ಚಮಚ ಉಪ್ಪನ್ನು ಕರಗಿಸುವುದು. ನಂತರ ಈ ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣು ಶಮನವಾಗುವುದು.
ವಸ್ತು : ಮೆಣಸು
ಶಮನ : ಹಲ್ಲುನೋವು
ಮೆಣಸನ್ನು ನುಣ್ಣಗೆ ಅರೆದು ವಸಡಿಗೆ ಹಚ್ಚುವುದರಿಂದ ಕೆಟ್ಟ ನೀರು ಸುರಿದುಹೋಗಿ ನೋವು ಕಡಿಮೆಯಾಗುವುದು. ವಸಡಿಗೆ ನಿಂಬೆರಸ ಹಚ್ಚುವುದರಿಂದ ಹಲ್ಲುನೋವು ಶಮನವಾಗುವುದು.
ವಸ್ತು : ಕಿತ್ತಳೆ
ಶಮನ : ಮುಖದಲ್ಲಿ ಕಲೆ
ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಮುಖದಲ್ಲಿ ಕಲೆಯಿರುವ ಭಾಗದಲ್ಲಿ ಮೃದುವಾಗಿ ತಿಕ್ಕಬೇಕು. ಪ್ರತಿದಿನ ಹೀಗೆ ಮಾಡುತ್ತಿದ್ದರೆ ಮುಖದಲ್ಲಿನ ಮೊಡವೆಗಳು ಹಾಗೂ ಕಪ್ಪು ಕಲೆಗಳು ನಿವಾರಣೆಯಗುವುವು.
ವಸ್ತು : ಕೊತ್ತಂಬರಿ
ಶಮನ : ತಲೆನೋವು, ಬಾಯಿಯ ದುರ್ಗಂಧ.
ಕೊತ್ತಂಬರಿ ಸೊಪ್ಪಿನ ರಸವನ್ನು ಹಣೆಗೆ ಲೇಪ ಹಾಕುವುದರಿಂದ ತಲೆನೋವು ನಿವಾರಣೆಯಾಗುವುದು. ಬರೀ ಕೊತ್ತಂಬರಿಸೊಪ್ಪನ್ನು ಬಾಯಿಯಲ್ಲಿ ಜಗಿಯುವುದರಿಂದ ಬಾಯಿಯಿಂದ ದುರ್ಗಂಧ ಬರುವುದಿಲ್ಲ. ಜತೆಗೆ ದಂತ ಕ್ಷಯವೂ ನಿವಾರಣೆಯಾಗುತ್ತದೆ.
ವಸ್ತು : ಉದ್ದು
ಶಮನ : ವೀರ್ಯ ವೃದ್ಧಿಯಾಗಿ ಶಾರೀರಿಕ ಬಲ.
ಉದ್ದಿನ ಬೇಳೆಯನ್ನು ಹುರಿದು ಹಾಲಿನಲ್ಲಿ ಬೇಯಿಸಿ ಸಕ್ಕರೆ, ಏಲಕ್ಕಿ ಸೇರಿಸಿ ಪಾಯಸ ಮಾಡಿ ಸೇವಿಸುವುದರಿಂದ ವೀರ್ಯ ವೃದ್ಧಿಯಾಗಿ ಶಾರೀರಿಕ ಬಲ ಹೆಚ್ಚುವುದು. ಉದ್ದಿನ ಬೇಳೆ ತೊವ್ವೆಯನ್ನು ತಯಾರಿಸಿ ಊಟದ ಜತೆ ಸೇವಿಸಿದರೆ ಅಂಗಾಂಗಗಳು ಬಲಗೊಳ್ಳುವುವು.
ವಸ್ತು : ನಿಂಬೆ
ಶಮನ : ಸೊಳ್ಳೆಗಳ ಕಾಟ, ಬಾಯಿಯ ದುರ್ವಾಸನೆ.
ಸೊಳ್ಳೆಗಳು ಹೆಚ್ಚಾಗಿರುವ ಪ್ರದೇಶದಲ್ಲಿ ವಾಸಿಸುವ ಜನರು ಮೈಕೈಗೆ ನಿಂಬೆರಸ ಸವರಿಕೊಂಡರೆ ಸೊಳ್ಳೆಗಳು ಹತ್ತಿರ ಸುಳಿಯುವುದಿಲ್ಲ. ಬಾಯಿಯಿಂದ ದುರ್ವಾಸನೆ ಬರುತ್ತಿದ್ದರೆ ನಿಂಬೆರಸವನ್ನು ನೀರಿನಲ್ಲಿ ಬೆರೆಸಿ ಆಗಾಗ ಬಾಯಿ ಮುಕ್ಕಳಿಸುವುದರಿಂದ ನಿವಾರಣೆಯಾಗುವುದು.
ವಸ್ತು : ಲವಂಗ
ಶಮನ : ಹಲ್ಲು ನೋವು, ಕೆಮ್ಮು.
ಹಲ್ಲು ನೋವಿಗೆ ಲವಂಗದ ಎಣ್ಣೆ ಅಥವಾ ಲವಂಗದ ಮುಲಾಮನ್ನು ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ. ಸಾಧಾರಣ ಕೆಮ್ಮು ಕಾಣಿಸಿಕೊಂಡಾಗ ಕಲ್ಲುಸಕ್ಕರೆ ಮತ್ತು ಲವಂಗವನ್ನು ಬಾಯಿಗೆ ಹಾಕಿಕೊಂಡು ಜಗಿದು ರಸ ನುಂಗುವುದರಿಂದ ಶಮನವಾಗುವುದು.
ವಸ್ತು : ತುಳಸಿ
ಶಮನ : ಮೈಕೈನೋವು
ಒಂದು ಲೋಟ ನೀರಿನಲ್ಲಿ ಹತ್ತು ತುಲಸಿ ಎಲೆಗಳನ್ನು ಚೆನ್ನಾಗಿ ಕುದಿಸುವುದು. ನೀರು ಚೆನ್ನಾಗಿ ಕುದಿದು ಅರ್ಧ ಲೋಟ ಆದಮೇಲೆ ಸೋಸಿಕೊಳ್ಳುವುದು. ತಣ್ಣಗಾದ ಕಷಾಯಕ್ಕೆ ಉಪ್ಪನ್ನು ಹಾಕಿ ಕುಡಿಯುವುದು. ಮೈಕೈನೋವು ನಿಲ್ಲುವವರೆಗೂ ಪ್ರತಿದಿನ ಈ ಕಷಾಯ ಬಳಸುವುದು. ಜತೆಗೆ, ಅರ್ಧ ಗ್ರಾಂ ದಾಲ್ಚಿನ್ನಿ (ಚಕ್ಕೆ) ಪುಡಿಯನ್ನು ಒಂದು ಟೀ ಚಮಚ ಜೇನುತುಪ್ಪದೊಂದಿಗೆ ಕನಿಷ್ಟ ಪಕ್ಷ ದಿನಕ್ಕೆರಡು ಬಾರಿ ಸೇವಿಸಿದರೆ ನೋವು ಬೇಗ ಶಮನವಾಗುವುದು.
ವಸ್ತು : ಮಾವಿನ ಎಲೆಗಳು
ಶಮನ : ಕಿವಿ ಸೋಂಕು
ಕೆಲವು ತಾಜಾ ಮಾವಿನ ಎಲೆಗಳನ್ನು ಚೆನ್ನಾಗಿ ಅರೆದು ಅವುಗಳಿಂದ ಒಂದು ಟೀ ಚಮಚ ರಸವನ್ನು ತಯಾರಿಸಿಕೊಳ್ಳುವುದು. ಈ ರಸವನ್ನು ಸ್ವಲ್ಪ ಬೆಚ್ಚಗೆ ಮಾಡಿ ಸೋಂಕಿಗೆ ಒಳಗಾಗಿರುವ ಕಿವಿಗೆ ಔಷಧವಾಗಿ ಬಳಸಬಹುದು. ದಿನಕ್ಕೆರಡು ಬಾರಿ ಪ್ರತಿಸಲವೂ ಒಂದೆರಡು ಹನಿ ಬಳಸಿದರೆ ಸೋಂಕು ನಿವಾರಣೆಯಾಗುವುದು.
ವಸ್ತು : ಖರ್ಜೂರ
ಶಮನ : ಜಂತುಹುಳು, ಭೇದಿ.
ಜಂತುಹುಳುಗಳಿಂದ ಬಳಲುತ್ತಿರುವವರು ಐದು ಖರ್ಜೂರ ತಿಂದು ನಿಂಬೆಹಣ್ಣಿನ ಪಾನೀಯ ಕುಡಿದರೆ ಶಮನವಾಗುವುದು. ಪರಿಣಾಮ ಬೀರುವವರೆಗೂ ಮುಂದುವರಿಸುವುದು ಒಳ್ಳೆಯದು. ಭೇದಿಯಾಗುತ್ತಿರುವಾಗ ಖರ್ಜೂರ ಸೇವಿಸಿದರೆ ನಿವಾರಣೆಯಾಗುವುದು.
ವಸ್ತು : ಉದ್ದು
ಶಮನ : ಸ್ತ್ರೀಯರ ಬಿಳುಪು ರೋಗ.
ಉದ್ದಿನ ಹಿಟ್ಟು, ಅತಿಮಧುರ, ಕುಂಬಳದ ಬೇರು ಹಾಗೂ ಅಶ್ವಗಂಧ, ಇವುಗಳನ್ನು ಸಮನಾಗಿ ಕುಟ್ಟಿ ಶೋಧಿಸಿಟ್ಟುಕೊಂಡು ಹಲವು ದಿನಗಳವರೆಗೆ ಬಿಡದೆ ಒಂದೊಂದು ಚಮಚದಂತೆ ಜೇನುತುಪ್ಪದೊಡನೆ ಸೇರಿಸಿ ದಿನಕ್ಕೆರಡು ಬಾರಿ ಸೇವಿಸುವುದರಿಂದ ಸ್ತ್ರೀಯರ ಬಿಳುಪುರೋಗ ವಾಸಿಯಾಗುತ್ತದೆ.
ವಸ್ತು : ಬಿಲ್ವ
ಶಮನ : ಕಫ, ಊತ.
ಕಫ ಕಟ್ಟಿಕೊಂಡು ಎದೆ ನೋವು ಬರುತ್ತಿದ್ದರೆ ಬಿಲ್ವದ ಎಲೆಗಳ ರಸವನ್ನು ಕುಡಿದರೆ ಶಮನವಾಗುವುದು. ಊತವಿರುವಾಗ ಎಲೆಗಳನ್ನು ಬಿಸಿ ಮಾಡಿ ಪಟ್ಟು ಹಾಕಿದರೆ ಪರಿಣಾಮ ಬೀರುವುದು.
ವಸ್ತು : ವೀಳ್ಯದೆಲೆ
ಶಮನ : ಕೆಮ್ಮು, ನೋವು.
ಒಂದು ವೀಳ್ಯದೆಲೆ, ಸ್ವಲ್ಪ ಕರೀ ತುಳಸಿ ಹಾಗೂ ಒಂದು ಲವಂಗವನ್ನು ಅರೆದು ದಿನಕ್ಕೆ ಎರಡು ಬಾರಿ ಸೇವಿಸಿದರೆ ಕೆಮ್ಮು ಕಡಿಮೆಯಾಗುವುದು. ವೀಳ್ಯದೆಲೆಗೆ ಹರಳೆಣ್ಣೆಯನ್ನು ಹಚ್ಚಿ ಅದನ್ನು ಬಿಸಿ ಮಾಡಿ ಹೊಟ್ಟೆ ಉಬ್ಬರದಿಂದ ನರಳುತ್ತಿರುವ ಮಗುವಿನ ಹೊಟ್ಟೆಗೆ ಕಾವು ಕೊಟ್ಟರೆ ನೋವು ಮಾಯವಾಗಿ ಮೂತ್ರ ಸುಲಭವಾಗಿ ಆಗುವುದು.
ವಸ್ತು : ಅರಿಶಿನ
ಶಮನ : ರಕ್ತ ಸ್ರಾವ, ಮೊಡವೆ.
ದೇಹದ ಯಾವುದೇ ಭಾಗ ಕೊಯ್ದುಕೊಂಡು ರಕ್ತ ಒಸರುತ್ತಿದ್ದರೆ, ಆ ಗಾಯದ ಮೇಲೆ ಅರಿಶಿನ ಹುಡಿಯನ್ನು ಉದುರಿಸಿದರೆ ರಕ್ತ ಬರುವುದು ನಿಲ್ಲುವುದು. ಮೊಡವೆಗಳಿಗೆ ಅರಿಶಿನದ ಕೊರಡನ್ನು ತೇಯ್ದು ಲೇಪಿಸುವುದರಿಂದ ಅವುಗಳು ಕ್ರಮೇಣ ಕಡಿಮೆಯಾಗುತ್ತವೆ.
ವಸ್ತು : ತುಳಸಿ
ಶಮನ : ಹುಳುಕಡ್ಡಿ.
ತುಳಸಿ ಗಿಡದ ಕಾಂಡದಿಂದ ಹುಳುಕಡ್ಡಿಯ ಭಾಗವನ್ನು ಚೆನ್ನಾಗಿ ಕೆರೆದು, ಅನಂತರ ತುಳಸಿ ಸೊಪ್ಪಿನ ಕಷಾಯದಿಂದ ಆ ಭಾಗವನ್ನು ಚೆನ್ನಾಗಿ ತೊಳೆಯಬೇಕು. ಇದಾದ ಮೇಲೆ ತುಳಸಿ ಸೊಪ್ಪನ್ನು ಚೆನ್ನಾಗಿ ಅರೆದು ಹುಳುಕಡ್ಡಿಯ ಮೇಲೆ ಲೇಪಿಸುವುದರಿಂದ ಶೀಘ್ರ ಗುಣ ಕಂಡುಬರುವುದು.
ವಸ್ತು : ಶ್ರೀಗಂಧ
ಶಮನ : ಚರ್ಮದ ಅಲರ್ಜಿ.
ಚರ್ಮದ ಅಲರ್ಜಿಯಿಂದ ಬಳಲುತ್ತಿರುವವರು ಶ್ರ್ಈಗಂಧವನ್ನು ಬಳಸಿದರೆ ಪರಿಣಾಮ ಬೀರುವುದು. ಒಂದು ಟೀ ಚಮಚ ನಿಂಬೇಹಣ್ಣಿನ ರಸದೊಂದಿಗೆ ಶ್ರ್ಈಗಂಧದ ಪುಡಿಯನ್ನು ಬೆರೆಸಿ ಅಲರ್ಜಿಯಿರುವ ಚರ್ಮದ ಮೇಲೆ ಲೇಪಿಸುತ್ತಾ ಬಂದರೆ ಗುಣವಾಗುವುದು.
ವಸ್ತು : ಪರಂಗಿಹಣ್ಣು
ಉಪಯೋಗ : ರೋಗ ನಿರೋಧಕ ಶಕ್ತಿ ಹೆಚ್ಚಳ, ಬೊಜ್ಜು ಕರಗುವಿಕೆ.
ಪ್ರತಿದಿನ ಪರಂಗಿಹಣ್ಣನ್ನು ಸೇವಿಸುವುದರಿಂದ ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಅತಿಯಾದ ಬೊಜ್ಜಿನಿಂದ ಬಳಲುತ್ತಿರುವವರು ಹಣ್ಣು ಸೇವಿಸಿದರೆ ಪರಿಣಾಮ ಬೀರುವುದು. ಬಾಣಂತಿಯರು ಸೇವಿಸಿದರೆ ಹಾಲಿನ ಉತ್ಪತ್ತಿ ಹೆಚ್ಚುವುದು.
ವಸ್ತು : ಸೌತೆಕಾಯಿ
ಉಪಯೋಗ : ಜೀರ್ಣಶಕ್ತಿ ಹೆಚ್ಚಳ ಮತ್ತು ಉತ್ತಮ ನಿದ್ರೆ.
ಸೌತೆಕಾಯಿಯನ್ನು ಸಿಪ್ಪೆ ಸಹಿತ ಕತ್ತರಿಸಿ ಕಾಳುಮೆಣಸಿನ ಪುಡಿ ಮತ್ತು ಉಪ್ಪಿನೊಂದಿಗೆ ಸೇರಿಸಿಕೊಂಡು ತಿನ್ನುತ್ತಾ ಬಂದರೆ ಜೀರ್ಣಶಕ್ತಿ ಹೆಚ್ಚುವುದು. ಸೌತೆಕಾಯಿ ತಿರುಳಿನಿಂದ ಅಂಗಾಲು ಉಜ್ಜಿಕೊಂಡರೆ ಕಣ್ಣುಗಳ ಉರಿ ಶಾಂತವಾಗಿ ಚೆನ್ನಾಗಿ ನಿದ್ದೆ ಬರುತ್ತದೆ. ಮುಖದ ಚರ್ಮದ ಮೇಲೆ ಸೌತೆಕಾಯಿ ಚೂರುಗಳನ್ನು ತಿಕ್ಕಿದರೆ ಮುಖ ಕಾಂತಿಯುಕ್ತವಾಗುವುದು.
ವಸ್ತು : ಏಲಕ್ಕಿ
ಶಮನ : ಅಜೀರ್ಣದ ಸಮಸ್ಯೆಯಿಂದ ಬಳಲುತ್ತಿರುವವರು ಏಲಕ್ಕಿ ಸೇವಿಸಿದರೆ ಶಮನಗೊಳ್ಳುವುದು. ಏಲಕ್ಕಿ ಯಿಂದ ಆಹಾರ ಜೀರ್ಣವಾಗಿ ಬಾಯಿಗೆ ರುಚಿಯುಂಟಾಗುತ್ತದೆ. ಒಣಕೆಮ್ಮು ಕಾಣಿಸಿಕೊಂಡಾಗ ಏಲಕ್ಕಿ ಪುಡಿಗೆ ಸ್ವಲ್ಪ ಶುಂಠಿ ಪುಡಿಯನ್ನು ಸೇರಿಸಿ ಸೇವಿಸಿದರೆ ಪರಿಣಾಮ ಬೀರುವುದು. ಮೇಲಿಂದ ಮೇಲೆ ಭೇದಿಯಾಗುತ್ತಿದ್ದರೆ ಸ್ವಲ್ಪ ಏಲಕ್ಕಿಯನ್ನು ಬೆಣ್ಣೆಯೊಡನೆ ಅರೆದು ತಿನ್ನುವುದರಿಂದ ಭೇದಿ ಕಡಿಮೆಯಾಗುತ್ತದೆ.
ವಸ್ತು : ಮೆಣಸು
ಶಮನ : ಅಜೀರ್ಣ, ಮೊಡವೆ, ಜಂತುಹುಳು.
ಮೆಣಸನ್ನು ಚೆನ್ನಾಗಿ ಪುಡಿ ಮಾಡಿ ಶುಂಠಿಯ ರಸದೊಡನೆ ಸೇವಿಸುವುದರಿಂದ ಅಜೀರ್ಣವು ನಿವಾರಣೆಯಾಗುತ್ತದೆ. ಕೆಲವು ಮೆಣಸಿನ ಕಾಳುಗಳನ್ನು ನೀರಿನಲ್ಲಿ ತೇಯ್ದು ಮೊಡವೆಗಳಿರುವ ಜಾಗಕ್ಕೆ ಹಚ್ಚಿದರೆ ವಾಸಿಯಾಗುತ್ತವೆ. ಹೊಟ್ಟೆಯಲ್ಲಿ ಜಂತುಹುಳುಗಳ ಉಪಟಳ ಜಾಸ್ತಿಯಾದಾಗ ಬೆಳಗ್ಗೆ ಮತ್ತು ರಾತ್ರಿ ಮೆಣಸಿನ ಕಷಾಯವನ್ನು ಕುಡಿಯುವುದು ಪರಿಣಾಮಕಾರಿ.
ವಸ್ತು : ಈರುಳ್ಳಿ
ಶಮನ : ರಕ್ತಹೀನತೆ, ಗಾಯದ ನೋವು, ರಕ್ತಸ್ರಾವ.
ಊಟದ ಜತೆ ಹಲವು ದಿನಗಳವರೆಗೆ ಪ್ರತಿನಿತ್ಯ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ರಕ್ತಹೀನತೆ ವಾಸಿಯಾಗುತ್ತದೆ. ಪಟಾಕಿ ಸಿಡಿದು ಉಂಟಾದ ಗಾಯಗಳಿಗೆ ಈರುಳ್ಳಿಯನ್ನು ಜಜ್ಜಿ ಕಟ್ಟುವುದರಿಂದ ನೋವು ಕಡಿಮೆಯಾಗುತ್ತದೆ. ಮೂಗಿನಿಂದ ಆಗಾಗ್ಗೆ ರಕ್ತ ಒಸರುತ್ತಿದ್ದರೆ, ಮೂಗಿಗೆ ಒಂದೆರಡು ತೊಟ್ಟು ಈರುಳ್ಳಿ ರಸವನ್ನು ಹಾಕುವುದರಿಂದ ರಕ್ತ ಒಸರುವುದು ನಿಲ್ಲುವುದು.
ವಸ್ತು : ಕಡಲೆಕಾಳು
ಉಪಯೋಗ : ತೂಕ ಹೆಚ್ಚಳ, ಬಿಕ್ಕಳಿಕೆಗೆ ಕಡಿವಾಣ.
ಕಡಲೇಬೇಳೆಯನ್ನು ಚೆನ್ನಾಗಿ ಬೇಯಿಸಿ ಬೆಲ್ಲದೊಡನೆ ರುಬ್ಬಿ ತಯಾರಿಸಿದ ಹೂರಣವನ್ನು ಮಿತ ಪ್ರಮಾಣದಲ್ಲಿ ಹಲವು ದಿವಸ ತಿಂದರೆ ಶರೀರದ ತೂಕವು ಹೆಚ್ಚಾಗುವುದು. ಹುರಿದ ಕಡಲೆಯ ಹಿಟ್ಟನ್ನು ಕೆಂಡದ ಮೇಲೆ ಹಾಕಿ ಬಂದ ಹೊಗೆಯನ್ನು ಕುಡಿಯುವುದರಿಂದ ಬಿಕ್ಕಳಿಕೆ ನಿಲ್ಲುತ್ತದೆ.
ವಸ್ತು : ಹಲಸಿನ ಹಣ್ಣು
ಶಮನ : ತಲೆನೋವು, ನಿತ್ರಾಣ
ಸಾಮಾನ್ಯ ತಲೆನೋವು ಇರುವಾಗ, ಸ್ವಲ್ಪ ತುಪ್ಪದೊಡನೆ ಬೆಲ್ಲ ಸೇರಿಸಿ ಸೇವಿಸುವುದರಿಂದ ತಲೆನೋವು ಕಡಿಮೆಯಾಗುತ್ತದೆ. ಗರ್ಭಿಣಿಯರಿಗೆ ಮತ್ತು ಇತರರಿಗೆ ಆಗಾಗ್ಗೆ ನಿತ್ರಾಣವೆನಿಸಿದಾಗ ಬಿಸಿ ಹಾಲಿನ ಜೊತೆ ಸ್ವಲ್ಪ ಬೆಲ್ಲ ಸೇರಿಸಿ ಕುಡಿಯುವುದರಿಂದ ಚೈತನ್ಯ ಮೂಡುವುದು.
ವಸ್ತು : ಶುಂಠಿ
ಶಮನ : ಗಂಟಲು ಕಟ್ಟುವಿಕೆ, ಬಾಯಿ ವಾಸನೆ
ಶೀತ ಅಥವಾ ಇನ್ನಾವುದೇ ತೊಂದರೆಗಳಿಂದ ಗಂಟಲು ಕಟ್ಟಿ ಸರಿಯಾಗಿ ಮಾತನಾಡಲು ತೊಂದರೆಯಾದರೆ, ಹಸಿಶುಂಠಿ, ಲವಂಗ ಮತ್ತು ಸ್ವಲ್ಪ ಅಡುಗೆ ಉಪ್ಪು ಸೇರಿಸಿ ಬಾಯಿಗೆ ಹಾಕಿಕೊಂಡು ಚಪ್ಪರಿಸಿದರೆ ಗಂಟಲು ಕಟ್ಟುವುದು ನಿವಾರಣೆಯಾಗುತ್ತದೆ. ಶುಂಠಿ ಸುಟ್ಟು ಬೂದಿ ಮಾಡಿಟ್ಟುಕೊಂಡು ಅದಕ್ಕೆ ಸ್ವಲ್ಪ ಉಪ್ಪು ಬೆರೆಸಿ ಹಲ್ಲುಜ್ಜುವುದರಿಂದ ಬಾಯಿ ವಾಸನೆ ಕಡಿಮೆಯಾಗುತ್ತದೆ.
ವಸ್ತು : ಮೆಂತ್ಯಸೊಪ್ಪು
ಶಮನ : ಸಕ್ಕರೆ ಕಾಯಿಲೆ
ಸಕ್ಕರೆ ರೋಗ ನಿಯಂತ್ರಣದಲ್ಲಿ ಮೆಂತ್ಯಸೊಪ್ಪು ಸಹಕಾರಿ.
ಸಕ್ಕರೆ ಕಾಯಿಲೆ ಕಾಣಿಸಿಕೊಂಡ ಆರಂಭದಲ್ಲಿಯೇ ಪ್ರತಿದಿವಸ ಬೆಳಿಗ್ಗೆ ಮೆಣ್ತ್ಯಸೊಪ್ಪಿನ ರಸವನ್ನು ಕುಡಿಯುತ್ತಾ ಬಂದರೆ ಪರಿಣಾಮ ಬೀರುವುದು. ಮೆಂತ್ಯಸೊಪ್ಪಿನಂತೆಯೇ ಮೆಂತ್ಯ ಕೂಡ ಔಷಧೀಯ ಗುಣಗಳನ್ನು ಹೊಂದಿದೆ.
ವಸ್ತು : ಎಳ್ಳು
ಶಮನ : ಸುಟ್ಟ ಗಾಯ, ಉರಿಮೂತ್ರ
ಸುಟ್ಟಗಾಯಕ್ಕೆ ಎಳ್ಳೆಣ್ಣೆ ಹಚ್ಚುವುದರಿಂದ ಗಾಯ ಬೇಗ ವಾಸಿಯಾಗುತ್ತದೆ. ಎಳ್ಳು ಮತ್ತು ಸೌತೆಬೀಜವನ್ನು ಅರೆದು ಹಾಲು, ತುಪ್ಪದೊಡನೆ ಸೇರಿಸಿ ಕುಡಿಯುವುದರಿಂದ ಎಲ್ಲ ರೀತಿಯ ಕಟ್ಟು ಮೂತ್ರ ಮತ್ತು ಉರಿಮೂತ್ರ ಗುಣವಾಗುತ್ತದೆ.
ಸಾಸಿವೆ(ಮಸ್ಟರ್ಡ್)
ಶಮನ : ಹಲ್ಲು ನೋವು, ಉಪ್ಪಿನಕಾಯಿ ಶಿಲೀಂದ್ರ
ಹಲ್ಲು ನೋವಿರುವವರು ಸ್ವಲ್ಪ ಸಾಸಿವೆ ಕಾಳನ್ನು ಅಗಿದು ಸ್ವಲ್ಪ ಹೊತ್ತಿನ ನಂತರ ಉಗಿಯಬೇಕು. ಇದರಿಂದ ಹಲ್ಲುನೋವು ನಿವಾರಣೆಯಾಗುತ್ತದೆ. ಜತೆಗೆ ಹಸಿವನ್ನೂ ಹೆಚ್ಚಿಸುತ್ತದೆ. ಉಪ್ಪಿನಕಾಯಿಯಲ್ಲಿ ಸಾಸಿವೆಯನ್ನು ಸ್ವಲ್ಪ ಹೆಚ್ಚು ಬಳಸಿದರೆ, ಬೇಗ ಕೆಡುವುದಿಲ್ಲ. ಸಾಮಾನ್ಯವಾಗಿ ಉಪ್ಪಿನಕಾಯಿ ಹಾಳಾಗಲು ಆಸ್ಟರ್ಜಲಿನ್ ಎಂಬ ಶಿಲೀಂದ್ರ ಕಾರಣವಾಗಿದ್ದು, ಇದು ಬೆಳೆಯುವುದನ್ನು ಸಾಸಿವೆ ತಡೆಯುತ್ತದೆ.
ವಸ್ತು : ಗೋಧಿ
ಶಮನ : ಹೊಟ್ಟೆ ಹುಣ್ಣು, ಕೀಲುನೋವು
ಗೋಧಿ ಹಿಟ್ಟಿನಲ್ಲಿ ಚಪಾತಿ ಮಾಡಿ ತಿನ್ನುವುದರಿಂದ ಹೊಟ್ಟೆಯಹುಣ್ಣು ನಿವಾರಣೆಯಾಗುವುದು. ಜತೆಗೆ ಹಲ್ಲು ಮತ್ತು ವಸಡುಗಳಿಗೆ ಶಕ್ತಿ ಬರುವುದು. ಗೋಧಿ ಹಿಟ್ಟಿನ ತಂಬಿಟ್ಟು ಮಾಡಿಕೊಂಡು ತಿಂದರೆ ಕೀಲು ಮತ್ತು ಎಲುಬು ನೋವು ಶಮನಗೊಳ್ಳುವುದು.
ವಸ್ತು : ಶುಂಠಿ
ಶಮನ : ಅಜೀರ್ಣ, ನೆಗಡಿ, ಹಲ್ಲುನೋವು.
ಊಟ ಮಾಡುವುದಕ್ಕೆ ಮೊದಲು ಅವರೆಕಾಳಿನಷ್ಟು ಹಸಿಶುಂಠಿಯನ್ನು ನಾಲ್ಕು ಹರಳು ಉಪ್ಪು ಸಹಿತ ಅಗಿದು ತಿಂದರೆ ಅಜೀರ್ಣದ ಸಮಸ್ಯೆ ಇಲ್ಲವಾಗುವುದು. ಹಸಿಶುಂಠಿಯ ಕಷಾಯಕ್ಕೆ ಸಕ್ಕರೆ ಬೆರೆಸಿ ದಿನಕ್ಕೆ ಮೂರು ಬಾರಿ ಸೇವಿಸಿದರೆ ನೆಗಡಿ ನಿವಾರಣೆಯಾಗುವುದು. ಒಣಶುಂಠಿಯನ್ನು ಕೆಂಡದ ಮೇಲೆ ಸುಟ್ಟು ಪುಡಿ ಮಾಡಿ ಅದಕ್ಕೆ ಉಪ್ಪಿನ ಪುಡಿ ಬೆರೆಸಿ ಹಲ್ಲು ತಿಕ್ಕಿದರೆ ಹಲ್ಲು ನೋವು ಶಮನವಾಗುವುದು.
ವಸ್ತು : ಜೇನುತುಪ್ಪ
ಶಮನ : ಸುಟ್ಟ ಗಾಯ, ಚರ್ಮರೋಗ.
ಸುಟ್ಟ ಗಾಯಕ್ಕೆ ತಕ್ಷಣ ಜೇನುತುಪ್ಪ ಹಚ್ಚುವುದರಿಂದ ಉರಿ ಶಮನವಾಗಿ ಗಾಯ ಶೀಘ್ರ ಮಾಗುತ್ತದೆ. ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನುತುಪ್ಪ ಸವರುವುದರಿಂದ ಗುಣವಾಗುವುದು.
ವಸ್ತು : ಕಡಲೇ ಕಾಳು
ಶಮನ : ನಿಶ್ಯಕ್ತಿ, ನೆಗಡಿ
ನಿಶ್ಯಕ್ತಿಯಿಂದ ಬಳಲುವವರು, ಹೆಚ್ಚು ವ್ಯಾಯಾಮ ಮಾಡುವವರು ಎರಡು ಮೂರು ಚಮಚದಷ್ಟು ಕಡಲೇ ಕಾಳನ್ನು ತಣ್ಣೀರಿನಲ್ಲಿ ರಾತ್ರಿ ನೆನೆಸಿಟ್ಟು ಬೆಳಗ್ಗೆ ಒಣದ್ರಾಕ್ಷಿಯ ಜತೆ ಅಗಿದು ಸೇವಿಸಿ ನಂತರ ಹಾಲು ಕುಡಿದರೆ ನಿಶ್ಯಕ್ತಿ ಕಡಿಮೆಯಾಗುವುದು. ನೆಗಡಿಯಿರುವವರು ಬಿಸಿಯಾದ ಕಡಲೆಯನ್ನು ತಿನ್ನುವುದರಿಂದ ಶೀತ ಕಡಿಮೆಯಾಗುತ್ತದೆ.
ವಸ್ತು : ಹಲಸಿನ ಹಣ್ಣು
(ಜ್ಯಾಕ್ ಫ್ರೂಟ್)
ಶಮನ : ಪಿತ್ತ ವಿಕಾರ, ನರಗಳ ದೌರ್ಬಲ್ಯ.
ಹಲಸಿನ ಹಣ್ಣನ್ನು ಜೇನುತುಪ್ಪದೊಡನೆ ತಿನ್ನುತ್ತಾ ಬಂದರೆ ಪಿತ್ತವಿಕಾರಗಳು ಶಮನಗೊಳ್ಳುವುದು. ತೊಳೆಗಳನ್ನು ಸಣ್ಣದಾಗಿ ತುಂಡುಮಾಡಿ ಬಾಳೆಹಣ್ಣು, ಜೇನುತುಪ್ಪದೊಡನೆ ಸೇವಿಸಿದರೆ ದೈಹಿಕ ಶಕ್ತಿ ಹೆಚ್ಚುವುದಲ್ಲದೇ ನರಗಳ ದೌರ್ಬಲ್ಯ ಕಡಿಮೆಯಾಗುತ್ತದೆ. ಹಲಸಿನ ಸೇವನೆಯಿಂದ ವೀರ್ಯ್ ವೃದ್ಧಿಯೂ ಆಗುತ್ತದೆ. ಅತಿಯಾಗಿ ತಿಂದರೆ ಹೊಟ್ಟೆನೋವು ಬರುವ ಸಾಧ್ಯತೆ ಇದೆ.
ವಸ್ತು : ಸೀತಾಫಲ (ಕಸ್ಟರ್ಡ್ ಆಪಲ್)
ಉಪಯೋಗ : ಜೀರ್ಣಶಕ್ತಿ ಹೆಚ್ಚಳ, ರಕ್ತವೃದ್ಧಿ.
ಪ್ರತಿದಿನ ಊಟದ ನಂತರ ಈ ಹಣ್ಣನ್ನು ಸೇವಿಸುವುದರಿಂದ ಜೀರ್ಣಶಕ್ತಿ ಹೆಚ್ಚುವುದು. ಇದು ತಂಪುಕಾರಕವಾಗಿದ್ದು ಸೇವನೆಯಿಂದ ರಕ್ತವೃದ್ಧಿಯಾಗುವುದರ ಜತೆಗೆ ಸ್ನಾಯುಗಳು ಬಲಗೊಳ್ಳುತ್ತವೆ. ವಾಂತಿ ಹಾಗೂ ಹೊಟ್ಟೆ ಉರಿ ಶಮನವಾಗುತ್ತದೆ. ಕುರುಗಳನ್ನು ಪಕ್ವಗೊಳಿಸಲು ಹಣ್ಣಿನ ತಿರುಳನ್ನು ಉಪ್ಪಿನ ಜತೆ ಬೆರೆಸಿ ಲೇಪಿಸಬೇಕು.
ವಸ್ತು : ಹಾಗಲಕಾಯಿ
(ಬಿಟ್ಟರ್ ಗೌರ್ಡ್)
ಶಮನ : ಮಧುಮೇಹ, ಕರುಳಿನ ಹುಣ್ಣು, ಮೂಲವ್ಯಾಧಿ.
ಮಧುಮೇಹದಿಂದ ನರಳುತ್ತಿರುವ ರೋಗಿಗಳು ಹಾಗಲಕಾಯಿಯನ್ನು ಹಸಿಯಾಗಿ ತಿಂದರೆ ರೋಗ ಉಲ್ಬಣಿಸದೆ ಬಹುಪಾಲು ಗುಣವಾಗುವುದು. ಹಾಗಲಕಾಯಿಯ ಗೊಜ್ಜು ಮಾಡಿಕೊಂಡು ಕ್ರಮವಾಗಿ ಸೇವಿಸುತ್ತಿದ್ದರೆ ರಕ್ತ ಶುದ್ಧಿಯಾಗುವುದು. ಕರುಳಿನ ಹುಣ್ಣು, ಮೂಲವ್ಯಾಧಿ ಹಾಗೂ ಕೆಮ್ಮು ನಿವಾರಣೆಯಾಗುವುದು.
ವಸ್ತು : ಅಂಜೂರ (ಫಿಗ್)
ಶಮನ : ಒತ್ತಡ, ಮಲಬದ್ಧತೆ, ಮೂಲವ್ಯಾಧಿ.
ಅಂಜೂರದ ಹಣ್ಣುಗಳ ಸೇವನೆಯಿಂದ ಅಧಿಕ ಕೆಲಸದಿಂದ ಉಂಟಾದ ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಯಾಗುವುದು. ನವ ಚೈತನ್ಯ ಮೂಡುವುದು. ಈ ಹಣ್ಣಿನಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಶಮನವಾಗುವುದು. ಮೂಲವ್ಯಾಧಿಯಿಂದ ಬಳಲುವವರು ಮೂರು ಅಂಜೂರದ ಹಣ್ಣುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ಕೂಡಲೇ ಹಣ್ಣುಗಳನ್ನು ತಿಂದು ಆ ನೀರು ಕುಡಿದರೆ ಗುಣವಾಗುವುದು.
ವಸ್ತು ಸೇಬು (ಆಪಲ್)
ಶಮನ : ತಲೆನೋವು, ಮರೆವು, ಮೊಡವೆ.
ಸೇಬಿನ ಹಣ್ಣನ್ನು ತುಂಡುಮಾಡಿಕೊಂಡು ಉಪ್ಪು ಸಹಿತ ನಿರಂತರ ಸೇವಿಸಿದರೆ ತಲೆನೋವು ಕಡಿಮೆಯಾಗುವುದು. ಸೇಬಿನ ತಿರುಳನ್ನು ಅರೆದು ಮುಖಕ್ಕೆ ಲೇಪಿಸಿಕೊಂಡರೆ ಮೊಡವೆಗಳು ನಿವಾರಣೆಯಾಗಿ ಮುಖದ ಕಾಂತಿ ಹೆಚ್ಚುವುದು. ಊಟವಾದ ಬಳಿಕ ಸೇಬನ್ನು ತಿಂದರೆ ಜ್ನಾಪಕ ಶಕ್ತಿ ಹೆಚ್ಚುವುದು.
ವಸ್ತು : ಪರಂಗಿ ಹಣ್ಣು
(ಪಪಾಯ)
ಶಮನ : ಹೃದಯ ದೌರ್ಬಲ್ಯ
ಪರಂಗಿಹಣ್ಣಿನ ಜತೆ ಹಾಲು ಮತ್ತು ಜೇನುತುಪ್ಪ ಸೇರಿಸಿ ಸೇವಿಸುವುದರಿಂದ ಹೃದಯ ದೌರ್ಬಲ್ಯ ನಿವಾರಣೆಯಾಗಿ ಹೊಸ ಚೈತನ್ಯ ಮೂಡುವುದು. ಹಾಲುಣಿಸುವ ತಾಯಂದಿರು ಹಣ್ಣನ್ನು ನಿಯಮಿತವಾಗಿ ಬಳಸುವುದರಿಂದ ಶಕ್ತಿ ಹೆಚ್ಚುವುದು. ಊಟದ ನಂತರ ಹಣ್ಣನ್ನು ಸೇವಿಸುತ್ತಾ ಬಂದರೆ ಆಹಾರ ಚೆನ್ನಾಗಿ ಜೀರ್ಣವಾಗುವುದು.
ವಸ್ತು : ಕಡಲೇಕಾಯಿ
ಉಪಯೋಗ : ಮುಖದ ಕಾಂತಿ ಹೆಚ್ಚಳ, ಮಧುಮೇಹಿಗಳಿಗೆ ಅನುಕೂಲ.
ಒಂದು ಚಮಚ ಕಡಲೇಕಾಯಿ ಎಣ್ಣೆಗೆ ಅಷ್ಟೇ ಪ್ರಮಾಣದ ನಿಂಬೆ ರಸ ಬೆರೆಸಿ ರಾತ್ರಿ ಮುಖಕ್ಕೆ ಲೇಪಿಸುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ. ಗೋಧಿ ಹಿಟ್ಟು ಹಾಗೂ ಶೇಂಗಾ ಹಿಟ್ಟು ಬೆರೆಸಿದ ರೊಟ್ಟಿಯು ಮಧುಮೇಹಿಗಳಿಗೆ ಹಿತ. ಶೇಂಗಾ ಹಿಂಡಿಯಲ್ಲಿ ಉತ್ತಮ ಸಸಾರಜನಕವಿದ್ದು, ದನಕರುಗಳಿಗೆ ಉತ್ತಮ.
ವಸ್ತು : ಮಾವು (ಮ್ಯಾಂಗೊ)
ಶಮನ : ಮೂಲವ್ಯಾಧಿ, ವಾತ-ಪಿತ್ತ, ಮಲಬದ್ಧತೆ, ಅಜೀರ್ಣ.
ಹುಣಸೆ ಚಿಗುರು ಮತ್ತು ಎಳೆ ಮಾವಿನಕಾಯಿಯನ್ನು ಬೇಯಿಸಿಕೊಂಡು ತಿಂದರೆ ಮೂಲವ್ಯಾಧಿ ಗುಣವಾಗುವುದು. ಹಣ್ಣನ್ನು ಹಿತಮಿತವಾಗಿ ತಿಂದರೆ ವಾಯು ಶಮನಗೊಳ್ಳುವುದು. ವಾತ-ಪಿತ್ತ ನಾಶಗೊಳಿಸಿ ಹೃದಯಕ್ಕೆ ಹಿತವಾಗುವುದು. ಉಪ್ಪು ಮತ್ತು ಜೇನುತುಪ್ಪವನ್ನು ನಂಚಿಕೊಂಡು ಮಾವಿನಕಾಯಿ ಹೀಚು ತಿಂದರೆ ಮಲಬದ್ಧತೆ ಮತ್ತು ಅಜೀರ್ಣ ನಿವಾರಣೆಯಾಗುವುದು.
ವಸ್ತು : ಅಡುಗೆ ಉಪ್ಪು
ಶಮನ : ಬಾಯಿ ಹುಣ್ನು
ಒಂದು ಬಟ್ಟಲು ಬಿಸಿನೀರಿನಲ್ಲಿ ಅರ್ಧ ಟೀ ಚಮಚ ಉಪ್ಪನ್ನು ಕರಗಿಸುವುದು. ನಂತರ ಈ ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣು ಶಮನವಾಗುವುದು.
ವಸ್ತು : ಮೆಣಸು
ಶಮನ : ಹಲ್ಲುನೋವು
ಮೆಣಸನ್ನು ನುಣ್ಣಗೆ ಅರೆದು ವಸಡಿಗೆ ಹಚ್ಚುವುದರಿಂದ ಕೆಟ್ಟ ನೀರು ಸುರಿದುಹೋಗಿ ನೋವು ಕಡಿಮೆಯಾಗುವುದು. ವಸಡಿಗೆ ನಿಂಬೆರಸ ಹಚ್ಚುವುದರಿಂದ ಹಲ್ಲುನೋವು ಶಮನವಾಗುವುದು.
ವಸ್ತು : ಕಿತ್ತಳೆ
ಶಮನ : ಮುಖದಲ್ಲಿ ಕಲೆ
ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಮುಖದಲ್ಲಿ ಕಲೆಯಿರುವ ಭಾಗದಲ್ಲಿ ಮೃದುವಾಗಿ ತಿಕ್ಕಬೇಕು. ಪ್ರತಿದಿನ ಹೀಗೆ ಮಾಡುತ್ತಿದ್ದರೆ ಮುಖದಲ್ಲಿನ ಮೊಡವೆಗಳು ಹಾಗೂ ಕಪ್ಪು ಕಲೆಗಳು ನಿವಾರಣೆಯಗುವುವು.
ವಸ್ತು : ಕೊತ್ತಂಬರಿ
ಶಮನ : ತಲೆನೋವು, ಬಾಯಿಯ ದುರ್ಗಂಧ.
ಕೊತ್ತಂಬರಿ ಸೊಪ್ಪಿನ ರಸವನ್ನು ಹಣೆಗೆ ಲೇಪ ಹಾಕುವುದರಿಂದ ತಲೆನೋವು ನಿವಾರಣೆಯಾಗುವುದು. ಬರೀ ಕೊತ್ತಂಬರಿಸೊಪ್ಪನ್ನು ಬಾಯಿಯಲ್ಲಿ ಜಗಿಯುವುದರಿಂದ ಬಾಯಿಯಿಂದ ದುರ್ಗಂಧ ಬರುವುದಿಲ್ಲ. ಜತೆಗೆ ದಂತ ಕ್ಷಯವೂ ನಿವಾರಣೆಯಾಗುತ್ತದೆ.
ವಸ್ತು : ಉದ್ದು
ಶಮನ : ವೀರ್ಯ ವೃದ್ಧಿಯಾಗಿ ಶಾರೀರಿಕ ಬಲ.
ಉದ್ದಿನ ಬೇಳೆಯನ್ನು ಹುರಿದು ಹಾಲಿನಲ್ಲಿ ಬೇಯಿಸಿ ಸಕ್ಕರೆ, ಏಲಕ್ಕಿ ಸೇರಿಸಿ ಪಾಯಸ ಮಾಡಿ ಸೇವಿಸುವುದರಿಂದ ವೀರ್ಯ ವೃದ್ಧಿಯಾಗಿ ಶಾರೀರಿಕ ಬಲ ಹೆಚ್ಚುವುದು. ಉದ್ದಿನ ಬೇಳೆ ತೊವ್ವೆಯನ್ನು ತಯಾರಿಸಿ ಊಟದ ಜತೆ ಸೇವಿಸಿದರೆ ಅಂಗಾಂಗಗಳು ಬಲಗೊಳ್ಳುವುವು.
ವಸ್ತು : ನಿಂಬೆ
ಶಮನ : ಸೊಳ್ಳೆಗಳ ಕಾಟ, ಬಾಯಿಯ ದುರ್ವಾಸನೆ.
ಸೊಳ್ಳೆಗಳು ಹೆಚ್ಚಾಗಿರುವ ಪ್ರದೇಶದಲ್ಲಿ ವಾಸಿಸುವ ಜನರು ಮೈಕೈಗೆ ನಿಂಬೆರಸ ಸವರಿಕೊಂಡರೆ ಸೊಳ್ಳೆಗಳು ಹತ್ತಿರ ಸುಳಿಯುವುದಿಲ್ಲ. ಬಾಯಿಯಿಂದ ದುರ್ವಾಸನೆ ಬರುತ್ತಿದ್ದರೆ ನಿಂಬೆರಸವನ್ನು ನೀರಿನಲ್ಲಿ ಬೆರೆಸಿ ಆಗಾಗ ಬಾಯಿ ಮುಕ್ಕಳಿಸುವುದರಿಂದ ನಿವಾರಣೆಯಾಗುವುದು.
ವಸ್ತು : ಲವಂಗ
ಶಮನ : ಹಲ್ಲು ನೋವು, ಕೆಮ್ಮು.
ಹಲ್ಲು ನೋವಿಗೆ ಲವಂಗದ ಎಣ್ಣೆ ಅಥವಾ ಲವಂಗದ ಮುಲಾಮನ್ನು ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ. ಸಾಧಾರಣ ಕೆಮ್ಮು ಕಾಣಿಸಿಕೊಂಡಾಗ ಕಲ್ಲುಸಕ್ಕರೆ ಮತ್ತು ಲವಂಗವನ್ನು ಬಾಯಿಗೆ ಹಾಕಿಕೊಂಡು ಜಗಿದು ರಸ ನುಂಗುವುದರಿಂದ ಶಮನವಾಗುವುದು.
ವಸ್ತು : ತುಳಸಿ
ಶಮನ : ಮೈಕೈನೋವು
ಒಂದು ಲೋಟ ನೀರಿನಲ್ಲಿ ಹತ್ತು ತುಲಸಿ ಎಲೆಗಳನ್ನು ಚೆನ್ನಾಗಿ ಕುದಿಸುವುದು. ನೀರು ಚೆನ್ನಾಗಿ ಕುದಿದು ಅರ್ಧ ಲೋಟ ಆದಮೇಲೆ ಸೋಸಿಕೊಳ್ಳುವುದು. ತಣ್ಣಗಾದ ಕಷಾಯಕ್ಕೆ ಉಪ್ಪನ್ನು ಹಾಕಿ ಕುಡಿಯುವುದು. ಮೈಕೈನೋವು ನಿಲ್ಲುವವರೆಗೂ ಪ್ರತಿದಿನ ಈ ಕಷಾಯ ಬಳಸುವುದು. ಜತೆಗೆ, ಅರ್ಧ ಗ್ರಾಂ ದಾಲ್ಚಿನ್ನಿ (ಚಕ್ಕೆ) ಪುಡಿಯನ್ನು ಒಂದು ಟೀ ಚಮಚ ಜೇನುತುಪ್ಪದೊಂದಿಗೆ ಕನಿಷ್ಟ ಪಕ್ಷ ದಿನಕ್ಕೆರಡು ಬಾರಿ ಸೇವಿಸಿದರೆ ನೋವು ಬೇಗ ಶಮನವಾಗುವುದು.
ವಸ್ತು : ಮಾವಿನ ಎಲೆಗಳು
ಶಮನ : ಕಿವಿ ಸೋಂಕು
ಕೆಲವು ತಾಜಾ ಮಾವಿನ ಎಲೆಗಳನ್ನು ಚೆನ್ನಾಗಿ ಅರೆದು ಅವುಗಳಿಂದ ಒಂದು ಟೀ ಚಮಚ ರಸವನ್ನು ತಯಾರಿಸಿಕೊಳ್ಳುವುದು. ಈ ರಸವನ್ನು ಸ್ವಲ್ಪ ಬೆಚ್ಚಗೆ ಮಾಡಿ ಸೋಂಕಿಗೆ ಒಳಗಾಗಿರುವ ಕಿವಿಗೆ ಔಷಧವಾಗಿ ಬಳಸಬಹುದು. ದಿನಕ್ಕೆರಡು ಬಾರಿ ಪ್ರತಿಸಲವೂ ಒಂದೆರಡು ಹನಿ ಬಳಸಿದರೆ ಸೋಂಕು ನಿವಾರಣೆಯಾಗುವುದು.
ವಸ್ತು : ಖರ್ಜೂರ
ಶಮನ : ಜಂತುಹುಳು, ಭೇದಿ.
ಜಂತುಹುಳುಗಳಿಂದ ಬಳಲುತ್ತಿರುವವರು ಐದು ಖರ್ಜೂರ ತಿಂದು ನಿಂಬೆಹಣ್ಣಿನ ಪಾನೀಯ ಕುಡಿದರೆ ಶಮನವಾಗುವುದು. ಪರಿಣಾಮ ಬೀರುವವರೆಗೂ ಮುಂದುವರಿಸುವುದು ಒಳ್ಳೆಯದು. ಭೇದಿಯಾಗುತ್ತಿರುವಾಗ ಖರ್ಜೂರ ಸೇವಿಸಿದರೆ ನಿವಾರಣೆಯಾಗುವುದು.
ವಸ್ತು : ಉದ್ದು
ಶಮನ : ಸ್ತ್ರೀಯರ ಬಿಳುಪು ರೋಗ.
ಉದ್ದಿನ ಹಿಟ್ಟು, ಅತಿಮಧುರ, ಕುಂಬಳದ ಬೇರು ಹಾಗೂ ಅಶ್ವಗಂಧ, ಇವುಗಳನ್ನು ಸಮನಾಗಿ ಕುಟ್ಟಿ ಶೋಧಿಸಿಟ್ಟುಕೊಂಡು ಹಲವು ದಿನಗಳವರೆಗೆ ಬಿಡದೆ ಒಂದೊಂದು ಚಮಚದಂತೆ ಜೇನುತುಪ್ಪದೊಡನೆ ಸೇರಿಸಿ ದಿನಕ್ಕೆರಡು ಬಾರಿ ಸೇವಿಸುವುದರಿಂದ ಸ್ತ್ರೀಯರ ಬಿಳುಪುರೋಗ ವಾಸಿಯಾಗುತ್ತದೆ.
ವಸ್ತು : ಬಿಲ್ವ
ಶಮನ : ಕಫ, ಊತ.
ಕಫ ಕಟ್ಟಿಕೊಂಡು ಎದೆ ನೋವು ಬರುತ್ತಿದ್ದರೆ ಬಿಲ್ವದ ಎಲೆಗಳ ರಸವನ್ನು ಕುಡಿದರೆ ಶಮನವಾಗುವುದು. ಊತವಿರುವಾಗ ಎಲೆಗಳನ್ನು ಬಿಸಿ ಮಾಡಿ ಪಟ್ಟು ಹಾಕಿದರೆ ಪರಿಣಾಮ ಬೀರುವುದು.
ವಸ್ತು : ವೀಳ್ಯದೆಲೆ
ಶಮನ : ಕೆಮ್ಮು, ನೋವು.
ಒಂದು ವೀಳ್ಯದೆಲೆ, ಸ್ವಲ್ಪ ಕರೀ ತುಳಸಿ ಹಾಗೂ ಒಂದು ಲವಂಗವನ್ನು ಅರೆದು ದಿನಕ್ಕೆ ಎರಡು ಬಾರಿ ಸೇವಿಸಿದರೆ ಕೆಮ್ಮು ಕಡಿಮೆಯಾಗುವುದು. ವೀಳ್ಯದೆಲೆಗೆ ಹರಳೆಣ್ಣೆಯನ್ನು ಹಚ್ಚಿ ಅದನ್ನು ಬಿಸಿ ಮಾಡಿ ಹೊಟ್ಟೆ ಉಬ್ಬರದಿಂದ ನರಳುತ್ತಿರುವ ಮಗುವಿನ ಹೊಟ್ಟೆಗೆ ಕಾವು ಕೊಟ್ಟರೆ ನೋವು ಮಾಯವಾಗಿ ಮೂತ್ರ ಸುಲಭವಾಗಿ ಆಗುವುದು.
ವಸ್ತು : ಅರಿಶಿನ
ಶಮನ : ರಕ್ತ ಸ್ರಾವ, ಮೊಡವೆ.
ದೇಹದ ಯಾವುದೇ ಭಾಗ ಕೊಯ್ದುಕೊಂಡು ರಕ್ತ ಒಸರುತ್ತಿದ್ದರೆ, ಆ ಗಾಯದ ಮೇಲೆ ಅರಿಶಿನ ಹುಡಿಯನ್ನು ಉದುರಿಸಿದರೆ ರಕ್ತ ಬರುವುದು ನಿಲ್ಲುವುದು. ಮೊಡವೆಗಳಿಗೆ ಅರಿಶಿನದ ಕೊರಡನ್ನು ತೇಯ್ದು ಲೇಪಿಸುವುದರಿಂದ ಅವುಗಳು ಕ್ರಮೇಣ ಕಡಿಮೆಯಾಗುತ್ತವೆ.
ವಸ್ತು : ತುಳಸಿ
ಶಮನ : ಹುಳುಕಡ್ಡಿ.
ತುಳಸಿ ಗಿಡದ ಕಾಂಡದಿಂದ ಹುಳುಕಡ್ಡಿಯ ಭಾಗವನ್ನು ಚೆನ್ನಾಗಿ ಕೆರೆದು, ಅನಂತರ ತುಳಸಿ ಸೊಪ್ಪಿನ ಕಷಾಯದಿಂದ ಆ ಭಾಗವನ್ನು ಚೆನ್ನಾಗಿ ತೊಳೆಯಬೇಕು. ಇದಾದ ಮೇಲೆ ತುಳಸಿ ಸೊಪ್ಪನ್ನು ಚೆನ್ನಾಗಿ ಅರೆದು ಹುಳುಕಡ್ಡಿಯ ಮೇಲೆ ಲೇಪಿಸುವುದರಿಂದ ಶೀಘ್ರ ಗುಣ ಕಂಡುಬರುವುದು.
ವಸ್ತು : ಶ್ರೀಗಂಧ
ಶಮನ : ಚರ್ಮದ ಅಲರ್ಜಿ.
ಚರ್ಮದ ಅಲರ್ಜಿಯಿಂದ ಬಳಲುತ್ತಿರುವವರು ಶ್ರ್ಈಗಂಧವನ್ನು ಬಳಸಿದರೆ ಪರಿಣಾಮ ಬೀರುವುದು. ಒಂದು ಟೀ ಚಮಚ ನಿಂಬೇಹಣ್ಣಿನ ರಸದೊಂದಿಗೆ ಶ್ರ್ಈಗಂಧದ ಪುಡಿಯನ್ನು ಬೆರೆಸಿ ಅಲರ್ಜಿಯಿರುವ ಚರ್ಮದ ಮೇಲೆ ಲೇಪಿಸುತ್ತಾ ಬಂದರೆ ಗುಣವಾಗುವುದು.
ವಸ್ತು : ಪರಂಗಿಹಣ್ಣು
ಉಪಯೋಗ : ರೋಗ ನಿರೋಧಕ ಶಕ್ತಿ ಹೆಚ್ಚಳ, ಬೊಜ್ಜು ಕರಗುವಿಕೆ.
ಪ್ರತಿದಿನ ಪರಂಗಿಹಣ್ಣನ್ನು ಸೇವಿಸುವುದರಿಂದ ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಅತಿಯಾದ ಬೊಜ್ಜಿನಿಂದ ಬಳಲುತ್ತಿರುವವರು ಹಣ್ಣು ಸೇವಿಸಿದರೆ ಪರಿಣಾಮ ಬೀರುವುದು. ಬಾಣಂತಿಯರು ಸೇವಿಸಿದರೆ ಹಾಲಿನ ಉತ್ಪತ್ತಿ ಹೆಚ್ಚುವುದು.
ಬಿಗಿ ಹೊಟ್ಟೆ ಸಡಿಲಿಸಲು ನಾರು.
ಬಿಗಿ ಹೊಟ್ಟೆ ಸಡಿಲಿಸಲು ನಾರು.
ಆಹಾರದಲ್ಲಿ ನಾರಿನ ಅಂಶ ಇಲ್ಲದಿರುವುದೇ ಮಲಬದ್ಧತೆ ಉಂಟಾಗಲು ಮುಖ್ಯ ಕಾರಣ. ನಾರಿನಂಶವಿರುವ ಆಹಾರ ಸೇವನೆ ಮಾಡುತ್ತಿದ್ದರೆ ಸಾಮಾನ್ಯವಾಗಿ ಎಂದೂ ಮಲಬದ್ಧತೆ ಆಗುವುದಿಲ್ಲ.
ನಾರು ನಮ್ಮ ಹೊಟ್ಟೆಯಲ್ಲಿ ಜೀರ್ಣವಾಗುವುದಿಲ್ಲ. ಆದರೆ ಈ ನಾರು ಕರುಳಿನಲ್ಲಿರುವ ವಿಷ ಪದಾರ್ಥಗಳನ್ನು ಹೀರಿಕೊಂಡು ಗಾತ್ರಧಲ್ಲಿ ಹೆಚ್ಚುತ್ತದೆ. ಇದರ ಪರಿಣಾಮವಾಗಿ ದೊಡ್ಡ ಕರುಳಿನಲ್ಲಿ ಉಪಯುಕ್ತ ಬ್ಯಾಕ್ಟೀರಿಯ ಸಂಖ್ಯೆ ಹೆಚ್ಚುತ್ತದೆ. ಈ ಉಪಯುಕ್ತ ಬ್ಯಾಕ್ಟೀರಿಯ ನಮ್ಮ ಕರುಳಿನಲ್ಲಿಯ ನೈಟ್ರೋಜೆನ್, ಗ್ಲೂಕೋಸ್, ಕೊಲೆಸ್ಟರಾಲ್ ಉಪಯೋಗಿಸಿ ವೃದ್ಧಿಹೊಂದುತ್ತವೆ. ಆದ್ದರಿಂದ ಈ ನಾರು ಮಲಬದ್ದತೆ ತಡೆಯುವುದಲ್ಲದೆ ಸಕ್ಕರೆ ಕಾಯಿಲೆ ಉಳ್ಳವರಿಗೆ, ಬೊಜ್ಜು ಇರುವ ವ್ಯಕ್ತಿಗಳಿಗೆ, ಪಿತ್ತಕೋಶದಲ್ಲಿ ಕಲ್ಲು ಇರುವವರಿಗೆ, ಹೃದಯ ರೋಗಿಗಳಿಗೆ ಪ್ರಯೋಜಕವಾಗುತ್ತವೆ.
ಪಾಶ್ಚಿಮಾತ್ಯ ಜನರು ಕಡಿಮೆ ಪ್ರಮಾಣದ ನಾರು ಸೇವಿಸುವುದರಿಂದ (೨೦ ಗ್ರಾಮ್) ಅವರಲ್ಲಿ ಅನೇಕ ರೋಗಗಳು ಉದಾ: ಕರುಳಿನ ಕ್ಯಾನ್ಸರ್, ಪಿತ್ತಕೋಶದ ಕಲ್ಲುಗಳು ಹೆಚ್ಚಾಗುತ್ತವೆ.
ಆಫ್ರಿಕಾದಲ್ಲಿ ಜನರು ಸರಾಸರಿ ೧೫೦ ಗ್ರಾಮ್ ನಷ್ಟು ನಾರು ಪದಾರ್ಥ ಸೇವಿಸುವುದರಿಂದ ಅಲ್ಲಿಯ ಜನರಿಗೆ ಈ ತೊಂದರೆಗಳು ಅಷ್ಟೇನು ಕಂಡುಬರುವುದಿಲ್ಲ. ದಿನಕ್ಕೆ ಸರಾಸರಿ ೫೦ ಗ್ರಾಮ್ ನಾರು ಉಪಯೋಗಿಸಿದರೂ ಸಾಕು, ಬಿಗಿ ಹೊಟ್ಟೆ ಸಡಿಲವಾಗುತ್ತದೆ, ಜತೆಗೆ ಇತರ ರೋಗಗಳನ್ನೂ ತಡೆಗಟ್ಟಬಹುದಾಗಿದೆ.
ಔಷಧಗಳಿಗೆ ಶರಣು ಹೋಗುವುದು ಒಳ್ಳೆಯದಲ್ಲ. ಅವು ಅಭ್ಯಾಸ ಅಥವಾ ಚಟ ಉಂಟು ಮಾಡುತ್ತವೆ ಹಾಗೂ ಮಲಬದ್ಡತೆ ಗುಣ ಹೊಂದುವುದಿಲ್ಲ. ನಾರಿನಂಶ ಇರುವ ಆಹಾರ ಪದಾರ್ಥಗಳೆಂದರೆ - ಸೊಪ್ಪು, ಬೀಟ್ ರೂಟ್, ಕ್ಯಾಬೇಜ್, ಆಲೂಗೆಡ್ಡೆ, ಕೆಂಪು ಅಕ್ಕಿ, ರಾಗಿ, ಜೋಳ, ನವಣೆ, ಸಜ್ಜೆ, ತೊಗರೆ, ಹೆಸರು, ಉದ್ದು, ಅಂಟು, ಸೇಬು, ಬಾಳೆಹಣ್ಣು, ದ್ರಾಕ್ಷಿ ಇತ್ಯಾದಿ. ಮೇಲೆ ಹೇಳಿದ ಕೆಲವು ಪದಾರ್ಥಗಳಲ್ಲಿ ಅಂದರೆ ಜೋಳ, ನವಣೆ, ಸಜ್ಜೆ, ಉದ್ದು, ಬಾಳೇಹಣ್ಣು ಕೆಲವರಿಗೆ ಆಗದೇ ಇರಬಹುದು. ಅಂಥಹವರು ಕೆಂಪು ಅಕ್ಕಿಯನ್ನು ಉಪಯೋಗಿಸಿದರೆ ಬಹಳ ಅನುಕೂಲವಾಗುತ್ತದೆ.
ರಾಗಿ ಅಭ್ಯಾಸ ಇರುವವರಿಗೆ ಏನೂ ತೊಂದರೆ ಇರುವುದಿಲ್ಲ. ಪಾಲೀಶ್ ಮಾಡಿದ ಅಕ್ಕಿ, ಬೇಕರಿ ತಿಂಡಿಗಳು, ಹೋಟೆಲ್ ನಲ್ಲಿ ತಿನ್ನುವ ಅಭ್ಯಾಸ, ಎಣ್ಣೆಯಲ್ಲಿ ಕರಿದ ತಿಂಡಿಗಳು, ಇತ್ಯಾಧಿಗಳನ್ನು ಉಪಯೋಗಿಸುವವರು ಮಲಬದ್ದತೆಗೆ ಸುಲಭವಾಗಿ ತುತ್ತಾಗುವರು. ಆದ್ದರಿಂದ ಹೇರಳವಾಗಿ ಹೊಟ್ಟು ಇರುವ(ಅಂದರೆ ಭತ್ತ ಮಾತ್ರ ತೆಗೆದ ಕೆಂಪು ಅಕ್ಕಿ) ಕೆಂಪು ಅಕ್ಕಿಯನ್ನು ನಿಮ್ಮ ಊಟದಲ್ಲಿ ಪ್ರತಿದಿನವೂ ಊಟಮಾಡುತ್ತಿದ್ದರೆ ಮಲಬದ್ದತೆಯ ತೊಂದರೆಗಳೇ ಇರುವುದಿಲ್ಲ.
ಹೆಚ್.ಕೆ.ಸತ್ಯಪ್ರಕಾಶ್.
ಕೃಪೆ : ಪ್ರಜಾವಾಣಿ ೯೮೮೬೩ ೩೪೬೬೭
ಡಾ. ಸಿ. ಪ್ರಕಾಶ್ ರಾವ್.
ಆಹಾರದಲ್ಲಿ ನಾರಿನ ಅಂಶ ಇಲ್ಲದಿರುವುದೇ ಮಲಬದ್ಧತೆ ಉಂಟಾಗಲು ಮುಖ್ಯ ಕಾರಣ. ನಾರಿನಂಶವಿರುವ ಆಹಾರ ಸೇವನೆ ಮಾಡುತ್ತಿದ್ದರೆ ಸಾಮಾನ್ಯವಾಗಿ ಎಂದೂ ಮಲಬದ್ಧತೆ ಆಗುವುದಿಲ್ಲ.
ನಾರು ನಮ್ಮ ಹೊಟ್ಟೆಯಲ್ಲಿ ಜೀರ್ಣವಾಗುವುದಿಲ್ಲ. ಆದರೆ ಈ ನಾರು ಕರುಳಿನಲ್ಲಿರುವ ವಿಷ ಪದಾರ್ಥಗಳನ್ನು ಹೀರಿಕೊಂಡು ಗಾತ್ರಧಲ್ಲಿ ಹೆಚ್ಚುತ್ತದೆ. ಇದರ ಪರಿಣಾಮವಾಗಿ ದೊಡ್ಡ ಕರುಳಿನಲ್ಲಿ ಉಪಯುಕ್ತ ಬ್ಯಾಕ್ಟೀರಿಯ ಸಂಖ್ಯೆ ಹೆಚ್ಚುತ್ತದೆ. ಈ ಉಪಯುಕ್ತ ಬ್ಯಾಕ್ಟೀರಿಯ ನಮ್ಮ ಕರುಳಿನಲ್ಲಿಯ ನೈಟ್ರೋಜೆನ್, ಗ್ಲೂಕೋಸ್, ಕೊಲೆಸ್ಟರಾಲ್ ಉಪಯೋಗಿಸಿ ವೃದ್ಧಿಹೊಂದುತ್ತವೆ. ಆದ್ದರಿಂದ ಈ ನಾರು ಮಲಬದ್ದತೆ ತಡೆಯುವುದಲ್ಲದೆ ಸಕ್ಕರೆ ಕಾಯಿಲೆ ಉಳ್ಳವರಿಗೆ, ಬೊಜ್ಜು ಇರುವ ವ್ಯಕ್ತಿಗಳಿಗೆ, ಪಿತ್ತಕೋಶದಲ್ಲಿ ಕಲ್ಲು ಇರುವವರಿಗೆ, ಹೃದಯ ರೋಗಿಗಳಿಗೆ ಪ್ರಯೋಜಕವಾಗುತ್ತವೆ.
ಪಾಶ್ಚಿಮಾತ್ಯ ಜನರು ಕಡಿಮೆ ಪ್ರಮಾಣದ ನಾರು ಸೇವಿಸುವುದರಿಂದ (೨೦ ಗ್ರಾಮ್) ಅವರಲ್ಲಿ ಅನೇಕ ರೋಗಗಳು ಉದಾ: ಕರುಳಿನ ಕ್ಯಾನ್ಸರ್, ಪಿತ್ತಕೋಶದ ಕಲ್ಲುಗಳು ಹೆಚ್ಚಾಗುತ್ತವೆ.
ಆಫ್ರಿಕಾದಲ್ಲಿ ಜನರು ಸರಾಸರಿ ೧೫೦ ಗ್ರಾಮ್ ನಷ್ಟು ನಾರು ಪದಾರ್ಥ ಸೇವಿಸುವುದರಿಂದ ಅಲ್ಲಿಯ ಜನರಿಗೆ ಈ ತೊಂದರೆಗಳು ಅಷ್ಟೇನು ಕಂಡುಬರುವುದಿಲ್ಲ. ದಿನಕ್ಕೆ ಸರಾಸರಿ ೫೦ ಗ್ರಾಮ್ ನಾರು ಉಪಯೋಗಿಸಿದರೂ ಸಾಕು, ಬಿಗಿ ಹೊಟ್ಟೆ ಸಡಿಲವಾಗುತ್ತದೆ, ಜತೆಗೆ ಇತರ ರೋಗಗಳನ್ನೂ ತಡೆಗಟ್ಟಬಹುದಾಗಿದೆ.
ಔಷಧಗಳಿಗೆ ಶರಣು ಹೋಗುವುದು ಒಳ್ಳೆಯದಲ್ಲ. ಅವು ಅಭ್ಯಾಸ ಅಥವಾ ಚಟ ಉಂಟು ಮಾಡುತ್ತವೆ ಹಾಗೂ ಮಲಬದ್ಡತೆ ಗುಣ ಹೊಂದುವುದಿಲ್ಲ. ನಾರಿನಂಶ ಇರುವ ಆಹಾರ ಪದಾರ್ಥಗಳೆಂದರೆ - ಸೊಪ್ಪು, ಬೀಟ್ ರೂಟ್, ಕ್ಯಾಬೇಜ್, ಆಲೂಗೆಡ್ಡೆ, ಕೆಂಪು ಅಕ್ಕಿ, ರಾಗಿ, ಜೋಳ, ನವಣೆ, ಸಜ್ಜೆ, ತೊಗರೆ, ಹೆಸರು, ಉದ್ದು, ಅಂಟು, ಸೇಬು, ಬಾಳೆಹಣ್ಣು, ದ್ರಾಕ್ಷಿ ಇತ್ಯಾದಿ. ಮೇಲೆ ಹೇಳಿದ ಕೆಲವು ಪದಾರ್ಥಗಳಲ್ಲಿ ಅಂದರೆ ಜೋಳ, ನವಣೆ, ಸಜ್ಜೆ, ಉದ್ದು, ಬಾಳೇಹಣ್ಣು ಕೆಲವರಿಗೆ ಆಗದೇ ಇರಬಹುದು. ಅಂಥಹವರು ಕೆಂಪು ಅಕ್ಕಿಯನ್ನು ಉಪಯೋಗಿಸಿದರೆ ಬಹಳ ಅನುಕೂಲವಾಗುತ್ತದೆ.
ರಾಗಿ ಅಭ್ಯಾಸ ಇರುವವರಿಗೆ ಏನೂ ತೊಂದರೆ ಇರುವುದಿಲ್ಲ. ಪಾಲೀಶ್ ಮಾಡಿದ ಅಕ್ಕಿ, ಬೇಕರಿ ತಿಂಡಿಗಳು, ಹೋಟೆಲ್ ನಲ್ಲಿ ತಿನ್ನುವ ಅಭ್ಯಾಸ, ಎಣ್ಣೆಯಲ್ಲಿ ಕರಿದ ತಿಂಡಿಗಳು, ಇತ್ಯಾಧಿಗಳನ್ನು ಉಪಯೋಗಿಸುವವರು ಮಲಬದ್ದತೆಗೆ ಸುಲಭವಾಗಿ ತುತ್ತಾಗುವರು. ಆದ್ದರಿಂದ ಹೇರಳವಾಗಿ ಹೊಟ್ಟು ಇರುವ(ಅಂದರೆ ಭತ್ತ ಮಾತ್ರ ತೆಗೆದ ಕೆಂಪು ಅಕ್ಕಿ) ಕೆಂಪು ಅಕ್ಕಿಯನ್ನು ನಿಮ್ಮ ಊಟದಲ್ಲಿ ಪ್ರತಿದಿನವೂ ಊಟಮಾಡುತ್ತಿದ್ದರೆ ಮಲಬದ್ದತೆಯ ತೊಂದರೆಗಳೇ ಇರುವುದಿಲ್ಲ.
ಹೆಚ್.ಕೆ.ಸತ್ಯಪ್ರಕಾಶ್.
ಕೃಪೆ : ಪ್ರಜಾವಾಣಿ ೯೮೮೬೩ ೩೪೬೬೭
ಡಾ. ಸಿ. ಪ್ರಕಾಶ್ ರಾವ್.
ಆಹಾರದಲ್ಲಿನ ಸತ್ವ
ಆಹಾರದಲ್ಲಿನ ಸತ್ವ
ಪ್ರಕೃತಿ : ಏನಯ್ಯಾ ನಿಮ್ಮನೇಲಿ ಎಲ್ಲ ೧೪
ಜನಾನು ಒಂದಲ್ಲ ಒಂದು ಕಾಯಿಲೆಯಿಂದ ನರಳುತ್ತಿದ್ದಾರಲ್ಲ, ಡಾಕ್ಟರಿಗೆ ತೋರಿಸ್ಲಿಲ್ವಾ?
ಮನುಷ್ಯ : ಅಯ್ಯೋ, ಡಾಕ್ಟರುಗಳಿಗೆ ತೋರ್ಸಿ ತೋರ್ಸಿ ಸಾಕಾಗಿದೆ, ಪ್ರಕೃತಿ. ಯಾವ ಡಾಕ್ಟರರ ಹತ್ರ ಹೋದ್ರೂ ಒಂದೇ ಕತೆ, ಔಷಧಿ ಕೊಡ್ಸಿ ಕೊಡ್ಸಿ ಸಾಕಾಗಿದೆ. ಹಾವು ಸಾಯೋಲ್ಲ, ಕೋಲು ಮುರಿಯೋಲ್ಲ ಅನ್ನೋ ಹಾಗಾಗಿದೆ ನಮ್ಮ ಪರಿಸ್ಥಿತಿ. ಬೇಜಾರಾಗೋಗಿದೆ.
ಔಷಧಿಗಳು ಕೆಲಸವೇ ಮಾಡ್ತಾಇಲ್ವೇನೋ ಅನ್ನಸ್ತಾ ಇದೆ. ಒಂದು ಔಷಧಿ ಕೊಟ್ರೆ ಇನ್ನೊಂದು ಕಾಯಿಲೆ ಶುರುವಾಗುತ್ತೆ. ಶುರುವಿನಲ್ಲಿ ಒಂದೇ ಒಂದು ಕಾಯಿಲೆ ಇತ್ತು. ಅದಕ್ಕೆ ಔಷಧಿ ಕೊಡಿಸೋಕ್ಕೆ ಹೋಗಿ ಈಗ ನೂರೆಂಟು ಕಾಯಿಲೆ ಅಂಟಿಕೊಂಡುಬಿಟ್ಟಿದೆ. ಈಗ ಬೆಳಿಗ್ಗೆಯಿಂದ ರಾತ್ರಿ ಮಲಗೋವರೆಗೂ ೧ ಕೇಜಿ ಔಷಧಿ ತಿನ್ನೋದೆ ಆಗ್ತಿದೆ. ಆಹಾರಕ್ಕಿಂತ ಔಷಧಿಗಳೇ ಜಾಸ್ತಿ ಆಗೋಗಿದೆ. ಏನು ಮಾಡಬೇಕೋ ದಿಕ್ಕೇ ತೋಚ್ತಾ ಇಲ್ಲ. ನೀನಾದ್ರೂ ದಾರಿ ತೋರ್ಸಯ್ಯಾ, ಪ್ರಕೃತಿ ದೇವರೇ. ನಿನಗೆ ಪುಣ್ಯ ಬರುತ್ತೆ.
ಪ್ರಕೃತಿ : ಅಲ್ಲಾಯ್ಯ, ನೀನು ಪ್ರಜಾವಾಣಿ, ವಿಜಯಕರ್ನಾಟಕ ಪೇಪರ್ ಗಳನ್ನ ಓದ್ತಾಇದೀಯ? ಅದರಲ್ಲಿ ಎರಡು ವರ್ಷದಿಂದ ಪ್ರತಿಯೊಬ್ಬರೂ ಆರೋಗ್ಯವನ್ನು ಹೇಗೆ ಕಾಪಾಡ್ಕೋಬೇಕು ಅಂತ ಬರೀತಾ ಇದಾರಲ್ಲ, ಅದನ್ನು ಓದಿದೀಯ? ಔಷಧಿಗಳ ಗೋಜೇ ಇಲ್ಲದೆ ಎಲ್ಲ ಕಾಯಿಲೆಗಳನ್ನು ನಾವು ಉಪಯೋಗಿಸುವ ಆಹಾರಗಳಲ್ಲೇ ಸರಿಮಾಡಬಹುದು ಎಂದು ಬರೀತಿದಾರಲ್ಲ! ಹಿಂದೆ ಯಾರೂ ಯಾವ ಪೇಪರ್ನೋರೂ ಹೀಗೆ ಜನಗಳಿಗೆ ಎಚ್ಚರಿಕೆ ಕೊಡ್ತಾಇರ್ಲಿಲ್ಲ. ಈಚೆಗೆ ಎಲ್ಲ ಪೇಪರ್ನೋರೂ ಜನಗಳಿಗೆ ತಿಳಿಸಿಕೊಡ್ತಾ ಇದಾರೆ.
ಮನುಷ್ಯ : ಏನಂತ ಇದೆ ಅದರಲ್ಲಿ! ಅಂಥಾ ವಿಶೇಷ ಏನು? ನಮ್ಮ ಆಹಾರದಲ್ಲೇ ಕಾಯಿಲೆ ವಾಸಿಮಾಡಬಹುದು ಅಂತ ಮತ್ತು ಅದು ಹೇಗೆ ಸಾಧ್ಯ ಡಾಕ್ಟರು ಗಳಿಗೆ ವಾಸಿಮಾಡೋಕೆ ಆಗದೇ ಇರುವುದು ಬರೀ ಆಹಾರದಲ್ಲೇ ಹೇಗೆ ವಾಸಿಯಾಗುತ್ತದೆ!
ಪ್ರಕೃತಿ : ಅಯ್ಯಾ, ಪೆದ್ದಪ್ಪ, ಈ ಇಡೀ ಜಗತ್ತಿನಲ್ಲಿ ಇರುವ ಕಾಯಿಲೆಗಳನ್ನೆಲ್ಲಾ ನಮ್ಮ ಆಹಾರಗಳಲ್ಲೇ ೧೦೦ ಕ್ಕೆ ೧೦೦ ರಷ್ಟು ವಾಸಿಮಾಡಬಹುದು ಕಣಯ್ಯಾ. ಅದೂ ಅಲ್ಲದೇ ಈಗ ನರಳುತ್ತಿರುವ ಕಾಯಿಲೆಗಳಿಂದ ಸಂಪೂರ್ಣವಾಗಿ ಬಿಡುಗಡೆ ಹೊಂದಿ ಇನ್ನು ಮುಂದೆಯೂ ಯಾವ ಕಾಯಿಲೆಯೂ ಬರದಂತೆ ನೋಡಿಕೊಳ್ಳಬಹುದು ಕಣಯ್ಯಾ.
ಮನುಷ್ಯ : ಅದು ಹೇಗೆ ನನಗೂ ತಿಳಿಸಿಕೊಡಯ್ಯಾ.
ಪ್ರಕೃತಿ : ಹಿಂದಿನ ಕಾಲದಲ್ಲಿ ಕೆಂಪು ಅಕ್ಕಿ ಅಂತ ಬೆಳೀತ ಇದ್ರು ಗೊತ್ತಾ? ಅಥವಾ ಕೊಟ್ಟಣದ ಅಕ್ಕಿ ಅಂತ ಕರೀತಾ ಇದ್ರು ಗೊತ್ತಾ? ಅದನ್ನ ತಿಂದು ಜನ ಎಷ್ಟು ಗಟ್ಟಿಮುಟ್ಟಾಗಿದ್ರು ಗೊತ್ತಾ? ಆಗೆಲ್ಲಾ ಈಗ ಬರುತ್ತಿರುವ ಕಾಯಿಲೆಗಳೆಲ್ಲ ಇತ್ತಾ? ಯೋಚನೆ ಮಾಡಿ ನೋಡು. ಇತ್ತೀಚಿನ ವರ್ಷಗಳಲ್ಲಿ ಪಾಲೀಶ್ ಮಾಡಿದ ಅಕ್ಕಿ ತಿಂದು ಈ ಕಾಯಿಲೆಗಳೆಲ್ಲ ಬಂದಿರುವುದು ಗೊತ್ತಾ? ಈ ಅಕ್ಕಿಯನ್ನು ಊಟಮಾಡುವವರಿಗೆ ಈ ಕಾಯಿಲೆಗಳೆಲ್ಲಾ ಸಾಮಾನ್ಯ. ಜೊತೆಗೆ ಈ ಅಕ್ಕಿಯನ್ನು ತಿನ್ನುವವರಿಗೆ ಆಸಿಡಿಟಿ, ಗ್ಯಾಸ್ಟ್ರ್ಐಟಿಸ್ ಎಂಬ ಕಾಯಿಲೆಗಳು ಹುಟ್ಟಿಕೊಳ್ಳುತ್ತವೆ. ಇದರಿಂದಲೇ ಬೇರೆಲ್ಲ ಕಾಯಿಲೆಗಳು ಹುಟ್ಟಿಕೊಳ್ಳುತ್ತವೆ.
ಪ್ರಕೃತಿ : ಏನಯ್ಯಾ ನಿಮ್ಮನೇಲಿ ಎಲ್ಲ ೧೪
ಜನಾನು ಒಂದಲ್ಲ ಒಂದು ಕಾಯಿಲೆಯಿಂದ ನರಳುತ್ತಿದ್ದಾರಲ್ಲ, ಡಾಕ್ಟರಿಗೆ ತೋರಿಸ್ಲಿಲ್ವಾ?
ಮನುಷ್ಯ : ಅಯ್ಯೋ, ಡಾಕ್ಟರುಗಳಿಗೆ ತೋರ್ಸಿ ತೋರ್ಸಿ ಸಾಕಾಗಿದೆ, ಪ್ರಕೃತಿ. ಯಾವ ಡಾಕ್ಟರರ ಹತ್ರ ಹೋದ್ರೂ ಒಂದೇ ಕತೆ, ಔಷಧಿ ಕೊಡ್ಸಿ ಕೊಡ್ಸಿ ಸಾಕಾಗಿದೆ. ಹಾವು ಸಾಯೋಲ್ಲ, ಕೋಲು ಮುರಿಯೋಲ್ಲ ಅನ್ನೋ ಹಾಗಾಗಿದೆ ನಮ್ಮ ಪರಿಸ್ಥಿತಿ. ಬೇಜಾರಾಗೋಗಿದೆ.
ಔಷಧಿಗಳು ಕೆಲಸವೇ ಮಾಡ್ತಾಇಲ್ವೇನೋ ಅನ್ನಸ್ತಾ ಇದೆ. ಒಂದು ಔಷಧಿ ಕೊಟ್ರೆ ಇನ್ನೊಂದು ಕಾಯಿಲೆ ಶುರುವಾಗುತ್ತೆ. ಶುರುವಿನಲ್ಲಿ ಒಂದೇ ಒಂದು ಕಾಯಿಲೆ ಇತ್ತು. ಅದಕ್ಕೆ ಔಷಧಿ ಕೊಡಿಸೋಕ್ಕೆ ಹೋಗಿ ಈಗ ನೂರೆಂಟು ಕಾಯಿಲೆ ಅಂಟಿಕೊಂಡುಬಿಟ್ಟಿದೆ. ಈಗ ಬೆಳಿಗ್ಗೆಯಿಂದ ರಾತ್ರಿ ಮಲಗೋವರೆಗೂ ೧ ಕೇಜಿ ಔಷಧಿ ತಿನ್ನೋದೆ ಆಗ್ತಿದೆ. ಆಹಾರಕ್ಕಿಂತ ಔಷಧಿಗಳೇ ಜಾಸ್ತಿ ಆಗೋಗಿದೆ. ಏನು ಮಾಡಬೇಕೋ ದಿಕ್ಕೇ ತೋಚ್ತಾ ಇಲ್ಲ. ನೀನಾದ್ರೂ ದಾರಿ ತೋರ್ಸಯ್ಯಾ, ಪ್ರಕೃತಿ ದೇವರೇ. ನಿನಗೆ ಪುಣ್ಯ ಬರುತ್ತೆ.
ಪ್ರಕೃತಿ : ಅಲ್ಲಾಯ್ಯ, ನೀನು ಪ್ರಜಾವಾಣಿ, ವಿಜಯಕರ್ನಾಟಕ ಪೇಪರ್ ಗಳನ್ನ ಓದ್ತಾಇದೀಯ? ಅದರಲ್ಲಿ ಎರಡು ವರ್ಷದಿಂದ ಪ್ರತಿಯೊಬ್ಬರೂ ಆರೋಗ್ಯವನ್ನು ಹೇಗೆ ಕಾಪಾಡ್ಕೋಬೇಕು ಅಂತ ಬರೀತಾ ಇದಾರಲ್ಲ, ಅದನ್ನು ಓದಿದೀಯ? ಔಷಧಿಗಳ ಗೋಜೇ ಇಲ್ಲದೆ ಎಲ್ಲ ಕಾಯಿಲೆಗಳನ್ನು ನಾವು ಉಪಯೋಗಿಸುವ ಆಹಾರಗಳಲ್ಲೇ ಸರಿಮಾಡಬಹುದು ಎಂದು ಬರೀತಿದಾರಲ್ಲ! ಹಿಂದೆ ಯಾರೂ ಯಾವ ಪೇಪರ್ನೋರೂ ಹೀಗೆ ಜನಗಳಿಗೆ ಎಚ್ಚರಿಕೆ ಕೊಡ್ತಾಇರ್ಲಿಲ್ಲ. ಈಚೆಗೆ ಎಲ್ಲ ಪೇಪರ್ನೋರೂ ಜನಗಳಿಗೆ ತಿಳಿಸಿಕೊಡ್ತಾ ಇದಾರೆ.
ಮನುಷ್ಯ : ಏನಂತ ಇದೆ ಅದರಲ್ಲಿ! ಅಂಥಾ ವಿಶೇಷ ಏನು? ನಮ್ಮ ಆಹಾರದಲ್ಲೇ ಕಾಯಿಲೆ ವಾಸಿಮಾಡಬಹುದು ಅಂತ ಮತ್ತು ಅದು ಹೇಗೆ ಸಾಧ್ಯ ಡಾಕ್ಟರು ಗಳಿಗೆ ವಾಸಿಮಾಡೋಕೆ ಆಗದೇ ಇರುವುದು ಬರೀ ಆಹಾರದಲ್ಲೇ ಹೇಗೆ ವಾಸಿಯಾಗುತ್ತದೆ!
ಪ್ರಕೃತಿ : ಅಯ್ಯಾ, ಪೆದ್ದಪ್ಪ, ಈ ಇಡೀ ಜಗತ್ತಿನಲ್ಲಿ ಇರುವ ಕಾಯಿಲೆಗಳನ್ನೆಲ್ಲಾ ನಮ್ಮ ಆಹಾರಗಳಲ್ಲೇ ೧೦೦ ಕ್ಕೆ ೧೦೦ ರಷ್ಟು ವಾಸಿಮಾಡಬಹುದು ಕಣಯ್ಯಾ. ಅದೂ ಅಲ್ಲದೇ ಈಗ ನರಳುತ್ತಿರುವ ಕಾಯಿಲೆಗಳಿಂದ ಸಂಪೂರ್ಣವಾಗಿ ಬಿಡುಗಡೆ ಹೊಂದಿ ಇನ್ನು ಮುಂದೆಯೂ ಯಾವ ಕಾಯಿಲೆಯೂ ಬರದಂತೆ ನೋಡಿಕೊಳ್ಳಬಹುದು ಕಣಯ್ಯಾ.
ಮನುಷ್ಯ : ಅದು ಹೇಗೆ ನನಗೂ ತಿಳಿಸಿಕೊಡಯ್ಯಾ.
ಪ್ರಕೃತಿ : ಹಿಂದಿನ ಕಾಲದಲ್ಲಿ ಕೆಂಪು ಅಕ್ಕಿ ಅಂತ ಬೆಳೀತ ಇದ್ರು ಗೊತ್ತಾ? ಅಥವಾ ಕೊಟ್ಟಣದ ಅಕ್ಕಿ ಅಂತ ಕರೀತಾ ಇದ್ರು ಗೊತ್ತಾ? ಅದನ್ನ ತಿಂದು ಜನ ಎಷ್ಟು ಗಟ್ಟಿಮುಟ್ಟಾಗಿದ್ರು ಗೊತ್ತಾ? ಆಗೆಲ್ಲಾ ಈಗ ಬರುತ್ತಿರುವ ಕಾಯಿಲೆಗಳೆಲ್ಲ ಇತ್ತಾ? ಯೋಚನೆ ಮಾಡಿ ನೋಡು. ಇತ್ತೀಚಿನ ವರ್ಷಗಳಲ್ಲಿ ಪಾಲೀಶ್ ಮಾಡಿದ ಅಕ್ಕಿ ತಿಂದು ಈ ಕಾಯಿಲೆಗಳೆಲ್ಲ ಬಂದಿರುವುದು ಗೊತ್ತಾ? ಈ ಅಕ್ಕಿಯನ್ನು ಊಟಮಾಡುವವರಿಗೆ ಈ ಕಾಯಿಲೆಗಳೆಲ್ಲಾ ಸಾಮಾನ್ಯ. ಜೊತೆಗೆ ಈ ಅಕ್ಕಿಯನ್ನು ತಿನ್ನುವವರಿಗೆ ಆಸಿಡಿಟಿ, ಗ್ಯಾಸ್ಟ್ರ್ಐಟಿಸ್ ಎಂಬ ಕಾಯಿಲೆಗಳು ಹುಟ್ಟಿಕೊಳ್ಳುತ್ತವೆ. ಇದರಿಂದಲೇ ಬೇರೆಲ್ಲ ಕಾಯಿಲೆಗಳು ಹುಟ್ಟಿಕೊಳ್ಳುತ್ತವೆ.
ಗುರುವಾರ, ಮಾರ್ಚ್ 27, 2008
ದಣಿದ ದೇಹಕ್ಕೆ ತಂಪನೆ ಪಾನೀಯ
ಸೌತೆಕಾಯಿ ಜ್ಯೂಸ್:-
ಸಾಮಗ್ರಿ: ಒಂದು ಮಂಗಳೂರು ಸೌತೇಕಾಯಿ, ಎರಡು ಲೋಟ ನೀರು, ಒಂದು ಅಚ್ಚು ಬೆಲ್ಲ, ಚಿಟಿಕೆ ಏಲಕ್ಕಿ ಪುಡಿ।
ವಿಧಾನ: ಸೌತೇಕಾಯಿಯ ಸಿಪ್ಪೆ ಹಾಗೂ ತಿರುಳನ್ನು ತೆಗೆದೆಸೆದು ಉಳಿದ ಭಾಗವನ್ನು ಸಣ್ಣದಾಗಿ ಕತ್ತರಿಸಿ ರುಬ್ಬಿ ಅದಕ್ಕೆ ಅಗತ್ಯಕ್ಕೆ ತಕ್ಕಷ್ಟು ನೀರು, ಬೆಲ್ಲ, ಏಲಕ್ಕಿ ಪುಡಿ ಸೇರಿಸಿದರೆ ಜ್ಯೂಸ್ ಸಿದ್ಧ।
ಬೀಟ್ ರೂಟ್ ಜ್ಯೂಸ್:-
ಸಾಮಗ್ರಿ: ಒಂದು ಬೀಟ್ ರೂಟ್, ಅರ್ಧ ಅಚ್ಚು ಬೆಲ್ಲ, ನೀರು, ಅರ್ಧ ಚಮಚ ಏಲಕ್ಕಿ ಪುಡಿ।
ವಿಧಾನ: ಸಿಪ್ಪೆ ತೆಗೆದ ಬೀಟ್ ರೂಟನ್ನು ಸಣ್ಣದಾಗಿ ಹೆಚ್ಚಿ, ನುಣ್ಣಗೆ ರುಬ್ಬಿ ಶೋಧಿಸಿ। ಈ ರಸಕ್ಕೆ ಬೆಲ್ಲ ಮತ್ತು ಏಲಕ್ಕಿ ಪುಡಿ ಬೆರೆಸಿದರೆ
ಜ್ಯೂಸ್ ಸಿದ್ಧ.
ಸಾಮಗ್ರಿ: ಒಂದು ಮಂಗಳೂರು ಸೌತೇಕಾಯಿ, ಎರಡು ಲೋಟ ನೀರು, ಒಂದು ಅಚ್ಚು ಬೆಲ್ಲ, ಚಿಟಿಕೆ ಏಲಕ್ಕಿ ಪುಡಿ।
ವಿಧಾನ: ಸೌತೇಕಾಯಿಯ ಸಿಪ್ಪೆ ಹಾಗೂ ತಿರುಳನ್ನು ತೆಗೆದೆಸೆದು ಉಳಿದ ಭಾಗವನ್ನು ಸಣ್ಣದಾಗಿ ಕತ್ತರಿಸಿ ರುಬ್ಬಿ ಅದಕ್ಕೆ ಅಗತ್ಯಕ್ಕೆ ತಕ್ಕಷ್ಟು ನೀರು, ಬೆಲ್ಲ, ಏಲಕ್ಕಿ ಪುಡಿ ಸೇರಿಸಿದರೆ ಜ್ಯೂಸ್ ಸಿದ್ಧ।
ಬೀಟ್ ರೂಟ್ ಜ್ಯೂಸ್:-
ಸಾಮಗ್ರಿ: ಒಂದು ಬೀಟ್ ರೂಟ್, ಅರ್ಧ ಅಚ್ಚು ಬೆಲ್ಲ, ನೀರು, ಅರ್ಧ ಚಮಚ ಏಲಕ್ಕಿ ಪುಡಿ।
ವಿಧಾನ: ಸಿಪ್ಪೆ ತೆಗೆದ ಬೀಟ್ ರೂಟನ್ನು ಸಣ್ಣದಾಗಿ ಹೆಚ್ಚಿ, ನುಣ್ಣಗೆ ರುಬ್ಬಿ ಶೋಧಿಸಿ। ಈ ರಸಕ್ಕೆ ಬೆಲ್ಲ ಮತ್ತು ಏಲಕ್ಕಿ ಪುಡಿ ಬೆರೆಸಿದರೆ
ಜ್ಯೂಸ್ ಸಿದ್ಧ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
