ಭಾನುವಾರ, ಜೂನ್ 22, 2008

ಮನೆ ಮದ್ದು-ಮುಂದುವರಿದದ್ದು

ಮುಂದುವರೆದದ್ದು
ಕಫ ಮತ್ತು ಕೆಮ್ಮು: ಹಸಿ ಶುಂಠಿಯರಸ ಮತ್ತು ವೀಳ್ಯೆದೆಲೆಯರಸವನ್ನು ಒಟ್ಟುಗೂಡಿಸಿ ಅದರಲ್ಲಿ ಜೇನುತುಪ್ಪವನ್ನು ಬೆರೆಸಿ ತಿನ್ನಬೇಕು.
ಶೀಘ್ರ ವಾಸಿಯಾಗುತ್ತದೆ.
ಸ್ತನದಲ್ಲಿ ಹಾಲು ತುಂಬಿಕೊಂಡು ಊದಿಕೊಂಡರೆ: ಪೂರ್ಣ ಅರಳಿದ ಹಿಡಿಮಲ್ಲಿಗೆ ಹೂಗಳನ್ನು ಎರಡೂ ಸ್ತನಗಳ ಮೇಲೆ ಇಟ್ಟು ಕಟ್ಟಬೇಕು ಅಥವಾ
ಹಸಿ ವೀಳ್ಯೆದೆಲೆ ಕಟ್ಟಿದರೂ ನಡೆಯುತ್ತದೆ.
ಅಜೀರ್ಣವಾದಾಗ: 1)-ಸ್ವಲ್ಪ ಓಮಕಾಳು(ಅಜವಾನ) ಸೇವಿಸಿ ಅಥವಾ ಅದರ ಕಷಾಯವನ್ನು ಕುಡಿಯಬೇಕು.
2)-ನೀರಿಗೆ ಒಂದು ಟೀ ಚಮಚ ನಿಂಬೆರಸ ಮತ್ತು ಒಂದು ಚಿಟಿಕೆ ಅಡುಗೆ ಸೋಡ ಬೆರೆಸಿ ಸೇವಿಸಿ.
ವಾಂತಿಯಾದಾಗ: ನಿಂಬೆಹಣ್ಣನ್ನು ಅರ್ಧ ಹೆಚ್ಚಿ ಅರ್ಧ ಹೋಳಿನಲ್ಲಿ ಸಕ್ಕರೆ ಹಾಕಿ ಕಾಯಿಸಿ ಸೇವಿಸಬೇಕು.
ಗಂಟಲು ನೋವು: ಸ್ವಲ್ಪ ತಿನ್ನುವ ಸುಣ್ಣಕ್ಕೆ ಅಷ್ಟೇ ಪ್ರಮಾಣದಲ್ಲಿ ಜೇನುತುಪ್ಪವನ್ನು ಸೇರಿಸಿ ಚೆನ್ನಾಗಿ ಕದಡಬೇಕು. ಅದನ್ನು ಗಂಟಲಿನ ಹೊರಭಾಗಕ್ಕೆ ಚೆನ್ನಾಗಿ ಲೇಪಿಸಬೇಕು.

ಶನಿವಾರ, ಜೂನ್ 21, 2008

ಮನೆ ಮದ್ದು-1

ಮನೆ ಮದ್ದು-1
ಹೊಟ್ಟೆನೋವಿಗೆ: ಬೆಲ್ಲದಲ್ಲಿ ಕಾಳುಮೆಣಸಿನಪುಡಿ ಬೆರೆಸಿ ಸೇವಿಸಿದರೆ ನೋವು ಶಮನವಾಗುತ್ತದೆ
ಒಣಕೆಮ್ಮು: ಬೆಲ್ಲದಲ್ಲಿ ಅರಿಶಿಣಪುಡಿ ಸೇರಿಸಿ ಸೇವಿಸಿದರೆ ಒಣಕೆಮ್ಮು ನಿವಾರಣೆಯಾಗಿ ಗಂಟಲಿಗೆ ಹಿತವಾಗಿರುತ್ತದೆ.

ಮಂಗಳವಾರ, ಜೂನ್ 10, 2008

ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿ

09-6-2008 ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿ

ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿಯನ್ನೇ ಯಾವಾಗಲೂ ಊಟಕ್ಕೆ ಉಪಯೋಗಿಸಿ ಆನಂದವನ್ನು ಪಡೆಯಿರಿ. ಈ ಅಕ್ಕಿಗೆ ಆಡು ಭಾಷೆಯಲ್ಲಿ ಕೆಂಪು ಮುಂಡಗ ಅಕ್ಕಿ ಅಥವಾ ಕಜ್ಜಾಯ ಅಕ್ಕಿ ಎಂದೂ ಕರೆಯುತ್ತಾರೆ. ಈ ಅಕ್ಕಿಯಲ್ಲಿ ಬೇಕಾದಷ್ಟು ಪೌಷ್ಟಿಕಾಂಶಗಳು ಇವೆ. ಹೊರಗಡೆ ಯಾವುದೇ ಅಂಗಡಿಯಲ್ಲಿ ಇದು ದೊರಕುವಂತಾದ್ದಲ್ಲ. ಕೋಟಿ ರೂಪಾಯಿಗಳನ್ನು ಕೊಟ್ಟರೂ ಸಿಗುವುದಿಲ್ಲ. ಊಟ ಮಾಡುತ್ತಿರುವಾಗಲೇ ಈ ಪೌಷ್ಟಿಕಾಂಶಗಳು ದೇಹದಲ್ಲಿರುವ ಎಲ್ಲ ಕಸಕಡ್ಡಿಗಳನ್ನೂ, ಅತಿಯಾದ ವಾತ ಪಿತ್ತ ಕಫಗಳನ್ನೂ, ಯಾವುದೇ ರೀತಿಯ ಬೆನ್ನುನೋವು, ತಲೆನೋವು, ಸೊಂಟನೋವು, ಕಾಲುನೋವು, ತಲೆಭಾರ, ನಿದ್ರೆ ಸರಿಯಾಗಿ ಬಾರದಿರುವುದು, ಕೊಲೆಸ್ಟರಾಲನ್ನು ಪೂರ್ತಿಯಾಗಿ ಕರಗಿಸುವುದು. ಮುಂದೆ ಎಂದೆಂದಿಗೂ ಕೊಲೆಸ್ಟರಾಲ್ ದೇಹದಲ್ಲಿ ಸೇರಲು ಅವಕಾಶ ಕೊಡುವುದಿಲ್ಲ, ಬ್ಲಡ್ ಶುಗರನ್ನು ೧೦೦ ಕ್ಕೆ ೧೦೦ ರಷ್ಟು ಕಡಿಮೆಮಾಡುವುದು. ಇದನ್ನೆಲ್ಲ ವಿಜ್ನಾನಿಗಳು ದೃಡಪಡಿಸಿದ್ದಾರೆ. ಮನೆಯಲ್ಲಿ ಪಿ.ಸಿ. ಇದ್ದು ಇಂಟರ್ನೆಟ್ ಹಾಕಿಸಿಕೊಂಡಿರುವವರು ಗೂಗಲ್ ನಲ್ಲಿ ಜಾಲಾಡಿನೋಡಿ. ಈ ಕಜ್ಜಾಯ ಅಕ್ಕಿಗೆ ೧೦೦ ಕ್ಕೆ ೧೦೦ ರಷ್ಟು ಕ್ಯಾನ್ಸರ್ ವಾಸಿಮಾಡುವ ಶಕ್ತಿ ಇದೆ.

ಇದಲ್ಲದೆ ಆಸಿಡಿಟಿ, ಗ್ಯಾಸ್ಟ್ರೈಟಿಸ್, ಬೊಜ್ಜು ಈ ಎಲ್ಲವೂ ೧೦೦% ವಾಸಿಯಾಗುತ್ತದೆ. ಇದಲ್ಲದೇ ಮುಖವೂ ಕಾಂತಿಯುಕ್ತವಾಗುತ್ತದೆ. ಕಣ್ಣುಗಳು ಮಿನುಗುತ್ತವೆ. ಚಟುವಟಿಕೆ ಜಾಸ್ತಿಯಾಗುತ್ತದೆ. ಊಟ ಮಾಡಿದ ತಕ್ಷಣ ಹೊಟ್ಟೆ ಭಾರವಾಗುವುದಿಲ್ಲ. ಬ್ಲೋಟಿಂಗ್ ಅನುಭವ ಇರುವುದಿಲ್ಲ. ಹೊಟ್ಟೆಯಲ್ಲಿ ಸಂಕಟವಾಗುವುದೂ ನಿಂತುಹೋಗುತ್ತದೆ. ಹೊಟ್ಟೆ ಯಾವಾಗಲೂ ತಂಪಾಗಿರುತ್ತದೆ. ಮಲಬದ್ದತೆ ನಿರ್ನಾಮವಾಗಿ ದೊಡ್ಡಕರುಳಿನಲ್ಲಿ ಕಟ್ಟಿಕೊಂಡಿರುವ ಅತ್ಯಂತ ಕಟ್ಟಕಡೆ ಪಾಚಿಯೂ ಸಹ ಕೊಚ್ಚಿಕೊಂಡು ಹೋಗುತ್ತದೆ. ಮಲವಿಸರ್ಜನೆಯ ಬಳಿಕ ದೇಹ ಮತ್ತು ಮನಸ್ಸು ಆನಂದಮಯವಾಗುತ್ತದೆ. ಪ್ರತಿದಿನ ಮಲವಿಸರ್ಜನೆಯ ನಂತರ ದೇಹ ಮತ್ತು ಮನಸ್ಸು ಹಗುರವಾಗಿ ಚಟುವಟಿಕೆಯಿಂದ ಕೂಡಿರುತ್ತದೆ. ಕೆಂಪು ಅಕ್ಕಿಯಲ್ಲಿರುವ ಅತ್ಯಂತ ಶಕ್ತಿ ಬೇರೆ ಯಾವುದೇ ಇಲ್ಲ ಎಂದು ಕಾಣಿಸುತ್ತದೆ. ಎಲ್ಲ ಧಾನ್ಯಗಳಿಗೂ ತನ್ನದೇ ಆದ ಶಕ್ತಿ ಇರುತ್ತದೆ. ಎಲ್ಲಾ ಕಾಲಕ್ಕೂ ಹೊಟ್ಟಿನಿಂದ ಕೂಡಿದ ಕೆಂಪು ಅಕ್ಕಿಯೇ ಸರ್ವಶ್ರೇಷ್ಟ ವಾದುದು.

ಬರೆದವರು : ಹೆಚ್.ಕೆ.ಸತ್ಯಪ್ರಕಾಶ್
೯೮೮೬೩ ೩೪೬೬೭
ಇ-ಮೈಲ್: ಎಸ್ಪಿ೧೯೩೯@ಜಿಮೈಲ್.kaaM

ಭಾನುವಾರ, ಏಪ್ರಿಲ್ 27, 2008

ಬೇಸಿಗೆಯ ಆರೋಗ್ಯಕರ ಪಾನೀಯಗಳು

ಸಿಹಿ ಲಸ್ಸಿ:
ಸಿಹಿ ಮೊಸರಿಗೆ ಕಲ್ಲುಸಕ್ಕರೆ ಬೆರೆಸಿ ಮಿಕ್ಸರ್ ನಲ್ಲಿ ತಿರುವಿ ಲಸ್ಸಿ ತಯಾರಿಸಬೇಕು.

ಕಬ್ಬಿನ ಹಾಲು :
ಇದಕ್ಕೆ ನಿಂಬೆರಸ ಬೆರೆಸಿ ಸೇವಿಸಬೇಕು. ಇದು ಬೇಸಿಗೆಯಲ್ಲಿ ಮಾತ್ರ. ಬೇರೆ ಕಾಲಗಳಲ್ಲಿ
ಬರೀ ಕಬ್ಬಿನ ರಸ ಸೇವಿಸಬೇಕು. ಅದಕ್ಕೆ ಸಕ್ಕರೆ, ಬೆಲ್ಲ, ಜೇನುತುಪ್ಪ ಇತ್ಯಾದಿಗಳನ್ನು ಬೆರೆಸಬಾರಾದು.

ಕಲ್ಲಂಗಡಿ ಜ್ಯೂಸ್:
ಕಲ್ಲಂಗಡಿ ಹಣ್ಣಿನ ತಿರುಳಿಗೆ ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಕಾಳುಮೆಣಸಿನಪುಡಿ ಬೆರೆಸಿ ಮಿಕ್ಸಿ ಯಲ್ಲಿ ತಿರುವಬೇಕು.

ರಾಗಿ ಪಾನೀಯ:
ಮೊಳಕೆ ಬರಿಸಿದ ರಾಗಿ ರುಬ್ಬಿ ಸೋಸಿ, ಅದಕ್ಕೆ ಬೆಲ್ಲ ಹಾಕಿ ತಣ್ಣಗೆ ಅಥವಾ ಬಿಸಿ ಮಾಡಿ ಸೇವಿಸಬಹುದು.

ಟೊಮೇಟೋ ಪಾನೀಯ:
ಮೂರು ಟೋಮೇಟೋಗಳನ್ನು ಹೆಚ್ಚಿ ರುಬ್ಬಿ, ಅದಕ್ಕೆ ಕಿತ್ತಳೆ, ನಿಂಬೆ ಅಥವಾ ಮೋಸಂಬಿ ರಸ ಬೆರೆಸಿ.

ಹೆಸರಿನ ಪೇಯ:
ಹೆಸರು ಕಾಳನ್ನು ಹುರಿದು ಪುಡಿ ಮಾಡಿ, ನೀರು ಹಾಗೂ ಬೆಲ್ಲ ಸೇರಿಸಿ ಸೇವಿಸಿ.

ಕಿತ್ತಳೆ ಲಸ್ಸಿ:
ಸಿಹಿ ಮೊಸರು ೧ ಕಪ್, ಕಿತ್ತಳೆ ರಸ ೧ ಕಪ್, ಸ್ವಲ್ಪ ಸಕ್ಕರೆ ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ ಕುಡಿಯಿರಿ.

ರಸಾಯನ: ಸಿಹಿ ಮಾವಿನಹಣ್ಣನ್ನು ಕತ್ತರಿಸಿ ಸಕ್ಕರೆ ಜೊತೆ ಬೆರೆಸಿ ಮಿಕ್ಸರ್ ನಲ್ಲಿ ರುಬ್ಬಿ ನೀರಿನ ಬದಲು ಹಾಲು ಬೆರೆಸಿದರೆ ಮಾವಿನ ರಸಾಯನ ಅಥವಾ ಮಿಲ್ಕ್ ಶೇಕ್ ಸಿದ್ಧ. ಮಾವಿನ ಹಣ್ಣಿನ ಬದಲು ಬಾಳೆಹಣ್ಣಿನಿಂದಲೂ ತಯಾರಿಸಬಹುದು.

ಎಳ್ಳಿನ ನೀರು:
ಬಿಳಿ ಎಳ್ಳನ್ನು ಹುರಿದು ಪುಡಿ ಮಾಡಿ ಅದಕ್ಕೆ ನೀರು, ಬೆಲ್ಲ, ಚಿಟಿಕೆ ಏಲಕ್ಕಿ ಪುಡಿ ಬೆರೆಸಬೇಕು.

ಈ ಮೇಲಿನ ಪಾನೀಯಗಳು ದೇಹವನ್ನು ತಂಪಾಗಿಡುತ್ತವೆ. ಬಾಯಾರಿಕೆ, ಸುಸ್ತು ನೀಗಿಸುತ್ತದೆ. ಅಗತ್ಯ ಪೋಷಕಾಂಶಗಳು, ನೀರಿನ ಅಂಶವನ್ನು ದೇಹಕ್ಕೆ ಪೂರೈಸುತ್ತದೆ.

ಶುಕ್ರವಾರ, ಏಪ್ರಿಲ್ 25, 2008

ಬೇಸಿಗೆ ಕಾಲದಲ್ಲಿ ಆಹಾರ

ಪ್ರಕೃತಿಯಲ್ಲಿ ಕಾಲಗಳು ಬದಲಾವಣೆ ಆಗುತ್ತಿರುತ್ತವೆ. ಅದರಲ್ಲೂ ಈ ಬೇಸಿಗೆ ಕಾಲ ಅನ್ನುವುದು ಬಹಳ ತಾಪವನ್ನುಂಟು ಮಾಡುವಂತಾದ್ದು.
ಈ ಬೇಸಿಗೆಯಲ್ಲಿ ನಾವುಗಳು ಆಹಾರದಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ಬೇಸಿಗೆಯಲ್ಲಿ ಸೂರ್ಯನ ತಾಪದಿಂದಾಗಿ ದೇಹ ಬಳಲುತ್ತದೆ. ದೇಹದಲ್ಲಿ ನೀರಿನ ಅಂಶ ಕಡಿಮೆಯಾಗುತ್ತದೆ. ಶಕ್ತಿ ಕುಂದುತ್ತದೆ. ಜೀರ್ಣಶಕ್ತಿ ಕಡಿಮೆಯಾಗುತ್ತದೆ. ಹಾಗಾಗಿ ದೇಹ ತಂಪು ಮಾಡುವ, ಜಲ ಅಂಶ ಹೆಚ್ಚು ಇರುವ ಆಹಾರ, ಜ್ಯೂಸ್ ಗಳನ್ನು ಸೇವಿಸಬೇಕು. ಅವು ಜೀರ್ಣಕ್ರಿಯೆಗೂ ಸಹಕಾರಿಯಾಗುವಂತೆ ಇರಬೇಕು. ಉಷ್ಣದ ಪಾನೀಯಗಳನ್ನು ಸೇವಿಸಕೂಡದು. ಉಪ್ಪು, ಹುಳಿ, ಖಾರರಸಗಳುಳ್ಳ ಸಾಧ್ಯವಾದಷ್ಟೂ ಕಡಿಮೆ ಮಾಡಬೇಕು. ಎಣ್ಣೆಯಲ್ಲಿ ಕರಿದ ತಿಂಡಿಗಳಿಂದ ದೂರವಿರಬೇಕು. ಮೈದಾ ಹಿಟ್ಟಿನಿಂದ ತಯಾರಿಸಿದ ಸಿಹಿ ಮತ್ತು ಖಾರದ ತಿಂಡಿಗಳನ್ನು ಸೇವಿಸಲೇಬಾರದು.
ಬೇಸಿಗೆಯಲ್ಲಿ ಆರೋಗ್ಯಕರ ಪಾನೀಯಗಳು:
೧)-ದ್ರಾಕ್ಷಿ ಜ್ಯೂಸ್: ಒಣ ದ್ರಾಕ್ಷಿ ಹಾಗೂ ಒಂದು ಕಪ್ನಷ್ಟು ಹಸಿ ದ್ರಾಕ್ಷಿ ಬೆರೆಸಿ ರುಬ್ಬಿ ಜ್ಯೂಸ್ ತಯಾರಿಸಬೇಕು. ಒಣ ದ್ರಾಕ್ಷಿ ಸಿಹಿಯಾಗಿರುವುದರಿಂದ ಜ್ಯೂಸ್ ಗೆ ಸಕ್ಕರೆ ಬೆರೆಸುವ ಅಗತ್ಯವಿಲ್ಲ. ಯಾವುದೇ ಹಣ್ಣಿನ ಪಾನೀಯಕ್ಕೂ ಸಕ್ಕರೆ ಬೆರೆಸಬೇಡಿ. ಬೇಕಿದ್ದರೆ ಜೇನುತುಪ್ಪ ಬೆರೆಸಿ ಕುಡಿಯಿರಿ.
..................................................................ಮುಂದುವರೆಯುವುದು

ಗುರುವಾರ, ಏಪ್ರಿಲ್ 24, 2008

ಕೂದಲು ಉದುರುವುದು

ಕೂದಲು ಉದುರುವುದಕ್ಕೆ ಶಕ್ತಿಹೀನತೆಯೇ ಮುಖ್ಯ ಕಾರಣ. ಪೋಷಕಾಂಶಗಳ ಅಭಾವದಿಂದ ಶಕ್ತಿಯ ಕೊರತೆಯುಂಟಾಗುವುದರಿಂದ ಇಳಿ ವಯಸ್ಸಿನಲ್ಲಿ ಹೆಚ್ಚು ಹೆಚ್ಚಾಗಿ ಕೂದಲು ಉದುರುವುದು. ಆದುದರಿಂದ ಉತ್ತಮ ಪೋಷಕಾಂಶಗಳುಳ್ಳ ಆಹಾರ ಜೀರ್ಣಿಸಿಕೊಳ್ಳುವ ಸಾಮರ್ಥ್ಯವಿದ್ದಲ್ಲಿ ಕೂದಲು ಉದುರುವಿಕೆ ಅಷ್ಟಾಗಿ ಕಂಡುಬರುವುದಿಲ್ಲ. ಕೂದಲು ಉದುರುವುದನ್ನು ತಡೆಗಟ್ಟಬೇಕಾದರೆ ಮಾಂಸ, ಮೀನು, ಹಾಲು, ಬೆಣ್ಣೆ, ತುಪ್ಪ, ಮೊಳೆತ ಕಡಲೆಕಾಳು, ಮೊಳೆತ ಹೆಸರುಕಾಳು ಕ್ರಮವಾಗಿ ಸೇವಿಸಬೇಕು. ಕರಿದ ತಿಂಡಿ, ತಿನಸುಗಳನ್ನು ಸಂಪೂರ್ಣವಾಗಿ ತ್ಯಜಿಸಬೇಕು. ಕೋಪ, ವ್ಯಥೆ, ನಿರೀಕ್ಷೆ, ಕುತೂಹಲ, ಭಯ, ಚಿಂತೆ ಮತ್ತಿತರ ಕಾರಣಗಳಿಂದ ಮನಸ್ಸು ಕೆರಳದಂತೆ ಎಚ್ಚರಿಕೆ ವಹಿಸಬೇಕು. ನಿದ್ದೆ ಕೆಡುವುದು, ಅತಿಯಾದ ಲೈಂಗಿಕ ಸಂಭೋಗ, ಮಲಮೂತ್ರಗಳ ಒತ್ತಡ ತಡೆಹಿಡಿಯುವುದು ಸಾಧುವಲ್ಲ. ಪ್ರತಿದಿನವೂ ತಲೆಗೆ ತಣ್ಣೀರಿನ ತುಂತುರು ಸ್ನಾನ ಮಾಡುವ ಅಭ್ಯಾಸವಿಟ್ಟುಕೊಳ್ಳಬೇಕು. ಇದಿಷ್ಟೂ ಎಚ್ಚರಿಕೆಯ ಕ್ರಮಗಳನ್ನು ಅನುಸರಿಸುವುದೇ ಅಲ್ಲದೆ, ಪ್ರತಿದಿನ ತಲೆಕೂದಲಿಗೆ ಎಳ್ಳೆಣ್ಣೆ ಅಥವಾ ಅಪ್ಪಟ ಕೊಬ್ಬರಿ ಎಣ್ಣೆ ಹಚ್ಚಿ ಬಾಚುತ್ತಿರಬೇಕು. ವಾರಕ್ಕೊಮ್ಮೆ ಅಭ್ಯಂಜನ ಸ್ನಾನ ಮಾಡಲು ಮರೆಯಬಾರದು. ಈ ಕ್ರಮ ಅನುಸರಿಸುವುದರಿಂದ ಕೂದಲು ಉದುರುವುದನ್ನು ಹಾಗೂ ತಲೆಯಲ್ಲಿ ಹೊಟ್ಟು ಏಳುವುದನ್ನು ಬಹುಮಟ್ಟಿಗೆ ನಿವಾರಿಸಬಹುದು.
ಮನೆ ಮದ್ದು:
೧)-ಸುಮಾರು ೧೦೦ ಗ್ರಾಂ ಕೊಬ್ಬರಿ ಎಣ್ಣೆಗೆ ಒಂದು ಟೀ ಚಮಚ ನಿಂಬೆರಸ ಹಿಂಡಿ. ನಂತರ, ಆ ಎಣ್ಣೆಯೊಂದಿಗೆ ಅಷ್ಟೇ ಪ್ರಮಾಣ ಸುಣ್ಣದ ತಿಳಿ ಮಿಶ್ರ ಮಾಡಿ ಚೆನ್ನಾಗಿ ಕುಲುಕಿ. ಈ ಮಿಶ್ರಣವನ್ನು ಪ್ರತಿದಿನವೂ ಕೂದಲಿಗೆ ಹಚ್ಚುವ ಅಭ್ಯಾಸವಿಟ್ಟುಕೊಳ್ಳಿ.
೨)-ರಾತ್ರಿ ಮಲಗುವುದಕ್ಕಿಂತ ಮುಂಚೆ ಉಗುರು ಬೆಚ್ಚಗಿನ ಕೊಬ್ಬರಿ ಎಣ್ಣೆಯನ್ನು ತಲೆಬುರುಡೆಗೆ ಹಚ್ಚಿ ಚೆನ್ನಾಗಿ ತಿಕ್ಕಿ, ಮರುದಿನ ಬೆಳಿಗ್ಗೆ ತಲೆಗೆ ಸ್ನಾನ ಮಾಡಿ. ವಾರಕ್ಕೆ ಎರಡು ಬಾರಿ ಈ ಕ್ರಮ ಅನುಸರಿಸಿ.
೩)-ಕೂದಲಿನ ಬುಡಕ್ಕೆ ನಿಂಬೆ ರಸ ಹಚ್ಚಿ ಚೆನ್ನಾಗಿ ತಿಕ್ಕಿ. ಅರ್ಧ ಗಂಟೆಯ ನಂತರ ತಣ್ಣೀರಿನಿಂದ ತಲೆ ತೊಳೆಯಿರಿ.
೪)-ಮೆಂತ್ಯವನ್ನು ತಂಗಿನ ಹಾಲಿನೊಂದಿಗೆ ನುಣ್ಣಗೆ ಅರೆಯಿರಿ. ಈ ಸರಿಯನ್ನು ತಲೆಗೆ ಹಚ್ಚಿ ಚೆನ್ನಾಗಿ ತಿಕ್ಕಿ. ಅರ್ಧ ಗಂಟೆಯ ನಂತರ ತಣ್ಣೀರಿನಿಂದ ತಲೆ ತೊಳೆಯಿರಿ.
೫)-ವಾರಕ್ಕೊಮ್ಮೆ ಬೇವಿನ ಎಲೆಗಳ ಕಷಾಯದಿಂದ ತಲೆ ತೊಳೆಯಿರಿ.

ಮಂಗಳವಾರ, ಏಪ್ರಿಲ್ 8, 2008

ಫಿಸಿಯೋ ಥೆರಪಿ




ಹನುಮಂತನಗರದ ೫೦ ಅಡಿ ರಸ್ತೆಯಲ್ಲಿರುವ "ಸುಹಾಸ್ ಡಯಾಗ್ನೋಸ್ಟಿಕ್ ಸೆಂಟರ್" ನಲ್ಲಿ ಇತ್ತೀಚೆಗೆ ಫಿಸಿಯೋ ಥೆರಪಿ ಆರಂಭವಾಗಿದೆ.
ದಯವಿಟ್ಟು ಈ ಸ್ಥಳಕ್ಕೆ ಹತ್ತಿರವಾಗಿರುವವರು ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಿರಿ
ಸುಹಾಸ್ ಡಯಾಗ್ನೋಸ್ಟಿಕ್ ಸೆಂಟರ್,
೫೪೮/ಏ, ೫೦ ಅಡಿ ರಸ್ತೆ, ಹನುಮಂತನಗರ, ಬೆಂಗಳೂರು-೫೬೦೦೫೦
ಫೋನ್: ೨೨೪೨ ೮೫೦೩, ೨೫೯೨ ೮೩೯೭, ೨೬೬೦ ೮೪೭೩